ಜಿಲ್ಲೆಗಳು

ಸಿಂಧೂರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಧರಣಿ : ಮಂಜೇಗೌಡ

ಮೈಸೂರು: ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಸರ್ಕಾರಿ ನಿಯಮಗಳನ್ನು ಪದೇಪದೇ ಉಲ್ಲಂಘಿಸುತ್ತಿದ್ದರೂ ಕೂಡ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಆಕೆಯ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬೆಂಗಳೂರಿನ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸುವುದಾಗಿ ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಹೇಳಿದರು.

ಶುಕ್ರವಾರ ನಗರದ ಪತ್ರಕರ್ತರ ಭವನದಲ್ಲಿ ಏರ್ಪಡಿಸಲಾಗಿದ್ದ ಸುದ್ದಿಘೋಷ್ಟಿುಂಲ್ಲಿ ಮಾತನಾಡಿದ ಅವರು, ರೋಹಿಣಿ ಸಿಂಧೂರಿ ಅವರು ಸರ್ಕಾರ ಅಧೀಕನದಲ್ಲಿರುವ ಸಾರ್ವಜನಿಕರ ಸೇವಕರು. ಈ ವಿಚಾರವನ್ನು ಮರೆತಂತಿರುವ ಅವರು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರುವಂತೆ ನಡೆದುಕೊಳ್ಳುತ್ತಿದ್ದಾರೆ. ಇಷ್ಟಾದರೂ ಸರ್ಕಾರ ಅವರ ವಿಚಾರದಲ್ಲಿ ದಿವ್ಯ ಮೌನಕ್ಕೆ ಶರಣಾಗಿರುವುದು ಏಕೆ ಎಂಬುದು ತಳಿಯುತ್ತಿಲ್ಲ ಎಂದರು.

ಪಾರಂಪರಿಕ ಕಟ್ಟಡವಾದ ಜಿಲ್ಲಾಧಿಕಾರಿ ನಿವಾಸದ ಆವರಣದಲ್ಲಿ ಈಜು ಕೊಳ ನಿರ್ಮಾಣ ಮಾಡಿರುವುದು ತಪ್ಪು ಎಂದು ವರದಿ ತಿಳಿಸಿದೆ. ತನಿಖೆ ನಡೆಸಿದ ಅಧಿಕಾರಿಗಳು ಸರ್ಕಾರಕ್ಕೆ ವರದಿ ನೀಡಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆಯಲು ಧರಣಿ ನಡೆಸುವುದಾಗಿ ಹೇಳಿದರು.

ಸಿಂದೂರಿ ಅವರು ಈಗ ಧಾರ್ಮಿಕ ದತ್ತಿ ಇಲಾಖೆಯಲ್ಲಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಲ್ಲಿ ಕೂಡ ಅವರು ತಮ್ಮ ದರ್ಬಾರನ್ನು ಮುಂದುವರಿಸಿದ್ದಾರೆ. ಇಲಾಖೆಯ ವ್ಯಾಪ್ತಿಗೆ ಬರುವ ಎ ಮತ್ತು ಬಿ ದರ್ಜೆಯ ದೇವಾಲಯಗಳ ಹಣಕಾಸು ಲೆಕ್ಕ ಪರಿಶೋಧನೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸಿ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು.

ಸರ್ಕಾರದ ಯಾವುದೇ ಇಲಾಖೆಯಲ್ಲಿನ ಲೆಕ್ಕಪತ್ರಗಳ ಪರಿಶೀಲನೆ ಸ್ಟೇಟ್ ಅಕೌಂಟಕ್ ಮೂಲಕವೇ ನಡೆಯಬೇಕು. ಆದರೆ, ಸಿಂಧೂರಿ ಅವರು ಕಮನಿಷನ್ ಆಸೆಗಾಗಿ ಲೆಕ್ಕ ಪರಿಶೋಧನೆಯನ್ನು ಖಾಸಗಿ ಸಂಸ್ಥೆಗೆ ವಹಿಸಿದ್ದಾರೆ. ಈ ಕುರಿತು ಸರ್ಕಾರ ಗಮನಹರಿಸಬೇಕು ಎಂದರು.

ಇನ್ನು ತಿರುಪತಿಯಲ್ಲಿ ೪೫೮ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಟ್ಟಡ ನೀಲಿನಕ್ಷೆ ಸಿದ್ಧಪಡಿಸಲು ತನ್ನ ಪತಿಯ ಒಡೆತನದ ಸಂಸ್ಥೆಗೆ ಗುತ್ತಿಗೆ ನೀಡಿದ್ದಾರೆ. ಇದಕ್ಕಾಗಿ ೧೦ ಕೋಟಿ ರೂ. ಹಣವನ್ನು ನೀಡಿದ್ದಾರೆ. ಜನರ ತೆರಿಗೆ ಹಣವನ್ನು ಈರೀತಿ ಪೋಲು ಮಾಡುತ್ತಿದ್ದರು. ಸಂಬಂದಪಟ್ಟವರು ಆಕೆಯನ್ನು ಎಚ್ಚರಿಸುವ ಕೆಲಸವನ್ನೂ ಮಾಡಿಲ್ಲ ಎಂದು ಕಿಡಿಕಾರಿದರು.

