ಜಿಲ್ಲೆಗಳು

ಇನ್ನೆರಡು ದಿನ ದೀಪಾಲಂಕಾರ: ಸೆಸ್ಕ್ ಸಿಹಿ ಸುದ್ದಿ

ಮೈಸೂರು : ಮೈಸೂರಿಗರಿಗೆ ಮತ್ತು ಮೈಸೂರಿಗೆ ಬರುವ ಪ್ರವಾಸಿಗರಿಗೆ ಇನ್ನೆರಡು ದಿನ ನಗರದ ವಿದ್ಯುತ್ ದೀಪಾಲಂಕಾರ ವೀಕ್ಷಣೆಗೆ ಅವಕಾಶ ನೀಡುವ ಕಲ್ಪಿಸುವ ಮೂಲಕ ಸೆಸ್ಕಾಂ ಸಿಹಿ ನೀಡಿದೆ.

ದಸರಾ ಮಹೋತ್ಸವದ ಪ್ರಯುಕ್ತ ನಗರದಲ್ಲಿ ಮಾಡಲಾಗಿದ್ದ ವಿದ್ಯುತ್ ದೀಪಾಲಂಕಾರ ಉತ್ತಮ ಪ್ರತಿಕ್ರಿಯೆ ಮತ್ತು ಇನ್ನಷ್ಟು ದಿನಗಳ ಕಾಲ ಮುಂದುವರಿಸುವಂತೆ ಸಾರ್ವಜನಿಕರು ಮನವಿ ಮಾಡಿದ ಹಿನ್ನೆಲೆಯಲ್ಲಿ ಇನ್ನು ಎರಡು ದಿನ ನಗರದ ಹೃದಯ ಭಾಗದಲ್ಲಿ ಮಾತ್ರ ವಿದ್ಯುತ್ ದೀಪಾಲಂಕಾರವನ್ನು ಮುಂದುವರೆಸಲಾಗುತ್ತಿದೆ.

ಇದುವರೆಗೂ ಒಟ್ಟು 17 ದಿನಗಳ ಕಾಲ ದೀಪಾಲಂಕಾರವನ್ನು ಆಯೋಜಿಸುವ ಮೂಲಕ ಸೋಮವಾರಕ್ಕೆ ಅಂತಿಮಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಅರಮನೆ ಸುತ್ತಲಿನ ರಸ್ತೆಗಳು, ಚಾಮರಾಜ ಜೋಡಿ ರಸ್ತೆ, ಜೆಎಲ್ಬಿ ರಸ್ತೆಗಳಲ್ಲಿ ಹೆಚ್ಚು ಜನಸಂದಣಿ ಕಂಡು ಬಂತು. ಸಾಕಷ್ಟು ಜನರು ಸಂಭ್ರಮದಿಂದ ದೀಪಾಲಂಕಾರ ನೋಡುವಲ್ಲಿ ನಿರತರಾಗಿದ್ದರು.

ಈ ಹಿನ್ನೆಲೆಯಲ್ಲಿ ‘ಆಂದೋಲನ’ ದಿನಪತ್ರಿಕೆ ಜತೆಗೆ ಮಾತನಾಡಿದ ಸೆಸ್ಕಾಂ ಎಂಡಿ ಜಯವಿಭವಸ್ವಾಮಿ ‘ ಎರಡು ದಿನ ಟ್ರಯಲ್ ಸೇರಿದಂತೆ ಇದುವರೆಗೂ ೧೭ದಿನ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಸುಮಾರು ೫ ಕೋಟಿ ರೂ.ಅಷ್ಟು ವೆಚ್ಚವಾಗಿದೆ. ಸಾರ್ವಜನಿಕರಿಂದ ಇನ್ನಷ್ಟು ದಿನಗಳ ಕಾಲ ವೀಕ್ಷಣೆಗೆ ಅವಕಾಶ ನೀಡುವಂತೆ ಸಾಕಷ್ಟು ಒತ್ತಾಯ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ಈ ವಿಷಯವನ್ನು ತರಲಾಗಿದ್ದು, ಇನ್ನೆರಡು ದಿನಗಳ ಕಾಲ ನಗರದ ಹೃದಯ ಭಾಗದಲ್ಲಿ ಮಾತ್ರ ದೀಪಾಲಂಕಾರ ಮುಂದುವರೆಸಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.

andolana

Recent Posts

ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡ ಬೊಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…

14 mins ago

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…

19 mins ago

ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…

24 mins ago

ಖ್ಯಾತ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನ

ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…

28 mins ago

ಚಾಮರಾಜನಗರ| ಒಟ್ಟಿಗೆ ಕಾಣಿಸಿಕೊಂಡ ಐದು ಹುಲಿಗಳು: ಭಯಭೀತರಾದ ಗ್ರಾಮಸ್ಥರು

ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…

2 hours ago

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

2 hours ago