ಜಿಲ್ಲೆಗಳು

ಡಯಾಲಿಸಸ್ ಕೇಂದ್ರ ನಿರ್ಮಾಣಕ್ಕೆ ಭೂಮಿಪೂಜೆ

ಚಾಮರಾಜನಗರ: ನಗರದ ರೋಟರಿ ಭವನದ ಕೊಠಡಿಗಳನ್ನು ಡಯಾಲಿಸಸ್ ಕೇಂದ್ರವನ್ನಾಗಿ ಮಾರ್ಪಾಡು ಮಾಡುವ ಕಾರ್ಯಕ್ಕೆ ಜಿಲ್ಲಾ ಗೌರ್ನರ್ ರೋಟರಿ ಎನ್.ಪ್ರಕಾಶ್ ಕಾರಂತ್ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ನಗರದಲ್ಲಿ ರೋಟರಿ ಸಂಸ್ಥೆ ವತಿಯಿಂದ ಜನೋಪಯೋಗಿ ಸೇವೆ ಕಾರ್ಯಕ್ರಮಗಳನ್ನು ಮತ್ತಷ್ಟು ವಿಸ್ತರಿಸುವ ಸಲುವಾಗಿ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗುವುದು. ಹೆಚ್ಚು ಯಂತ್ರಗಳನ್ನು ಅಳವಡಿಸಲಾಗುವುದು ಎಂದರು.
ರೋಟರಿ ಸಂಸ್ಥೆ ತನ್ನ ೧೦೦ ಸೇವಾ ಕಾರ್ಯಕ್ರಮವಾಗಿ ಡಯಾಲಿಸಿಸ್ ಕೇಂದ್ರ ನಿರ್ಮಾಣ ಕೈಗೊಂಡಿದೆ. ಇದಕ್ಕೆ ಚಾಲನೆ ನೀಡಿದ್ದು ಸಂತಸ ತಂದಿದೆ. ಜಿಲ್ಲೆಯ ಜನರ ಅಗತ್ಯತೆಯನ್ನು ಪೂರೈಸಲಿ ಎಂದು ಆಶಿಸಿದರು.
ಪ್ರಸ್ತುತ ದಿನಗಳಲ್ಲಿ ಡಯಾಲಿಸಿಸ್, ಸಕ್ಕರೆ ಖಾಯಿಲೆ ಸಾಮಾನ್ಯವಾಗಿ ಕಾಣುತ್ತಿವೆೆ. ಇಂತಹ ಸಂದರ್ಭದಲ್ಲಿ ರೋಟರಿ ಸಂಸ್ಥೆಯು ಸ್ವಂತ ಕಟ್ಟಡ ನಿರ್ಮಾಣ ಅತ್ಯಂತ ಪೂರಕವಾಗಿದೆ. ರೋಟರಿ ಆಶಯಗಳನ್ನು ಜನಸಾಮಾನ್ಯರಿಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ರೋಟರಿ ಸಹಾಯಕ ಗೌರ್ನರ್ ಡಾ.ಆರ್.ಉಮಾಶಂಕರ, ವಲಯ ಸೇನಾನಿ ರೋ.ಆರ್.ಎಂ.ಸ್ವಾಮಿ, ಸ್ಥಾಪಕರಾದ ಸದಸ್ಯ ಜಿ.ಆರ್.ಅಶ್ವಥ್ ನಾರಾಯಣ್, ಸಿ.ವಿ.ಶ್ರೀನಿವಾಸಶೆಟ್ಟಿ, ರೋಟರಿ ಅಧ್ಯಕ್ಷ ಕೆ.ಎಂ.ಮಹದೇವಸ್ವಾಮಿ, ಕಾರ್ಯದರ್ಶಿ ಕಾಗಲವಾಡಿ ಚಂದ್ರು, ಡಾ.ನಾಗಾರ್ಜನ, ಸ್ವಾಗತ್‌ರಮೇಶ್, ಪ್ರಕಾಶ್, ಸುಭಾಷ್, ರತ್ನಮ್ಮ, ನಾಗಶ್ರೀಪ್ರತಾಪ್, ಕಾಳನಹುಂಡಿ ಗುರುಸ್ವಾಮಿ, ಚಂದ್ರಪ್ರಭ ಜೈನ್, ಸಿದ್ದಮಲ್ಲಪ್ಪ ಎಚ್.ಎಸ್., ಗಂಘಾಧರ್, ಕಾವೇರಿ ಡಯಗ್ನೋಸ್ಟಿಕ್ ಸೆಂಟರ್ ರಾಮು, ಡಿ.ನಾಗರಾಜು, ಕಮಲ್‌ರಾಜ್, ಡೀನಾ ಇತರರಿದ್ದರು.

andolanait

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

3 hours ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

4 hours ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

4 hours ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

4 hours ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

4 hours ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

5 hours ago