ಚಾಮರಾಜನಗರ: ನಗರದ ರೋಟರಿ ಭವನದ ಕೊಠಡಿಗಳನ್ನು ಡಯಾಲಿಸಸ್ ಕೇಂದ್ರವನ್ನಾಗಿ ಮಾರ್ಪಾಡು ಮಾಡುವ ಕಾರ್ಯಕ್ಕೆ ಜಿಲ್ಲಾ ಗೌರ್ನರ್ ರೋಟರಿ ಎನ್.ಪ್ರಕಾಶ್ ಕಾರಂತ್ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ನಗರದಲ್ಲಿ ರೋಟರಿ ಸಂಸ್ಥೆ ವತಿಯಿಂದ ಜನೋಪಯೋಗಿ ಸೇವೆ ಕಾರ್ಯಕ್ರಮಗಳನ್ನು ಮತ್ತಷ್ಟು ವಿಸ್ತರಿಸುವ ಸಲುವಾಗಿ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗುವುದು. ಹೆಚ್ಚು ಯಂತ್ರಗಳನ್ನು ಅಳವಡಿಸಲಾಗುವುದು ಎಂದರು.
ರೋಟರಿ ಸಂಸ್ಥೆ ತನ್ನ ೧೦೦ ಸೇವಾ ಕಾರ್ಯಕ್ರಮವಾಗಿ ಡಯಾಲಿಸಿಸ್ ಕೇಂದ್ರ ನಿರ್ಮಾಣ ಕೈಗೊಂಡಿದೆ. ಇದಕ್ಕೆ ಚಾಲನೆ ನೀಡಿದ್ದು ಸಂತಸ ತಂದಿದೆ. ಜಿಲ್ಲೆಯ ಜನರ ಅಗತ್ಯತೆಯನ್ನು ಪೂರೈಸಲಿ ಎಂದು ಆಶಿಸಿದರು.
ಪ್ರಸ್ತುತ ದಿನಗಳಲ್ಲಿ ಡಯಾಲಿಸಿಸ್, ಸಕ್ಕರೆ ಖಾಯಿಲೆ ಸಾಮಾನ್ಯವಾಗಿ ಕಾಣುತ್ತಿವೆೆ. ಇಂತಹ ಸಂದರ್ಭದಲ್ಲಿ ರೋಟರಿ ಸಂಸ್ಥೆಯು ಸ್ವಂತ ಕಟ್ಟಡ ನಿರ್ಮಾಣ ಅತ್ಯಂತ ಪೂರಕವಾಗಿದೆ. ರೋಟರಿ ಆಶಯಗಳನ್ನು ಜನಸಾಮಾನ್ಯರಿಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ರೋಟರಿ ಸಹಾಯಕ ಗೌರ್ನರ್ ಡಾ.ಆರ್.ಉಮಾಶಂಕರ, ವಲಯ ಸೇನಾನಿ ರೋ.ಆರ್.ಎಂ.ಸ್ವಾಮಿ, ಸ್ಥಾಪಕರಾದ ಸದಸ್ಯ ಜಿ.ಆರ್.ಅಶ್ವಥ್ ನಾರಾಯಣ್, ಸಿ.ವಿ.ಶ್ರೀನಿವಾಸಶೆಟ್ಟಿ, ರೋಟರಿ ಅಧ್ಯಕ್ಷ ಕೆ.ಎಂ.ಮಹದೇವಸ್ವಾಮಿ, ಕಾರ್ಯದರ್ಶಿ ಕಾಗಲವಾಡಿ ಚಂದ್ರು, ಡಾ.ನಾಗಾರ್ಜನ, ಸ್ವಾಗತ್ರಮೇಶ್, ಪ್ರಕಾಶ್, ಸುಭಾಷ್, ರತ್ನಮ್ಮ, ನಾಗಶ್ರೀಪ್ರತಾಪ್, ಕಾಳನಹುಂಡಿ ಗುರುಸ್ವಾಮಿ, ಚಂದ್ರಪ್ರಭ ಜೈನ್, ಸಿದ್ದಮಲ್ಲಪ್ಪ ಎಚ್.ಎಸ್., ಗಂಘಾಧರ್, ಕಾವೇರಿ ಡಯಗ್ನೋಸ್ಟಿಕ್ ಸೆಂಟರ್ ರಾಮು, ಡಿ.ನಾಗರಾಜು, ಕಮಲ್ರಾಜ್, ಡೀನಾ ಇತರರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…