ಜಿಲ್ಲೆಗಳು

ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರ ಬಳಸಿಕೊಳ್ಳಿ: ಕೇಂದ್ರ ಸಚಿವ ಸಲಹೆ

ಮೈಸೂರಿನಲ್ಲಿ ಕರ್ಣಾಟಕ ಬ್ಯಾಂಕ್‌ನಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕ(ಡಿಬಿಯು) ಉದ್ಘಾಟನೆ

ಮೈಸೂರು: ಗ್ರಾಹಕರು ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರವನ್ನು ಬಳಸಿಕೊಳ್ಳಲು ಮುಂದಾಗಬೇಕು. ಸಮಯ ಉಳಿತಾಯದ ಜೊತೆಗೆ ನಗದು ರಹಿತವ್ಯವಹಾರಕ್ಕೆ ಉತ್ತೇಜನ ಕೊಡಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ ಸಲಹೆ ನೀಡಿದರು.
ನಗರದ ವಿಜಯನಗರ ಒಂದನೇ ಹಂತದಲ್ಲಿ ಕರ್ಣಾಟಕ ಬ್ಯಾಂಕ್‌ನಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕ(ಡಿಬಿಯು) ಸೇವೆ ಸಮರ್ಪಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಸಮಾಜದ ಕಟ್ಟಕಡೆಯ ಮನುಷ್ಯನಿಗೂ ತಲುಪುವಂತೆ ಮಾಡಲು ಶ್ರಮಿಸುತ್ತಿದೆ. ಡಿಜಿಟಲ್ ಇಂಡಿಯಾದಡಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುಧಾರಣೆ ತರುವ ಮೂಲಕ ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರ ಮಾಡಲು ಒತ್ತು ನೀಡಿದೆ ಎಂದರು. ಪ್ರತಿ ಐದು ಕಿ.ಮೀ ವ್ಯಾಪ್ತಿಯಲ್ಲಿ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರ ಮಾಡುವ ಪರಿಕಲ್ಪನೆ ಹೊಂದಲಾಗಿದೆ. ಗ್ರಾಹಕರು ಬ್ಯಾಂಕಿನಲ್ಲಿ ಸಮಯ ಕಳೆಯುವ ಬದಲಿಗೆ ಡಿಜಿಟಲ್ ವ್ಯವಹಾರ ಮಾಡಬೇಕು ಎಂದರು. ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಮಾತನಾಡಿ, ರಸ್ತೆಬದಿ ವ್ಯಾಪಾರಿಗಳು ಇಂದು ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರ ಮಾಡುತ್ತಿದ್ದಾರೆ. ಮೈಸೂರು ನಗರದಲ್ಲಿ ನೊಂದಾಯಿಸಿಕೊಂಡಿರುವ ೧೦,೫೦೦ ರಸ್ತೆಬದಿ ವ್ಯಾಪಾರಿಗಳಲ್ಲಿ ಕೃಷ್ಣರಾಜ ಕ್ಷೇತ್ರದವರು ೩,೫೦೦ ಮಂದಿ ಇದ್ದಾರೆ. ತರಕಾರಿ ವ್ಯಾಪಾರ ಮಾಡುವವರುಇಂದು ಆನ್‌ಲೈನ್ ಪೇಮೆಂಟ್ ಪಡೆಯುತ್ತಿದ್ದಾರೆ ಎಂದರು. ಶಾಸಕ ಎಲ್.ನಾಗೇಂದ್ರ, ಮಹಾಪೌರ ಶಿವಕುಮಾರ್,ನಗರಪಾಲಿಕೆ ಸದಸ್ಯ ಎಂ.ಯು.ಸುಬ್ಬಯ್ಯ, ಕರ್ಣಾಟಕ ಬ್ಯಾಂಕ್ ಎಜಿಎಂ ರಮೇಶ್‌ರಾವ್, ಬ್ಯಾಂಕ್ ಮ್ಯಾನೇಜರ್ ಅಪ್ಪಚ್ಚು ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಸಾರ್ವಜನಿಕ ಶೌಚಾಲಯಗಳ ಬೀಗ ತೆರವು

ಮೈಸೂರಿನ ಮೆಟ್ರೋಪೋಲ್ ವೃತ್ತದ ಸಮೀಪ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯಗಳಿಗೆ ಬೀಗ ಹಾಕಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ…

3 hours ago

ಓದುಗರ ಪತ್ರ: ಬಾಂಬ್ ಬೆದರಿಕೆ: ಕಠಿಣ ಶಿಕ್ಷೆ ನೀಡಿ

ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳು, ನ್ಯಾಯಾಲಯ ಮೊದಲಾದ ಕಡೆ ಬಾಂಬ್ ಇಡಲಾಗಿದೆ ಎಂದು ದುಷ್ಕರ್ಮಿಗಳು ಫೋನ್, ಇ-ಮೇಲ್ ಮೂಲಕ ಬೆದರಿಕೆ…

3 hours ago

ಓದುಗರ ಪತ್ರ: ದಾಖಲೆ ಸಿದ್ದರಾಮಯ್ಯನವರಿಗೆ ಅಭಿನಂದನೆಗಳು

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಅತಿಹೆಚ್ಚು ದೀರ್ಘಾವಧಿಯ ಮುಖ್ಯಮಂತ್ರಿ ಎಂಬ ದಾಖಲೆ ಬರೆದಿದ್ದಾರೆ. ಇದಕ್ಕೆ ಸಂಬಂಧಿಸಿದ ಹಾಗೆ ರಾಜ್ಯದ ಅನೇಕ…

3 hours ago

ಕಕ್ಕೆಹೊಳೆ, ಗಾಂಧಿ ವೃತ್ತದಲ್ಲಿ ಕ್ಯಾಮೆರಾ ಕಾರ್ಯಾರಂಭ

ಸಂಚಾರ ನಿಯಮ ಉಲ್ಲಂಸಿದವರ ವಿರುದ್ಧ ೮೧ ಪ್ರಕರಣ ದಾಖಲು! ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹೊಸ ವರ್ಷಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹದ…

3 hours ago

ರಸ್ತೆಗಳು ಗುಂಡಿಮಯ; ಸಂಚಾರ ಅಯೋಮಯ

ಪ್ರಶಾಂತ್ ಎಸ್. ಮೈಸೂರು: ನಗರದ ಸುಗಮ ಸಂಚಾರಕ್ಕಾಗಿ ನಿರ್ಮಿಸಿದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತುಂಬಾ ತೊಡಕಾಗಿದೆ. ಗಂಗೋತ್ರಿ…

3 hours ago

‘ಶಾಲೆಗೆ ಹೋಗಲು ವಾಹನ ವ್ಯವಸ್ಥೆ ಮಾಡಿಕೊಡಿ’

ಕುರುಬನದೊಡ್ಡಿ ಗ್ರಾಮದ ಶಾಲಾ ವಿದ್ಯಾರ್ಥಿಗಳಿಂದ ಸಿಎಂ, ಶಾಸಕರಿಗೆ ಪತ್ರ ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡೆ ಕುರುಬನದೊಡ್ಡಿ…

3 hours ago