ಜಿಲ್ಲೆಗಳು

ಶವಾಗಾರದಲ್ಲಿ ವಿಕೃತಿ ಮೆರೆದ ