ಜಿಲ್ಲೆಗಳು

ಶವಾಗಾರದಲ್ಲಿ ವಿಕೃತಿ ಮೆರೆದ ಸಿಬ್ಬಂದಿ

ಮಡಿಕೇರಿ ನಗರ ಪೊಲೀಸ್ ಠಾಣೆಗೆ ದೂರು

ಮಡಿಕೇರಿ: ಮರಣೋತ್ತರ ಪರೀಕ್ಷೆ ನಡೆಸಲು ಇರುವ ಜಾಗದಲ್ಲಿ ಸಿಬ್ಬಂದಿಯೊಬ್ಬ ಕಾಮದಾಟ ನಡೆಸುತ್ತಿರುವ ಅರೋಪ ಕೇಳಿ ಬಂದಿದೆ. ಅಲ್ಲದೆ, ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋಗಳನ್ನು ತನ್ನ ಮೊಬೈಲ್‌ನಲ್ಲಿ ತೆಗೆದು ವಿಕೃತಿ ಮೆರೆದಿರುವ ಆರೋಪದಡಿ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಡಿಕೇರಿಯ ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಡಿಕೇರಿ ತಾಲೂಕಿನ ಕಡಗದಾಳು ಗ್ರಾಮದ ಸೈಯ್ಯದ್ ಎಂಬಾತನೇ ಹೇಯ ಕೃತ್ಯ ಎಸಗಿರುವ ಆರೋಪಿ.

ಸಯ್ಯದ್ ೨೦೨೧ರ ಏಪ್ರಿಲ್ ತಿಂಗಳಿನಲ್ಲಿ ಗುತ್ತಿಗೆ ಆಧಾರದಲ್ಲಿ ಶವಾಗಾರದ ಅಟೆಂಡರ್ ಆಗಿ ಕೆಲಸಕ್ಕೆ ಸೇರಿದ್ದ. ಕೋವಿಡ್ ಸಂದರ್ಭದಲ್ಲಿ ಈತ ತುಂಬಾ ಶ್ರಮಪಟ್ಟು ಕೆಲಸ ಮಾಡಿದ್ದಾನೆ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಸನ್ಮಾನ ಕೂಡಾ ಮಾಡಿದ್ದರು. ಹೊರಪ್ರಪಂಚಕ್ಕೆ ಗೊತ್ತಾಗದ ರೀತಿಯಲ್ಲಿ ಸೈಯದ್ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಕೆಲವು ಮಹಿಳೆಯರನ್ನು ಫೋನ್ ಕರೆಮಾಡಿ ಶವಾಗಾರಕ್ಕೆ ಕರೆಸಿಕೊಳ್ಳುತ್ತಿದ್ದ ಎನ್ನಲಾಗಿದೆ. ಅಷ್ಟೇ ಅಲ್ಲದೇ ಅಪಘಾತ ಸೇರಿದಂತೆ ನಾನಾ ರೀತಿಯಲ್ಲಿ ಸತ್ತು ಶವಾಗಾರಕ್ಕೆ ಸೇರುತ್ತಿದ್ದ ಮಹಿಳೆಯರ ನಗ್ನ ಫೋಟೋಗಳನ್ನು ತೆಗೆದು ತನ್ನ ಮೊಬೈಲ್‌ನಲ್ಲೂ ಇಟ್ಟುಕೊಂಡಿರುವ ಆರೋಪ ಕೇಳಿ ಬಂದಿದೆ.

ಸೈಯದ್ ತಿಂಗಳ ಹಿಂದೆ ಮಡಿಕೇರಿ ನಗರದ ಮನೆಯೊಂದಕ್ಕೆ ನುಗ್ಗಲು ಯತ್ನಿಸಿದ್ದು, ಈ ವೇಳೆ ಜನರಿಗೆ ಸಿಕ್ಕಿಬಿದ್ದಿದ್ದ. ಸ್ಥಳೀಯರು ಸೈಯದ್ ಮೊಬೈಲ್‌ನ್ನು ಪೊಲೀಸ್ ವಶಕ್ಕೆ ನೀಡಿದ್ದರು. ಆತನ ಫೋನ್ ಕರೆಗಳನ್ನು ಪರಿಶೀಲಿಸಿದಾಗ ಆತನ ಯಾರೊಂದಿಗೆಲ್ಲಾ, ಏನೆಲ್ಲಾ ಮಾತನಾಡಿದ್ದಾನೆ ಎಂಬುವುದು ತಿಳಿದು ಬಂದಿದೆ.

