ಜಿಲ್ಲೆಗಳು

ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರ ಬಳಸಿಕೊಳ್ಳಿ: ಕೇಂದ್ರ ಸಚಿವ ಸಲಹೆ

ಮೈಸೂರಿನಲ್ಲಿ ಕರ್ಣಾಟಕ ಬ್ಯಾಂಕ್‌ನಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕ(ಡಿಬಿಯು) ಉದ್ಘಾಟನೆ

ಮೈಸೂರು: ಗ್ರಾಹಕರು ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರವನ್ನು ಬಳಸಿಕೊಳ್ಳಲು ಮುಂದಾಗಬೇಕು. ಸಮಯ ಉಳಿತಾಯದ ಜೊತೆಗೆ ನಗದು ರಹಿತವ್ಯವಹಾರಕ್ಕೆ ಉತ್ತೇಜನ ಕೊಡಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ ಸಲಹೆ ನೀಡಿದರು.
ನಗರದ ವಿಜಯನಗರ ಒಂದನೇ ಹಂತದಲ್ಲಿ ಕರ್ಣಾಟಕ ಬ್ಯಾಂಕ್‌ನಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕ(ಡಿಬಿಯು) ಸೇವೆ ಸಮರ್ಪಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಸಮಾಜದ ಕಟ್ಟಕಡೆಯ ಮನುಷ್ಯನಿಗೂ ತಲುಪುವಂತೆ ಮಾಡಲು ಶ್ರಮಿಸುತ್ತಿದೆ. ಡಿಜಿಟಲ್ ಇಂಡಿಯಾದಡಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುಧಾರಣೆ ತರುವ ಮೂಲಕ ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರ ಮಾಡಲು ಒತ್ತು ನೀಡಿದೆ ಎಂದರು. ಪ್ರತಿ ಐದು ಕಿ.ಮೀ ವ್ಯಾಪ್ತಿಯಲ್ಲಿ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರ ಮಾಡುವ ಪರಿಕಲ್ಪನೆ ಹೊಂದಲಾಗಿದೆ. ಗ್ರಾಹಕರು ಬ್ಯಾಂಕಿನಲ್ಲಿ ಸಮಯ ಕಳೆಯುವ ಬದಲಿಗೆ ಡಿಜಿಟಲ್ ವ್ಯವಹಾರ ಮಾಡಬೇಕು ಎಂದರು. ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಮಾತನಾಡಿ, ರಸ್ತೆಬದಿ ವ್ಯಾಪಾರಿಗಳು ಇಂದು ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರ ಮಾಡುತ್ತಿದ್ದಾರೆ. ಮೈಸೂರು ನಗರದಲ್ಲಿ ನೊಂದಾಯಿಸಿಕೊಂಡಿರುವ ೧೦,೫೦೦ ರಸ್ತೆಬದಿ ವ್ಯಾಪಾರಿಗಳಲ್ಲಿ ಕೃಷ್ಣರಾಜ ಕ್ಷೇತ್ರದವರು ೩,೫೦೦ ಮಂದಿ ಇದ್ದಾರೆ. ತರಕಾರಿ ವ್ಯಾಪಾರ ಮಾಡುವವರುಇಂದು ಆನ್‌ಲೈನ್ ಪೇಮೆಂಟ್ ಪಡೆಯುತ್ತಿದ್ದಾರೆ ಎಂದರು. ಶಾಸಕ ಎಲ್.ನಾಗೇಂದ್ರ, ಮಹಾಪೌರ ಶಿವಕುಮಾರ್,ನಗರಪಾಲಿಕೆ ಸದಸ್ಯ ಎಂ.ಯು.ಸುಬ್ಬಯ್ಯ, ಕರ್ಣಾಟಕ ಬ್ಯಾಂಕ್ ಎಜಿಎಂ ರಮೇಶ್‌ರಾವ್, ಬ್ಯಾಂಕ್ ಮ್ಯಾನೇಜರ್ ಅಪ್ಪಚ್ಚು ಹಾಜರಿದ್ದರು.

andolanait

Recent Posts

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

50 mins ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

55 mins ago

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…

1 hour ago

ಬಂಡೀಪಾಳ್ಯದಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಶೀಘ್ರ ಆರಂಭ

ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…

1 hour ago

ನೂರು ಸಾವಿರದ ಗಡಿ ದಾಟಿದ ಆಂದೋಲನ ಇನ್ ಸ್ಟಾ ಪೇಜ್ ಹಿಂಬಾಲಕರು

‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…

1 hour ago

ದುಸ್ಥಿತಿಯಲ್ಲಿ ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆ ಕಟ್ಟಡ

ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…

1 hour ago