ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕರ ಹಿಂಸೆಗೆ ಬೇಸತ್ತು ಕಛೇರಿಯಲ್ಲೇ ವಿಷ ಸೇವನೆ.
ನೌಕರನ ಪರಿಸ್ಥಿತಿ ಗಂಭೀರ.
ಚಾಮರಾಜನಗರ:ಕೊಳ್ಳೇಗಾಲ ತಾಲ್ಲೂಕಿನ ಮಲ್ಲಳ್ಳಿಮಾಳ ಗ್ರಾಮದ ಲೋಕೇಶ್ ಎಂಬುವವರು ರೇಷ್ಮೆ ಇಲಾಖೆಯಲ್ಲಿ ಡಿ ಗ್ರೂಪ್ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದು. ಇಬ್ಬರು ಮಕ್ಕಳನ್ನು ಚಾ.ನಗರದ ಸೆಂಟ್ ಜೋಸೆಫ್ ಶಾಲೆಗೆ ಸೇರಿಸಿ ನಗರದಲ್ಲೇ ಉಳಿದಿದ್ದು ೧ ವರ್ಷದಿಂದ ವಸತಿ ಗೃಹಕ್ಕಾಗಿ ಅರ್ಜಿ ಸಲ್ಲಿಸಿ ಅಳೆದು ಸಾಕಾಗಿದ್ದರು. ಬುಧವಾರ ರೇಷ್ಮೆ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾದ ಶ್ವೇತಾ ಅವರಿಗೆ ಮನವಿ ಸಲ್ಲಿಸಿ ಮತ್ತೊಮ್ಮೆ ವಸತಿ ಗೃಹ ಕಲ್ಪಿಸುವಂತೆ ಕೇಳಿಕೊಂಡಿದ್ದರು.
ಲೋಕೇಶ್ ಅವರಿಗೆ ಒಂದು ವರ್ಷಗಳಿಂದಲೂ ಮಾನಸಿಕ ಹಿಂಸೆ ನೀಡುತ್ತಿದ್ದ, ಜಾತಿ ದೌರ್ಜನ್ಯ ಮಾಡುತ್ತಿದ್ದ ಅಧಿಕಾರಿ ಶ್ವೇತಾ ಅವರು ನಾನು ಇರುವವರೆಗೂ ನೀನು ವಸತಿ ಗೃಹ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂಬ ದರ್ಪದ ಮಾತುಗಳನ್ನು ಹಾಡಿದ್ದು, ಮನನೊಂದ ನೌಕರ ಕಛೇರಿಯಲ್ಲೇ ವಿಷ ಕುಡಿದು ಸಾವಿಗೆ ಯತ್ನಿಸಿದ್ದಾರೆ.
ಸದ್ಯಕ್ಕೆ ಚಾ.ನಗರದ ಸಿಮ್ಸ್ ಆಸ್ಪತ್ರೆಯಲ್ಲಿ ಲೋಕೇಶ್ ಅವರನ್ನು ದಾಖಲು ಮಾಡಿದ್ದು ಪರಿಸ್ಥಿತಿ ಗಂಭೀರವಾಗಿದೆ ಎಂದು ಲೋಕೇಶ್ ಅವರ ಪತ್ನಿ ಸುಧಾಮಣಿ ಆಂದೋಲನಕ್ಕೆ ಮಾಹಿತಿ ನೀಡಿದರು
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…
ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…
ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…