ಯಾರಾದರೂ ಮಹಿಳೆಯರು, ಹೆಣ್ಣುಮಕ್ಕಳು ಸತ್ತು ಅವರ ಮೃತದೇಹಗಳನ್ನು ಶವಾಗಾರಕ್ಕೆ ಹಾಕಿದರೆ, ಪೋಸ್ಟ್ ಮಾರ್ಟಂಗೂ ಮೊದಲೇ ಈ ಕಿರಾತಕ ಆ ಸತ್ತ ಮಹಿಳೆಯರ, ಹೆಣ್ಣುಮಕ್ಕಳ ಬೆತ್ತಲೇ ಮೃತದೇಹಗಳ ಫೋಟೋಗಳನ್ನು ತನ್ನ ಮೊಬೈಲ್‌ನಲ್ಲಿ ತೆಗೆದುದಿಟ್ಟುಕೊಳ್ಳುತ್ತಿದ್ದ ಎನ್ನುವ ಘೋರ ವಿಷಯವೂ ಗೊತ್ತಾಗಿದೆ. ಅಷ್ಟೇ ಅಲ್ಲದೇ ಸಾಕಷ್ಟು ಹೆಣ್ಣು ಮಕ್ಕಳು, ಮಹಿಳೆಯರನ್ನು ಸಯ್ಯದ್ ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಎನ್ನುವುದು ಗೊತ್ತಾಗಿದೆ.

ಹಿಂದೂ ಜಾಗರಣಾ ವೇದಿಕೆಯು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ನಿರ್ದೇಶಕ ಹಾಗೂ ಡೀನ್‌ಗೆ ಈತನ ವಿರುದ್ಧ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೆಡಿಕಲ್ ಕಾಲೇಜು ಡೀನ್ ಕಾರಿಯಪ್ಪ ಅವರು ಸಯ್ಯದ್ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಗೆ ನೀಡಿದ್ದಾರೆ. ಮಡಿಕೇರಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

andolana

Recent Posts

ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿದ ಜೆಡಿಎಸ್‌

ಬೆಂಗಳೂರು: ಜೆಡಿಎಸ್‌ ಪಕ್ಷ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ…

57 mins ago

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಶೂನ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಗುಂಡ್ಲುಪೇಟೆ: ಪಂಚ ಗ್ಯಾರಂಟಿಗಳ ಘೋಷಣೆಯೊಂದಿಗೆ ಅಧಿಕಾರಕ್ಕೇರಿದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಂಪೂರ್ಣವಾಗಿ ಕುಸಿದಿದೆ. ಈ ನಡುವೆ ಗ್ಯಾರಂಟಿಗಳಿಂದ ಸರ್ಕಾರಕ್ಕೆ…

1 hour ago

ಸ್ಪೀಕರ್‌ ಆಫ್‌ ದಿ ನೆಸ್ಸೆಟ್‌ ಪದಕ ಪಡೆದ ಮೊದಲ ಜಾಗತಿಕ ನಾಯಕ ಪ್ರಧಾನಿ ನರೇಂದ್ರ ಮೋದಿ

ಇಸ್ರೇಲ್:‌ ಭಾರತ ಮತ್ತು ಇಸ್ರೇಲ್‌ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ…

2 hours ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್‌ ದೇವರಕೊಂಡ-ರಶ್ಮಿಕಾ ಮಂದಣ್ಣ

ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ…

2 hours ago

ಮೈಸೂರು ರೇಷ್ಮೆಗೆ ದೊಡ್ಡ ಇತಿಹಾಸವಿದೆ: ಬಡಗಲಪುರ ನಾಗೇಂದ್ರ

ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…

2 hours ago

ಓದುಗರ ಪತ್ರ: ಬಜೆಟ್ ಪರಿಸರ ಸಂರಕ್ಷಣೆಗೆ ಒತ್ತು ನೀಡಲಿ

ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…

6 hours ago