ಜಿಲ್ಲೆಗಳು

ಡಯಾಲಿಸಸ್ ಕೇಂದ್ರ ನಿರ್ಮಾಣಕ್ಕೆ ಭೂಮಿಪೂಜೆ

ಚಾಮರಾಜನಗರ: ನಗರದ ರೋಟರಿ ಭವನದ ಕೊಠಡಿಗಳನ್ನು ಡಯಾಲಿಸಸ್ ಕೇಂದ್ರವನ್ನಾಗಿ ಮಾರ್ಪಾಡು ಮಾಡುವ ಕಾರ್ಯಕ್ಕೆ ಜಿಲ್ಲಾ ಗೌರ್ನರ್ ರೋಟರಿ ಎನ್.ಪ್ರಕಾಶ್ ಕಾರಂತ್ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ನಗರದಲ್ಲಿ ರೋಟರಿ ಸಂಸ್ಥೆ ವತಿಯಿಂದ ಜನೋಪಯೋಗಿ ಸೇವೆ ಕಾರ್ಯಕ್ರಮಗಳನ್ನು ಮತ್ತಷ್ಟು ವಿಸ್ತರಿಸುವ ಸಲುವಾಗಿ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗುವುದು. ಹೆಚ್ಚು ಯಂತ್ರಗಳನ್ನು ಅಳವಡಿಸಲಾಗುವುದು ಎಂದರು.
ರೋಟರಿ ಸಂಸ್ಥೆ ತನ್ನ ೧೦೦ ಸೇವಾ ಕಾರ್ಯಕ್ರಮವಾಗಿ ಡಯಾಲಿಸಿಸ್ ಕೇಂದ್ರ ನಿರ್ಮಾಣ ಕೈಗೊಂಡಿದೆ. ಇದಕ್ಕೆ ಚಾಲನೆ ನೀಡಿದ್ದು ಸಂತಸ ತಂದಿದೆ. ಜಿಲ್ಲೆಯ ಜನರ ಅಗತ್ಯತೆಯನ್ನು ಪೂರೈಸಲಿ ಎಂದು ಆಶಿಸಿದರು.
ಪ್ರಸ್ತುತ ದಿನಗಳಲ್ಲಿ ಡಯಾಲಿಸಿಸ್, ಸಕ್ಕರೆ ಖಾಯಿಲೆ ಸಾಮಾನ್ಯವಾಗಿ ಕಾಣುತ್ತಿವೆೆ. ಇಂತಹ ಸಂದರ್ಭದಲ್ಲಿ ರೋಟರಿ ಸಂಸ್ಥೆಯು ಸ್ವಂತ ಕಟ್ಟಡ ನಿರ್ಮಾಣ ಅತ್ಯಂತ ಪೂರಕವಾಗಿದೆ. ರೋಟರಿ ಆಶಯಗಳನ್ನು ಜನಸಾಮಾನ್ಯರಿಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ರೋಟರಿ ಸಹಾಯಕ ಗೌರ್ನರ್ ಡಾ.ಆರ್.ಉಮಾಶಂಕರ, ವಲಯ ಸೇನಾನಿ ರೋ.ಆರ್.ಎಂ.ಸ್ವಾಮಿ, ಸ್ಥಾಪಕರಾದ ಸದಸ್ಯ ಜಿ.ಆರ್.ಅಶ್ವಥ್ ನಾರಾಯಣ್, ಸಿ.ವಿ.ಶ್ರೀನಿವಾಸಶೆಟ್ಟಿ, ರೋಟರಿ ಅಧ್ಯಕ್ಷ ಕೆ.ಎಂ.ಮಹದೇವಸ್ವಾಮಿ, ಕಾರ್ಯದರ್ಶಿ ಕಾಗಲವಾಡಿ ಚಂದ್ರು, ಡಾ.ನಾಗಾರ್ಜನ, ಸ್ವಾಗತ್‌ರಮೇಶ್, ಪ್ರಕಾಶ್, ಸುಭಾಷ್, ರತ್ನಮ್ಮ, ನಾಗಶ್ರೀಪ್ರತಾಪ್, ಕಾಳನಹುಂಡಿ ಗುರುಸ್ವಾಮಿ, ಚಂದ್ರಪ್ರಭ ಜೈನ್, ಸಿದ್ದಮಲ್ಲಪ್ಪ ಎಚ್.ಎಸ್., ಗಂಘಾಧರ್, ಕಾವೇರಿ ಡಯಗ್ನೋಸ್ಟಿಕ್ ಸೆಂಟರ್ ರಾಮು, ಡಿ.ನಾಗರಾಜು, ಕಮಲ್‌ರಾಜ್, ಡೀನಾ ಇತರರಿದ್ದರು.

andolanait

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

14 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

14 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

14 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

14 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

14 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

15 hours ago