ಜಿಲ್ಲೆಗಳು

ಸಿಂಧೂರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಧರಣಿ : ಮಂಜೇಗೌಡ

ಮೈಸೂರು: ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಸರ್ಕಾರಿ ನಿಯಮಗಳನ್ನು ಪದೇಪದೇ ಉಲ್ಲಂಘಿಸುತ್ತಿದ್ದರೂ ಕೂಡ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಆಕೆಯ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬೆಂಗಳೂರಿನ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸುವುದಾಗಿ ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಹೇಳಿದರು.

ಶುಕ್ರವಾರ ನಗರದ ಪತ್ರಕರ್ತರ ಭವನದಲ್ಲಿ ಏರ್ಪಡಿಸಲಾಗಿದ್ದ ಸುದ್ದಿಘೋಷ್ಟಿುಂಲ್ಲಿ ಮಾತನಾಡಿದ ಅವರು, ರೋಹಿಣಿ ಸಿಂಧೂರಿ ಅವರು ಸರ್ಕಾರ ಅಧೀಕನದಲ್ಲಿರುವ ಸಾರ್ವಜನಿಕರ ಸೇವಕರು. ಈ ವಿಚಾರವನ್ನು ಮರೆತಂತಿರುವ ಅವರು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರುವಂತೆ ನಡೆದುಕೊಳ್ಳುತ್ತಿದ್ದಾರೆ. ಇಷ್ಟಾದರೂ ಸರ್ಕಾರ ಅವರ ವಿಚಾರದಲ್ಲಿ ದಿವ್ಯ ಮೌನಕ್ಕೆ ಶರಣಾಗಿರುವುದು ಏಕೆ ಎಂಬುದು ತಳಿಯುತ್ತಿಲ್ಲ ಎಂದರು.

ಪಾರಂಪರಿಕ ಕಟ್ಟಡವಾದ ಜಿಲ್ಲಾಧಿಕಾರಿ ನಿವಾಸದ ಆವರಣದಲ್ಲಿ ಈಜು ಕೊಳ ನಿರ್ಮಾಣ ಮಾಡಿರುವುದು ತಪ್ಪು ಎಂದು ವರದಿ ತಿಳಿಸಿದೆ. ತನಿಖೆ ನಡೆಸಿದ ಅಧಿಕಾರಿಗಳು ಸರ್ಕಾರಕ್ಕೆ ವರದಿ ನೀಡಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆಯಲು ಧರಣಿ ನಡೆಸುವುದಾಗಿ ಹೇಳಿದರು.

ಸಿಂದೂರಿ ಅವರು ಈಗ ಧಾರ್ಮಿಕ ದತ್ತಿ ಇಲಾಖೆಯಲ್ಲಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಲ್ಲಿ ಕೂಡ ಅವರು ತಮ್ಮ ದರ್ಬಾರನ್ನು ಮುಂದುವರಿಸಿದ್ದಾರೆ. ಇಲಾಖೆಯ ವ್ಯಾಪ್ತಿಗೆ ಬರುವ ಎ ಮತ್ತು ಬಿ ದರ್ಜೆಯ ದೇವಾಲಯಗಳ ಹಣಕಾಸು ಲೆಕ್ಕ ಪರಿಶೋಧನೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸಿ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು.

ಸರ್ಕಾರದ ಯಾವುದೇ ಇಲಾಖೆಯಲ್ಲಿನ ಲೆಕ್ಕಪತ್ರಗಳ ಪರಿಶೀಲನೆ ಸ್ಟೇಟ್ ಅಕೌಂಟಕ್ ಮೂಲಕವೇ ನಡೆಯಬೇಕು. ಆದರೆ, ಸಿಂಧೂರಿ ಅವರು ಕಮನಿಷನ್ ಆಸೆಗಾಗಿ ಲೆಕ್ಕ ಪರಿಶೋಧನೆಯನ್ನು ಖಾಸಗಿ ಸಂಸ್ಥೆಗೆ ವಹಿಸಿದ್ದಾರೆ. ಈ ಕುರಿತು ಸರ್ಕಾರ ಗಮನಹರಿಸಬೇಕು ಎಂದರು.

