ಮೈಸೂರು : ಮೈಸೂರಿಗರಿಗೆ ಮತ್ತು ಮೈಸೂರಿಗೆ ಬರುವ ಪ್ರವಾಸಿಗರಿಗೆ ಇನ್ನೆರಡು ದಿನ ನಗರದ ವಿದ್ಯುತ್ ದೀಪಾಲಂಕಾರ ವೀಕ್ಷಣೆಗೆ ಅವಕಾಶ ನೀಡುವ ಕಲ್ಪಿಸುವ ಮೂಲಕ ಸೆಸ್ಕಾಂ ಸಿಹಿ ನೀಡಿದೆ.
ದಸರಾ ಮಹೋತ್ಸವದ ಪ್ರಯುಕ್ತ ನಗರದಲ್ಲಿ ಮಾಡಲಾಗಿದ್ದ ವಿದ್ಯುತ್ ದೀಪಾಲಂಕಾರ ಉತ್ತಮ ಪ್ರತಿಕ್ರಿಯೆ ಮತ್ತು ಇನ್ನಷ್ಟು ದಿನಗಳ ಕಾಲ ಮುಂದುವರಿಸುವಂತೆ ಸಾರ್ವಜನಿಕರು ಮನವಿ ಮಾಡಿದ ಹಿನ್ನೆಲೆಯಲ್ಲಿ ಇನ್ನು ಎರಡು ದಿನ ನಗರದ ಹೃದಯ ಭಾಗದಲ್ಲಿ ಮಾತ್ರ ವಿದ್ಯುತ್ ದೀಪಾಲಂಕಾರವನ್ನು ಮುಂದುವರೆಸಲಾಗುತ್ತಿದೆ.
ಇದುವರೆಗೂ ಒಟ್ಟು 17 ದಿನಗಳ ಕಾಲ ದೀಪಾಲಂಕಾರವನ್ನು ಆಯೋಜಿಸುವ ಮೂಲಕ ಸೋಮವಾರಕ್ಕೆ ಅಂತಿಮಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಅರಮನೆ ಸುತ್ತಲಿನ ರಸ್ತೆಗಳು, ಚಾಮರಾಜ ಜೋಡಿ ರಸ್ತೆ, ಜೆಎಲ್ಬಿ ರಸ್ತೆಗಳಲ್ಲಿ ಹೆಚ್ಚು ಜನಸಂದಣಿ ಕಂಡು ಬಂತು. ಸಾಕಷ್ಟು ಜನರು ಸಂಭ್ರಮದಿಂದ ದೀಪಾಲಂಕಾರ ನೋಡುವಲ್ಲಿ ನಿರತರಾಗಿದ್ದರು.
ಈ ಹಿನ್ನೆಲೆಯಲ್ಲಿ ‘ಆಂದೋಲನ’ ದಿನಪತ್ರಿಕೆ ಜತೆಗೆ ಮಾತನಾಡಿದ ಸೆಸ್ಕಾಂ ಎಂಡಿ ಜಯವಿಭವಸ್ವಾಮಿ ‘ ಎರಡು ದಿನ ಟ್ರಯಲ್ ಸೇರಿದಂತೆ ಇದುವರೆಗೂ ೧೭ದಿನ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಸುಮಾರು ೫ ಕೋಟಿ ರೂ.ಅಷ್ಟು ವೆಚ್ಚವಾಗಿದೆ. ಸಾರ್ವಜನಿಕರಿಂದ ಇನ್ನಷ್ಟು ದಿನಗಳ ಕಾಲ ವೀಕ್ಷಣೆಗೆ ಅವಕಾಶ ನೀಡುವಂತೆ ಸಾಕಷ್ಟು ಒತ್ತಾಯ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ಈ ವಿಷಯವನ್ನು ತರಲಾಗಿದ್ದು, ಇನ್ನೆರಡು ದಿನಗಳ ಕಾಲ ನಗರದ ಹೃದಯ ಭಾಗದಲ್ಲಿ ಮಾತ್ರ ದೀಪಾಲಂಕಾರ ಮುಂದುವರೆಸಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…