ಜಿಲ್ಲೆಗಳು

ಮೇಲಾಧಿಕಾರಿಯ ಹಿಂಸೆಗೆ ಬೇಸತ್ತು ವಸತಿ ಗೃಹ ಸಿಗದೇ ರೇಷ್ಮೆ ಇಲಾಖೆಯ ನೌಕರ ಸಾವಿಗೆ ಯತ್ನ

ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕರ ಹಿಂಸೆಗೆ ಬೇಸತ್ತು ಕಛೇರಿಯಲ್ಲೇ ವಿಷ ಸೇವನೆ.
ನೌಕರನ ಪರಿಸ್ಥಿತಿ ಗಂಭೀರ.

ಚಾಮರಾಜನಗರ:ಕೊಳ್ಳೇಗಾಲ ತಾಲ್ಲೂಕಿನ ಮಲ್ಲಳ್ಳಿಮಾಳ ಗ್ರಾಮದ ಲೋಕೇಶ್ ಎಂಬುವವರು ರೇಷ್ಮೆ ಇಲಾಖೆಯಲ್ಲಿ ಡಿ ಗ್ರೂಪ್ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದು. ಇಬ್ಬರು ಮಕ್ಕಳನ್ನು ಚಾ.ನಗರದ ಸೆಂಟ್ ಜೋಸೆಫ್ ಶಾಲೆಗೆ ಸೇರಿಸಿ ನಗರದಲ್ಲೇ ಉಳಿದಿದ್ದು ೧ ವರ್ಷದಿಂದ ವಸತಿ ಗೃಹಕ್ಕಾಗಿ ಅರ್ಜಿ ಸಲ್ಲಿಸಿ ಅಳೆದು ಸಾಕಾಗಿದ್ದರು. ಬುಧವಾರ ರೇಷ್ಮೆ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾದ ಶ್ವೇತಾ ಅವರಿಗೆ ಮನವಿ ಸಲ್ಲಿಸಿ ಮತ್ತೊಮ್ಮೆ ವಸತಿ ಗೃಹ ಕಲ್ಪಿಸುವಂತೆ ಕೇಳಿಕೊಂಡಿದ್ದರು.

ಲೋಕೇಶ್ ಅವರಿಗೆ ಒಂದು ವರ್ಷಗಳಿಂದಲೂ ಮಾನಸಿಕ ಹಿಂಸೆ ನೀಡುತ್ತಿದ್ದ, ಜಾತಿ ದೌರ್ಜನ್ಯ ಮಾಡುತ್ತಿದ್ದ ಅಧಿಕಾರಿ ಶ್ವೇತಾ ಅವರು ನಾನು ಇರುವವರೆಗೂ ನೀನು ವಸತಿ ಗೃಹ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂಬ ದರ್ಪದ ಮಾತುಗಳನ್ನು ಹಾಡಿದ್ದು, ಮನನೊಂದ ನೌಕರ ಕಛೇರಿಯಲ್ಲೇ ವಿಷ ಕುಡಿದು ಸಾವಿಗೆ ಯತ್ನಿಸಿದ್ದಾರೆ.

ಸದ್ಯಕ್ಕೆ ಚಾ.ನಗರದ ಸಿಮ್ಸ್ ಆಸ್ಪತ್ರೆಯಲ್ಲಿ ಲೋಕೇಶ್ ಅವರನ್ನು ದಾಖಲು ಮಾಡಿದ್ದು ಪರಿಸ್ಥಿತಿ ಗಂಭೀರವಾಗಿದೆ ಎಂದು ಲೋಕೇಶ್ ಅವರ ಪತ್ನಿ ಸುಧಾಮಣಿ ಆಂದೋಲನಕ್ಕೆ ಮಾಹಿತಿ ನೀಡಿದರು

andolanait

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

12 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

12 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

12 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

12 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

13 hours ago