ಇನ್ನು ತಿರುಪತಿಯಲ್ಲಿ ೪೫೮ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಟ್ಟಡ ನೀಲಿನಕ್ಷೆ ಸಿದ್ಧಪಡಿಸಲು ತನ್ನ ಪತಿಯ ಒಡೆತನದ ಸಂಸ್ಥೆಗೆ ಗುತ್ತಿಗೆ ನೀಡಿದ್ದಾರೆ. ಇದಕ್ಕಾಗಿ ೧೦ ಕೋಟಿ ರೂ. ಹಣವನ್ನು ನೀಡಿದ್ದಾರೆ. ಜನರ ತೆರಿಗೆ ಹಣವನ್ನು ಈರೀತಿ ಪೋಲು ಮಾಡುತ್ತಿದ್ದರು. ಸಂಬಂದಪಟ್ಟವರು ಆಕೆಯನ್ನು ಎಚ್ಚರಿಸುವ ಕೆಲಸವನ್ನೂ ಮಾಡಿಲ್ಲ ಎಂದು ಕಿಡಿಕಾರಿದರು.

ಯಾವುದೇ ಅಧಿಖಾರಿಯಾದರೂ ಕೂಡ ಕಚೇರಿಗೆ ಬಂದು ಕೆಲಸ ನಿರ್ವಹಿಸಬೇಕು. ಆದರೆ, ಸಿಂಧೂರಿ ಅವರು ವಾರದಲ್ಲಿ ಮೂರು ದಿನವೂ ಕಚೇರಿಗೆ ಬರುವುದಿಲ್ಲ. ಮನೆಯಲ್ಲಿ ಕುಳಿತೇ ಎಲ್ಲವನ್ನೂ ನಿರ್ವಹಿಸುತ್ತಾರೆ. ಅವರ ಕಚೇರಿಯ ಮುಂಭಾಗ ಅಳವಡಿಸಿರುವ ಸಿಸಿಟಿವಿ ಪರಿಶೀಲಿಸಿದಲ್ಲಿ ಆಕೆ ತಿಂಗಳಲ್ಲಿ ಎಷ್ಟು ದಿನ ಕೆಲಸಕ್ಕೆ ಬಂದಿದ್ದಾರೆ ಎಂದು ಗೊತ್ತಾಗುತ್ತದೆ ಎಂದರು.

ಇನ್ನು ಮೈಸೂರಿನಲ್ಲಿ ಜಿಲ್ಲಾಧಿಕಾರಿಗಳಾಗಿದ್ದ ವೇಳೆ ಕೆಲ ದಿನಗಳಕಾಲ ಎಟಿಐ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿದ್ದರು. ಅಲ್ಲಿಂದ ಪಾಪಸ್ಸಾಗುವಾಗ ಬೆಲೆಬಾಳುವ ಪೀಠೋಪಕರಣಗನ್ನು ಜೊತೆಗೆ ಕೊಂಡೊಯ್ದಿದ್ದಾರೆ ಎಂಬ ಆರೋಪವಿದೆ. ಈ ಸಂಬಂಧ ಸಾಕಷ್ಟು ಪತ್ರ ವ್ಯವಹಾರ ನಡೆದಿದೆ. ಈ ಸಂಬಂದ ಸೂಕ್ತ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ಗ್ರಾ.ಪಂ ಸದಸ್ಯ ಶಿವಕುಮಾರ್, ಶ್ರೀನಿವಾಸ್, ದಿನೇಶ್ ಪತ್ರಿಕಾಘೋಷ್ಟಿಯಲ್ಲಿ ಉಪಸ್ಥಿತರಿದ್ದರು.

andolana

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

5 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

6 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

6 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

7 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

12 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

15 hours ago