ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕರ ಹಿಂಸೆಗೆ ಬೇಸತ್ತು ಕಛೇರಿಯಲ್ಲೇ ವಿಷ ಸೇವನೆ.
ನೌಕರನ ಪರಿಸ್ಥಿತಿ ಗಂಭೀರ.
ಚಾಮರಾಜನಗರ:ಕೊಳ್ಳೇಗಾಲ ತಾಲ್ಲೂಕಿನ ಮಲ್ಲಳ್ಳಿಮಾಳ ಗ್ರಾಮದ ಲೋಕೇಶ್ ಎಂಬುವವರು ರೇಷ್ಮೆ ಇಲಾಖೆಯಲ್ಲಿ ಡಿ ಗ್ರೂಪ್ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದು. ಇಬ್ಬರು ಮಕ್ಕಳನ್ನು ಚಾ.ನಗರದ ಸೆಂಟ್ ಜೋಸೆಫ್ ಶಾಲೆಗೆ ಸೇರಿಸಿ ನಗರದಲ್ಲೇ ಉಳಿದಿದ್ದು ೧ ವರ್ಷದಿಂದ ವಸತಿ ಗೃಹಕ್ಕಾಗಿ ಅರ್ಜಿ ಸಲ್ಲಿಸಿ ಅಳೆದು ಸಾಕಾಗಿದ್ದರು. ಬುಧವಾರ ರೇಷ್ಮೆ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾದ ಶ್ವೇತಾ ಅವರಿಗೆ ಮನವಿ ಸಲ್ಲಿಸಿ ಮತ್ತೊಮ್ಮೆ ವಸತಿ ಗೃಹ ಕಲ್ಪಿಸುವಂತೆ ಕೇಳಿಕೊಂಡಿದ್ದರು.
ಲೋಕೇಶ್ ಅವರಿಗೆ ಒಂದು ವರ್ಷಗಳಿಂದಲೂ ಮಾನಸಿಕ ಹಿಂಸೆ ನೀಡುತ್ತಿದ್ದ, ಜಾತಿ ದೌರ್ಜನ್ಯ ಮಾಡುತ್ತಿದ್ದ ಅಧಿಕಾರಿ ಶ್ವೇತಾ ಅವರು ನಾನು ಇರುವವರೆಗೂ ನೀನು ವಸತಿ ಗೃಹ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂಬ ದರ್ಪದ ಮಾತುಗಳನ್ನು ಹಾಡಿದ್ದು, ಮನನೊಂದ ನೌಕರ ಕಛೇರಿಯಲ್ಲೇ ವಿಷ ಕುಡಿದು ಸಾವಿಗೆ ಯತ್ನಿಸಿದ್ದಾರೆ.
ಸದ್ಯಕ್ಕೆ ಚಾ.ನಗರದ ಸಿಮ್ಸ್ ಆಸ್ಪತ್ರೆಯಲ್ಲಿ ಲೋಕೇಶ್ ಅವರನ್ನು ದಾಖಲು ಮಾಡಿದ್ದು ಪರಿಸ್ಥಿತಿ ಗಂಭೀರವಾಗಿದೆ ಎಂದು ಲೋಕೇಶ್ ಅವರ ಪತ್ನಿ ಸುಧಾಮಣಿ ಆಂದೋಲನಕ್ಕೆ ಮಾಹಿತಿ ನೀಡಿದರು
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…