ಮೈಸೂರಿನಲ್ಲಿ ಕರ್ಣಾಟಕ ಬ್ಯಾಂಕ್ನಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕ(ಡಿಬಿಯು) ಉದ್ಘಾಟನೆ
ಮೈಸೂರು: ಗ್ರಾಹಕರು ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರವನ್ನು ಬಳಸಿಕೊಳ್ಳಲು ಮುಂದಾಗಬೇಕು. ಸಮಯ ಉಳಿತಾಯದ ಜೊತೆಗೆ ನಗದು ರಹಿತವ್ಯವಹಾರಕ್ಕೆ ಉತ್ತೇಜನ ಕೊಡಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ ಸಲಹೆ ನೀಡಿದರು.
ನಗರದ ವಿಜಯನಗರ ಒಂದನೇ ಹಂತದಲ್ಲಿ ಕರ್ಣಾಟಕ ಬ್ಯಾಂಕ್ನಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕ(ಡಿಬಿಯು) ಸೇವೆ ಸಮರ್ಪಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಸಮಾಜದ ಕಟ್ಟಕಡೆಯ ಮನುಷ್ಯನಿಗೂ ತಲುಪುವಂತೆ ಮಾಡಲು ಶ್ರಮಿಸುತ್ತಿದೆ. ಡಿಜಿಟಲ್ ಇಂಡಿಯಾದಡಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುಧಾರಣೆ ತರುವ ಮೂಲಕ ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರ ಮಾಡಲು ಒತ್ತು ನೀಡಿದೆ ಎಂದರು. ಪ್ರತಿ ಐದು ಕಿ.ಮೀ ವ್ಯಾಪ್ತಿಯಲ್ಲಿ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರ ಮಾಡುವ ಪರಿಕಲ್ಪನೆ ಹೊಂದಲಾಗಿದೆ. ಗ್ರಾಹಕರು ಬ್ಯಾಂಕಿನಲ್ಲಿ ಸಮಯ ಕಳೆಯುವ ಬದಲಿಗೆ ಡಿಜಿಟಲ್ ವ್ಯವಹಾರ ಮಾಡಬೇಕು ಎಂದರು. ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಮಾತನಾಡಿ, ರಸ್ತೆಬದಿ ವ್ಯಾಪಾರಿಗಳು ಇಂದು ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರ ಮಾಡುತ್ತಿದ್ದಾರೆ. ಮೈಸೂರು ನಗರದಲ್ಲಿ ನೊಂದಾಯಿಸಿಕೊಂಡಿರುವ ೧೦,೫೦೦ ರಸ್ತೆಬದಿ ವ್ಯಾಪಾರಿಗಳಲ್ಲಿ ಕೃಷ್ಣರಾಜ ಕ್ಷೇತ್ರದವರು ೩,೫೦೦ ಮಂದಿ ಇದ್ದಾರೆ. ತರಕಾರಿ ವ್ಯಾಪಾರ ಮಾಡುವವರುಇಂದು ಆನ್ಲೈನ್ ಪೇಮೆಂಟ್ ಪಡೆಯುತ್ತಿದ್ದಾರೆ ಎಂದರು. ಶಾಸಕ ಎಲ್.ನಾಗೇಂದ್ರ, ಮಹಾಪೌರ ಶಿವಕುಮಾರ್,ನಗರಪಾಲಿಕೆ ಸದಸ್ಯ ಎಂ.ಯು.ಸುಬ್ಬಯ್ಯ, ಕರ್ಣಾಟಕ ಬ್ಯಾಂಕ್ ಎಜಿಎಂ ರಮೇಶ್ರಾವ್, ಬ್ಯಾಂಕ್ ಮ್ಯಾನೇಜರ್ ಅಪ್ಪಚ್ಚು ಹಾಜರಿದ್ದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…