ಜಿಲ್ಲೆಗಳು

ಶವಾಗಾರದಲ್ಲಿ ವಿಕೃತಿ ಮೆರೆದ ಸಿಬ್ಬಂದಿ

ಮಡಿಕೇರಿ ನಗರ ಪೊಲೀಸ್ ಠಾಣೆಗೆ ದೂರು

ಮಡಿಕೇರಿ: ಮರಣೋತ್ತರ ಪರೀಕ್ಷೆ ನಡೆಸಲು ಇರುವ ಜಾಗದಲ್ಲಿ ಸಿಬ್ಬಂದಿಯೊಬ್ಬ ಕಾಮದಾಟ ನಡೆಸುತ್ತಿರುವ ಅರೋಪ ಕೇಳಿ ಬಂದಿದೆ. ಅಲ್ಲದೆ, ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋಗಳನ್ನು ತನ್ನ ಮೊಬೈಲ್‌ನಲ್ಲಿ ತೆಗೆದು ವಿಕೃತಿ ಮೆರೆದಿರುವ ಆರೋಪದಡಿ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಡಿಕೇರಿಯ ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಡಿಕೇರಿ ತಾಲೂಕಿನ ಕಡಗದಾಳು ಗ್ರಾಮದ ಸೈಯ್ಯದ್ ಎಂಬಾತನೇ ಹೇಯ ಕೃತ್ಯ ಎಸಗಿರುವ ಆರೋಪಿ.

ಸಯ್ಯದ್ ೨೦೨೧ರ ಏಪ್ರಿಲ್ ತಿಂಗಳಿನಲ್ಲಿ ಗುತ್ತಿಗೆ ಆಧಾರದಲ್ಲಿ ಶವಾಗಾರದ ಅಟೆಂಡರ್ ಆಗಿ ಕೆಲಸಕ್ಕೆ ಸೇರಿದ್ದ. ಕೋವಿಡ್ ಸಂದರ್ಭದಲ್ಲಿ ಈತ ತುಂಬಾ ಶ್ರಮಪಟ್ಟು ಕೆಲಸ ಮಾಡಿದ್ದಾನೆ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಸನ್ಮಾನ ಕೂಡಾ ಮಾಡಿದ್ದರು. ಹೊರಪ್ರಪಂಚಕ್ಕೆ ಗೊತ್ತಾಗದ ರೀತಿಯಲ್ಲಿ ಸೈಯದ್ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಕೆಲವು ಮಹಿಳೆಯರನ್ನು ಫೋನ್ ಕರೆಮಾಡಿ ಶವಾಗಾರಕ್ಕೆ ಕರೆಸಿಕೊಳ್ಳುತ್ತಿದ್ದ ಎನ್ನಲಾಗಿದೆ. ಅಷ್ಟೇ ಅಲ್ಲದೇ ಅಪಘಾತ ಸೇರಿದಂತೆ ನಾನಾ ರೀತಿಯಲ್ಲಿ ಸತ್ತು ಶವಾಗಾರಕ್ಕೆ ಸೇರುತ್ತಿದ್ದ ಮಹಿಳೆಯರ ನಗ್ನ ಫೋಟೋಗಳನ್ನು ತೆಗೆದು ತನ್ನ ಮೊಬೈಲ್‌ನಲ್ಲೂ ಇಟ್ಟುಕೊಂಡಿರುವ ಆರೋಪ ಕೇಳಿ ಬಂದಿದೆ.

ಸೈಯದ್ ತಿಂಗಳ ಹಿಂದೆ ಮಡಿಕೇರಿ ನಗರದ ಮನೆಯೊಂದಕ್ಕೆ ನುಗ್ಗಲು ಯತ್ನಿಸಿದ್ದು, ಈ ವೇಳೆ ಜನರಿಗೆ ಸಿಕ್ಕಿಬಿದ್ದಿದ್ದ. ಸ್ಥಳೀಯರು ಸೈಯದ್ ಮೊಬೈಲ್‌ನ್ನು ಪೊಲೀಸ್ ವಶಕ್ಕೆ ನೀಡಿದ್ದರು. ಆತನ ಫೋನ್ ಕರೆಗಳನ್ನು ಪರಿಶೀಲಿಸಿದಾಗ ಆತನ ಯಾರೊಂದಿಗೆಲ್ಲಾ, ಏನೆಲ್ಲಾ ಮಾತನಾಡಿದ್ದಾನೆ ಎಂಬುವುದು ತಿಳಿದು ಬಂದಿದೆ.

ಯಾರಾದರೂ ಮಹಿಳೆಯರು, ಹೆಣ್ಣುಮಕ್ಕಳು ಸತ್ತು ಅವರ ಮೃತದೇಹಗಳನ್ನು ಶವಾಗಾರಕ್ಕೆ ಹಾಕಿದರೆ, ಪೋಸ್ಟ್ ಮಾರ್ಟಂಗೂ ಮೊದಲೇ ಈ ಕಿರಾತಕ ಆ ಸತ್ತ ಮಹಿಳೆಯರ, ಹೆಣ್ಣುಮಕ್ಕಳ ಬೆತ್ತಲೇ ಮೃತದೇಹಗಳ ಫೋಟೋಗಳನ್ನು ತನ್ನ ಮೊಬೈಲ್‌ನಲ್ಲಿ ತೆಗೆದುದಿಟ್ಟುಕೊಳ್ಳುತ್ತಿದ್ದ ಎನ್ನುವ ಘೋರ ವಿಷಯವೂ ಗೊತ್ತಾಗಿದೆ. ಅಷ್ಟೇ ಅಲ್ಲದೇ ಸಾಕಷ್ಟು ಹೆಣ್ಣು ಮಕ್ಕಳು, ಮಹಿಳೆಯರನ್ನು ಸಯ್ಯದ್ ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಎನ್ನುವುದು ಗೊತ್ತಾಗಿದೆ.

ಹಿಂದೂ ಜಾಗರಣಾ ವೇದಿಕೆಯು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ನಿರ್ದೇಶಕ ಹಾಗೂ ಡೀನ್‌ಗೆ ಈತನ ವಿರುದ್ಧ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೆಡಿಕಲ್ ಕಾಲೇಜು ಡೀನ್ ಕಾರಿಯಪ್ಪ ಅವರು ಸಯ್ಯದ್ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಗೆ ನೀಡಿದ್ದಾರೆ. ಮಡಿಕೇರಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago