ಜಿಲ್ಲೆಗಳು

ಡಯಾಲಿಸಸ್ ಕೇಂದ್ರ ನಿರ್ಮಾಣಕ್ಕೆ ಭೂಮಿಪೂಜೆ

ಚಾಮರಾಜನಗರ: ನಗರದ ರೋಟರಿ ಭವನದ ಕೊಠಡಿಗಳನ್ನು ಡಯಾಲಿಸಸ್ ಕೇಂದ್ರವನ್ನಾಗಿ ಮಾರ್ಪಾಡು ಮಾಡುವ ಕಾರ್ಯಕ್ಕೆ ಜಿಲ್ಲಾ ಗೌರ್ನರ್ ರೋಟರಿ ಎನ್.ಪ್ರಕಾಶ್ ಕಾರಂತ್ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ನಗರದಲ್ಲಿ ರೋಟರಿ ಸಂಸ್ಥೆ ವತಿಯಿಂದ ಜನೋಪಯೋಗಿ ಸೇವೆ ಕಾರ್ಯಕ್ರಮಗಳನ್ನು ಮತ್ತಷ್ಟು ವಿಸ್ತರಿಸುವ ಸಲುವಾಗಿ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗುವುದು. ಹೆಚ್ಚು ಯಂತ್ರಗಳನ್ನು ಅಳವಡಿಸಲಾಗುವುದು ಎಂದರು.
ರೋಟರಿ ಸಂಸ್ಥೆ ತನ್ನ ೧೦೦ ಸೇವಾ ಕಾರ್ಯಕ್ರಮವಾಗಿ ಡಯಾಲಿಸಿಸ್ ಕೇಂದ್ರ ನಿರ್ಮಾಣ ಕೈಗೊಂಡಿದೆ. ಇದಕ್ಕೆ ಚಾಲನೆ ನೀಡಿದ್ದು ಸಂತಸ ತಂದಿದೆ. ಜಿಲ್ಲೆಯ ಜನರ ಅಗತ್ಯತೆಯನ್ನು ಪೂರೈಸಲಿ ಎಂದು ಆಶಿಸಿದರು.
ಪ್ರಸ್ತುತ ದಿನಗಳಲ್ಲಿ ಡಯಾಲಿಸಿಸ್, ಸಕ್ಕರೆ ಖಾಯಿಲೆ ಸಾಮಾನ್ಯವಾಗಿ ಕಾಣುತ್ತಿವೆೆ. ಇಂತಹ ಸಂದರ್ಭದಲ್ಲಿ ರೋಟರಿ ಸಂಸ್ಥೆಯು ಸ್ವಂತ ಕಟ್ಟಡ ನಿರ್ಮಾಣ ಅತ್ಯಂತ ಪೂರಕವಾಗಿದೆ. ರೋಟರಿ ಆಶಯಗಳನ್ನು ಜನಸಾಮಾನ್ಯರಿಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ರೋಟರಿ ಸಹಾಯಕ ಗೌರ್ನರ್ ಡಾ.ಆರ್.ಉಮಾಶಂಕರ, ವಲಯ ಸೇನಾನಿ ರೋ.ಆರ್.ಎಂ.ಸ್ವಾಮಿ, ಸ್ಥಾಪಕರಾದ ಸದಸ್ಯ ಜಿ.ಆರ್.ಅಶ್ವಥ್ ನಾರಾಯಣ್, ಸಿ.ವಿ.ಶ್ರೀನಿವಾಸಶೆಟ್ಟಿ, ರೋಟರಿ ಅಧ್ಯಕ್ಷ ಕೆ.ಎಂ.ಮಹದೇವಸ್ವಾಮಿ, ಕಾರ್ಯದರ್ಶಿ ಕಾಗಲವಾಡಿ ಚಂದ್ರು, ಡಾ.ನಾಗಾರ್ಜನ, ಸ್ವಾಗತ್‌ರಮೇಶ್, ಪ್ರಕಾಶ್, ಸುಭಾಷ್, ರತ್ನಮ್ಮ, ನಾಗಶ್ರೀಪ್ರತಾಪ್, ಕಾಳನಹುಂಡಿ ಗುರುಸ್ವಾಮಿ, ಚಂದ್ರಪ್ರಭ ಜೈನ್, ಸಿದ್ದಮಲ್ಲಪ್ಪ ಎಚ್.ಎಸ್., ಗಂಘಾಧರ್, ಕಾವೇರಿ ಡಯಗ್ನೋಸ್ಟಿಕ್ ಸೆಂಟರ್ ರಾಮು, ಡಿ.ನಾಗರಾಜು, ಕಮಲ್‌ರಾಜ್, ಡೀನಾ ಇತರರಿದ್ದರು.

andolanait

Recent Posts

ಮೈಸೂರು ವಿ.ವಿ 106ನೇ ಘಟಿಕೋತ್ಸವ : 30,966 ಅಭ್ಯರ್ಥಿಗಳಿಗೆ ಪದವಿ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ 106ನೇ ಘಟಿಕೋತ್ಸವವು ಜ.5ರಂದು ಬೆಳಿಗ್ಗೆ 11:30ಕ್ಕೆ ಕ್ರಾಫರ್ಡ್‌ ಭವನದಲ್ಲಿ ನಡೆಯಲಿದೆ. ಒಟ್ಟು 30,966 ವಿದ್ಯಾರ್ಥಿಗಳಿಗೆ…

4 hours ago

ಬಳ್ಳಾರಿ ಘರ್ಷಣೆ | ಮೃತನ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಿದ ಜಮೀರ್‌ ; ಮನೆ ಕಟ್ಟಿಸಿ ಕೊಡುವ ಭರವಸೆ

ಬಳ್ಳಾರಿ : ಬಳ್ಳಾರಿಯಲ್ಲಿ ವಾಲ್ಮೀಕಿ ಬ್ಯಾನರ್ ಕಟ್ಟುವ ವಿಚಾರವಾಗಿ ಗುಂಪುಗಳ ನಡುವೆ ನಡೆದ ಮಾರಮಾರಿಯಲ್ಲಿ ವೇಳೆ ಗುಂಡು ತಗುಲಿ ಮೃತಪಟ್ಟಿದ್ದ…

5 hours ago

ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಗೆ ವಿದ್ಯುಕ್ತ ಚಾಲನೆ

ಕೊಳ್ಳೇಗಾಲ : ಸುಪ್ರಸಿದ್ಧ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಯಲ್ಲಿ ಮೊದಲನೇ ದಿನವಾದ ಶನಿವಾರ ತಡರಾತ್ರಿ ಚಂದ್ರ ಮಂಡಲೋತ್ಸವದ ಮೂಲಕ ವಿದ್ಯುಕ್ತ ಚಾಲನೆ…

5 hours ago

ವಂದೇ ಭಾರತ್‌ ಸ್ಲೀಪರ್‌ ರೈಲು ಶೀಘ್ರ ಚಾಲನೆ

ಹೊಸದಿಲ್ಲಿ : ವೇಗ, ಸೌಲಭ್ಯ, ಆರಾಮಕ್ಕಾಗಿಯೇ ಜನಪ್ರಿಯವಾಗಿರುವ ವಂದೇ ಭಾರತ್ ಇದೀಗ ಸ್ಲೀಪರ್ ಆವೃತ್ತಿ ಮೂಲಕವೂ ಹಳಿಗಿಳಿಯಲು ಸಜ್ಜಾಗಿದೆ. ಪ್ರಯಾಣಿಕರ…

6 hours ago

ಮಹಾತ್ಮಗಾಂಧಿ ನರೇಗಾ ಕಾಯ್ದೆ ಪುನರ್ ಸ್ಥಾಪಿಸಿ: ಸಿ.ಎಂ.ಸಿದ್ದರಾಮಯ್ಯ ಆಗ್ರಹ

ರಾಯಚೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಕಾಯ್ದೆಯನ್ನು ಹೊಸ ಹೆಸರಲ್ಲಿ ಹೊಸ ಕಾಯ್ದೆಯೆಂದು ಘೋಷಿಸಿರುವ…

7 hours ago

ಕ್ಯಾರಕಸ್‌ ಮೇಲೆ ಅಮೆರಿಕಾ ವೈಮಾನಿಕ ದಾಳಿ ; ವೆನೆಜುವೆಲಾ ಅಧ್ಯಕ್ಷ ಮಡುರೊ ಪತ್ನಿ ಸೆರೆ

ಕ್ಯಾರಕಾಸ್ : ವೆನೆಜುವೆಲಾ ಮೇಲಿನ ವೈಮಾನಿಕ ದಾಳಿ ಬಳಿಕ ಅಮೆರಿಕ ಪಡೆಗಳು ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು…

7 hours ago