ಮೈಸೂರು : ಮೈಸೂರಿಗರಿಗೆ ಮತ್ತು ಮೈಸೂರಿಗೆ ಬರುವ ಪ್ರವಾಸಿಗರಿಗೆ ಇನ್ನೆರಡು ದಿನ ನಗರದ ವಿದ್ಯುತ್ ದೀಪಾಲಂಕಾರ ವೀಕ್ಷಣೆಗೆ ಅವಕಾಶ ನೀಡುವ ಕಲ್ಪಿಸುವ ಮೂಲಕ ಸೆಸ್ಕಾಂ ಸಿಹಿ ನೀಡಿದೆ.
ದಸರಾ ಮಹೋತ್ಸವದ ಪ್ರಯುಕ್ತ ನಗರದಲ್ಲಿ ಮಾಡಲಾಗಿದ್ದ ವಿದ್ಯುತ್ ದೀಪಾಲಂಕಾರ ಉತ್ತಮ ಪ್ರತಿಕ್ರಿಯೆ ಮತ್ತು ಇನ್ನಷ್ಟು ದಿನಗಳ ಕಾಲ ಮುಂದುವರಿಸುವಂತೆ ಸಾರ್ವಜನಿಕರು ಮನವಿ ಮಾಡಿದ ಹಿನ್ನೆಲೆಯಲ್ಲಿ ಇನ್ನು ಎರಡು ದಿನ ನಗರದ ಹೃದಯ ಭಾಗದಲ್ಲಿ ಮಾತ್ರ ವಿದ್ಯುತ್ ದೀಪಾಲಂಕಾರವನ್ನು ಮುಂದುವರೆಸಲಾಗುತ್ತಿದೆ.
ಇದುವರೆಗೂ ಒಟ್ಟು 17 ದಿನಗಳ ಕಾಲ ದೀಪಾಲಂಕಾರವನ್ನು ಆಯೋಜಿಸುವ ಮೂಲಕ ಸೋಮವಾರಕ್ಕೆ ಅಂತಿಮಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಅರಮನೆ ಸುತ್ತಲಿನ ರಸ್ತೆಗಳು, ಚಾಮರಾಜ ಜೋಡಿ ರಸ್ತೆ, ಜೆಎಲ್ಬಿ ರಸ್ತೆಗಳಲ್ಲಿ ಹೆಚ್ಚು ಜನಸಂದಣಿ ಕಂಡು ಬಂತು. ಸಾಕಷ್ಟು ಜನರು ಸಂಭ್ರಮದಿಂದ ದೀಪಾಲಂಕಾರ ನೋಡುವಲ್ಲಿ ನಿರತರಾಗಿದ್ದರು.
ಈ ಹಿನ್ನೆಲೆಯಲ್ಲಿ ‘ಆಂದೋಲನ’ ದಿನಪತ್ರಿಕೆ ಜತೆಗೆ ಮಾತನಾಡಿದ ಸೆಸ್ಕಾಂ ಎಂಡಿ ಜಯವಿಭವಸ್ವಾಮಿ ‘ ಎರಡು ದಿನ ಟ್ರಯಲ್ ಸೇರಿದಂತೆ ಇದುವರೆಗೂ ೧೭ದಿನ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಸುಮಾರು ೫ ಕೋಟಿ ರೂ.ಅಷ್ಟು ವೆಚ್ಚವಾಗಿದೆ. ಸಾರ್ವಜನಿಕರಿಂದ ಇನ್ನಷ್ಟು ದಿನಗಳ ಕಾಲ ವೀಕ್ಷಣೆಗೆ ಅವಕಾಶ ನೀಡುವಂತೆ ಸಾಕಷ್ಟು ಒತ್ತಾಯ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ಈ ವಿಷಯವನ್ನು ತರಲಾಗಿದ್ದು, ಇನ್ನೆರಡು ದಿನಗಳ ಕಾಲ ನಗರದ ಹೃದಯ ಭಾಗದಲ್ಲಿ ಮಾತ್ರ ದೀಪಾಲಂಕಾರ ಮುಂದುವರೆಸಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…