ಕೊಳ್ಳೇಗಾಲ: ರೈತರ ಬೇಡಿಕೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರ ನೇತೃತ್ವದಲ್ಲಿ ಡಿಎಫ್ಒ ಕಚೇರಿಗೆ ದಿಗ್ಬಂಧನ ಹಾಕಿ ಸಿಬ್ಬಂದಿಗಳನ್ನು ಹೊರ ಹೋಗದಂತೆ ತಡೆಯೊಡ್ಡಲಾಯಿತು.
ಈ ವಿಚಾರ ತಿಳಿದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಸ್ಥಳಕ್ಕೆ ಆಗಮಿಸಿ, ಮುಖ್ಯಮಂತ್ರಿಗಳು ಡಿ.೧೨ರಂದು ಮ.ಬೆಟ್ಟಕ್ಕೆ ಬರುತ್ತಿರುವುದರಿಂದ ಅಲ್ಲಿ ರೈತ ಸಂಘದ ಮುಖಂಡರಿಗೆ ಬೇಡಿಕೆಗಳ ಬಗ್ಗೆ ಚರ್ಚಿಸಲು ಕಾಲಾವಕಾಶ ಮಾಡಿಕೊಡುವುದಾಗಿ ತಿಳಿಸಿದರು. ನಂತರ ರೈತರು ದಿಗ್ಬಂಧನ ತೆರವುಗೊಳಿಸಿದರು. ಬಳಿಕ ಕಚೇರಿಯ ಸಿಬ್ಬಂದಿ ಹೊರಹೋಗಲು ಅವಕಾಶ ಕಲ್ಪಿಸಲಾಯಿತು.
ಆದರೆ ಹೋರಾಟವನ್ನು ಮುಂದುವರಿಸುವುದಾಗಿ ಬಡಗಲಪುರ ನಾಗೇಂದ್ರ ಅವರು ತಿಳಿಸಿದ್ದು, ಮುಖ್ಯಮಂತ್ರಿಯ ಭೇಟಿಯ ನಂತರ ಚಳವಳಿ ಮುಂದುವರಿಸಬೇಕೋ ಅಥವಾ ಮುಕ್ತಾಯಗೊಳಿಸಬೇಕೋ ಎಂಬುದನ್ನು ಆನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಹೇಶ್ ಪ್ರಭು, ಮೈಸೂರು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಹನೂರು ಮುಖಂಡ ಮುಜಾಮಿಲ್ ಪಾಷ, ತಾಲ್ಲೂಕು ರೈತ ಮುಖಂಡರು ಶೈಲೇಂದ್ರ, ಮಧುವನಹಳ್ಳಿ ಬಸವರಾಜಪ್ಪ, ಭಾಸ್ಕರ, ಅರೇಪಾಳ್ಯ ನಾಗರಾಜು,ಜೋಯಲ್ ನಿವಾಸ ಇತರರು ಹಾಜರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…