ಮೈಸೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಹೊರತರಲಾಗಿರುವ ಹೊಸ ವರ್ಷದ ಡೈರಿಯನ್ನು ಪ್ರಾದೇಶಿಕ ನಿರ್ದೇಶಕ ಬಿ. ಜಯರಾಂ ನೆಲ್ಲಿತ್ತಾಯ ಬಿಡುಗಡೆಗೊಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಡೈರಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 11ನೇ ವರ್ಷಕ್ಕೆ ಕಾಲಿಟ್ಟಿದೆ. ಸುಮಾರು ಐದು ಸಾವಿರ ಕಾರ್ಯಕರ್ತರು ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಮಾರು 9 ಲಕ್ಷ ಫಲಾನುಭವಿಗಳಿದ್ದಾರೆ. ಅಲ್ಲದೆ, 1.15 ಲಕ್ಷ ಸದಸ್ಯರಿದ್ದಾರೆ. ಇವರಿಗಾಗಿ ಆರೋಗ್ಯಕ್ಕೆ ಸಂಬಂಧಿಸಿದ ಎರಡು ಕಾರ್ಯಕ್ರಮಗಳಿದ್ದು, ಗುರುತಿನ ಚೀಟಿ ಪಡೆದವರಿಗೆ ಟ್ರಸ್ಟ್ ಗುರುತಿಸಿದ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಒದಗಿಸಲಾಗುತ್ತಿದೆ. ಜೊತೆಗೆ ನಿರ್ಗತಿಕರಿಗೆ 500 ರಿಂದ ಎರಡು ಸಾವಿರ ರೂ.ಗಳ ವರೆಗೆ ಮಾಸಾಶನ, ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಇದಲ್ಲದೆ ದೇವಸ್ಥಾನ, ಕೆಎಂಎಫ್ ಕಟ್ಟಡಗಳಿಗೆ ನೆರವು ಸೇರಿದಂತೆ ಸಮಗ್ರ ಅಭಿವೃದ್ಧಿಯ ಕೆಲಸ ಕೈಗೊಳ್ಳಲಾಗುತ್ತಿದೆ. ಇದರೊಡನೆ ಅನಾಥ ಮಹಿಳೆಯರಿಗೆ ಒಂದು ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿಕೊಡಲಾಗುತ್ತಿದೆ. ಸಂಸ್ಥೆ ನಡೆಸುತ್ತಿರುವ ಮದ್ಯವ್ಯರ್ಜನ ಶಿಬಿರಗಳಿಂದಾಗಿ ನೂರಾರು ಮಂದಿ ಮದ್ಯ ತ್ಯಜಿಸಿದ್ದಾರೆಂದು ಮಾಹಿತಿ ನೀಡಿದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ. ರವಿಕುಮಾರ್, ಮೈಸೂರು ತಾಲ್ಲೂಕು ಯೋಜನಾಧಿಕಾರಿ ನಂದಿನಿ, ಆಡಳಿತ ಯೋಜನಾಧಿಕಾರಿ ಪ್ರಸಾದ್, ಜಿಲ್ಲಾ ಕಚೇರಿಯ ಯೋಜನಾಧಿಕಾರಿ ಮಾಧವ್, ಜಿಲ್ಲಾ ನಿರ್ದೇಶಕರಾದ ಎಂ. ಲಕ್ಷ್ಮಣ್, ಮೇಲ್ವಿಚಾರಕರಾದ ಕುಸುಮಾ, ಶಶಿಕಲಾ ಹಾಜರಿದ್ದರು.
ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…
ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…
ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…
ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…
ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ ೨೭೫ರ ವಿಸ್ತೃತ ಮಾರ್ಗವಾದ…