ಮೈಸೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಹೊರತರಲಾಗಿರುವ ಹೊಸ ವರ್ಷದ ಡೈರಿಯನ್ನು ಪ್ರಾದೇಶಿಕ ನಿರ್ದೇಶಕ ಬಿ. ಜಯರಾಂ ನೆಲ್ಲಿತ್ತಾಯ ಬಿಡುಗಡೆಗೊಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಡೈರಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 11ನೇ ವರ್ಷಕ್ಕೆ ಕಾಲಿಟ್ಟಿದೆ. ಸುಮಾರು ಐದು ಸಾವಿರ ಕಾರ್ಯಕರ್ತರು ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಮಾರು 9 ಲಕ್ಷ ಫಲಾನುಭವಿಗಳಿದ್ದಾರೆ. ಅಲ್ಲದೆ, 1.15 ಲಕ್ಷ ಸದಸ್ಯರಿದ್ದಾರೆ. ಇವರಿಗಾಗಿ ಆರೋಗ್ಯಕ್ಕೆ ಸಂಬಂಧಿಸಿದ ಎರಡು ಕಾರ್ಯಕ್ರಮಗಳಿದ್ದು, ಗುರುತಿನ ಚೀಟಿ ಪಡೆದವರಿಗೆ ಟ್ರಸ್ಟ್ ಗುರುತಿಸಿದ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಒದಗಿಸಲಾಗುತ್ತಿದೆ. ಜೊತೆಗೆ ನಿರ್ಗತಿಕರಿಗೆ 500 ರಿಂದ ಎರಡು ಸಾವಿರ ರೂ.ಗಳ ವರೆಗೆ ಮಾಸಾಶನ, ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಇದಲ್ಲದೆ ದೇವಸ್ಥಾನ, ಕೆಎಂಎಫ್ ಕಟ್ಟಡಗಳಿಗೆ ನೆರವು ಸೇರಿದಂತೆ ಸಮಗ್ರ ಅಭಿವೃದ್ಧಿಯ ಕೆಲಸ ಕೈಗೊಳ್ಳಲಾಗುತ್ತಿದೆ. ಇದರೊಡನೆ ಅನಾಥ ಮಹಿಳೆಯರಿಗೆ ಒಂದು ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿಕೊಡಲಾಗುತ್ತಿದೆ. ಸಂಸ್ಥೆ ನಡೆಸುತ್ತಿರುವ ಮದ್ಯವ್ಯರ್ಜನ ಶಿಬಿರಗಳಿಂದಾಗಿ ನೂರಾರು ಮಂದಿ ಮದ್ಯ ತ್ಯಜಿಸಿದ್ದಾರೆಂದು ಮಾಹಿತಿ ನೀಡಿದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ. ರವಿಕುಮಾರ್, ಮೈಸೂರು ತಾಲ್ಲೂಕು ಯೋಜನಾಧಿಕಾರಿ ನಂದಿನಿ, ಆಡಳಿತ ಯೋಜನಾಧಿಕಾರಿ ಪ್ರಸಾದ್, ಜಿಲ್ಲಾ ಕಚೇರಿಯ ಯೋಜನಾಧಿಕಾರಿ ಮಾಧವ್, ಜಿಲ್ಲಾ ನಿರ್ದೇಶಕರಾದ ಎಂ. ಲಕ್ಷ್ಮಣ್, ಮೇಲ್ವಿಚಾರಕರಾದ ಕುಸುಮಾ, ಶಶಿಕಲಾ ಹಾಜರಿದ್ದರು.
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…