ಯಾವುದೇ ಅಧಿಖಾರಿಯಾದರೂ ಕೂಡ ಕಚೇರಿಗೆ ಬಂದು ಕೆಲಸ ನಿರ್ವಹಿಸಬೇಕು. ಆದರೆ, ಸಿಂಧೂರಿ ಅವರು ವಾರದಲ್ಲಿ ಮೂರು ದಿನವೂ ಕಚೇರಿಗೆ ಬರುವುದಿಲ್ಲ. ಮನೆಯಲ್ಲಿ ಕುಳಿತೇ ಎಲ್ಲವನ್ನೂ ನಿರ್ವಹಿಸುತ್ತಾರೆ. ಅವರ ಕಚೇರಿಯ ಮುಂಭಾಗ ಅಳವಡಿಸಿರುವ ಸಿಸಿಟಿವಿ ಪರಿಶೀಲಿಸಿದಲ್ಲಿ ಆಕೆ ತಿಂಗಳಲ್ಲಿ ಎಷ್ಟು ದಿನ ಕೆಲಸಕ್ಕೆ ಬಂದಿದ್ದಾರೆ ಎಂದು ಗೊತ್ತಾಗುತ್ತದೆ ಎಂದರು.

ಇನ್ನು ಮೈಸೂರಿನಲ್ಲಿ ಜಿಲ್ಲಾಧಿಕಾರಿಗಳಾಗಿದ್ದ ವೇಳೆ ಕೆಲ ದಿನಗಳಕಾಲ ಎಟಿಐ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿದ್ದರು. ಅಲ್ಲಿಂದ ಪಾಪಸ್ಸಾಗುವಾಗ ಬೆಲೆಬಾಳುವ ಪೀಠೋಪಕರಣಗನ್ನು ಜೊತೆಗೆ ಕೊಂಡೊಯ್ದಿದ್ದಾರೆ ಎಂಬ ಆರೋಪವಿದೆ. ಈ ಸಂಬಂಧ ಸಾಕಷ್ಟು ಪತ್ರ ವ್ಯವಹಾರ ನಡೆದಿದೆ. ಈ ಸಂಬಂದ ಸೂಕ್ತ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ಗ್ರಾ.ಪಂ ಸದಸ್ಯ ಶಿವಕುಮಾರ್, ಶ್ರೀನಿವಾಸ್, ದಿನೇಶ್ ಪತ್ರಿಕಾಘೋಷ್ಟಿಯಲ್ಲಿ ಉಪಸ್ಥಿತರಿದ್ದರು.

andolana

Recent Posts

KSOU | ಬ್ಯಾಂಕ್‌ ಖಾತೆ ಹಣ ಡ್ರಾ ತಡೆಗೆ ಸರ್ಕಾರ ಆದೇಶ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು)ದಲ್ಲಿ ಭ್ರಷ್ಟಾಚಾರ ಹಾಗೂ ಅಗತ್ಯಕ್ಕಿಂತ ಹೆಚ್ಚು ತಾತ್ಕಾಲಿಕ ಸಿಬ್ಬಂದಿ ನೇಮಕಾತಿ ಕುರಿತು…

15 mins ago

ಮೈಸೂರು ಮಹಾನಗರ ಪಾಲಿಕೆ : 10.20ಕೋಟಿ ಉಳಿತಾಯ ಬಜೆಟ್‌ಗೆ ಅನುಮೋದನೆ

ಮೈಸೂರು : ಮೈಸೂರು ಮಹಾನಗರ ಪಾಲಿಕೆಯು 2026-27ನೇ ಸಾಲಿನ 1,311.13 ಕೋಟಿ ಗಾತ್ರದ ಬಜೆಟ್‌ಗೆ ಬುಧವಾರ ಅನುಮೋದನೆ ನೀಡಲಾಗಿದೆ. ಇದು…

52 mins ago

ನನಗೆ ಎಲ್ಲಾ ದಿನಗಳು ಒಂದೆ, ಯುಗಾದಿ, ಶಿವರಾತ್ರಿ ದಿನವೂ ಮಾಂಸ ತಿನ್ನುತ್ತೇವೆ : ಮುಖ್ಯಮಂತ್ರಿ

ಬೆಂಗಳೂರು : ಯುಗಾದಿ, ಶಿವರಾತ್ರಿಯ ಹಬ್ಬದ ದಿನವೂ ನಾನು ಮಾಂಸ ತಿನ್ನುತ್ತೇನೆ. ಅದರಲ್ಲಿ ತಪ್ಪೇನು? ಎಲ್ಲಾ ದಿನಗಳು ಒಂದೇ ಎಂದು…

1 hour ago

ಮಡಿಕೇರಿಯಲ್ಲಿ ಹುಲಿ ಪ್ರತ್ಯಕ್ಷ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಡಿಕೇರಿ : ನಗರದಿಂದ ಕೇವಲ 2 ಕಿ.ಮೀ. ದೂರದ ಇಬ್ನಿವಳವಾಡಿ ಗ್ರಾಮದ ಪೊನ್ನಚೆಟ್ಟಿರ ಸಂದೀಪ್ ಅವರ ತೋಟದಲ್ಲಿ ಹುಲಿ ಪ್ರತ್ಯಕ್ಷವಾಗಿದೆ.…

1 hour ago

ಧರ್ಮ ಸಂಕಟ ; ರಾಜ್ಯದಲ್ಲಿರುವ 12 ಸಾವಿರ ದಲಿತ ಕ್ರಿಶ್ಚಿಯನ್ನರಿಗೆ ಎಸ್‌ಸಿ ಮೀಸಲಾತಿ ಕೈ ತಪ್ಪುವ ಭೀತಿ

ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ…

2 hours ago

ಮಡಿಕೇರಿ | ನಗರದಲ್ಲಿ ಮುಳ್ಳುಹಂದಿ ಪ್ರತ್ಯಕ್ಷ

ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…

3 hours ago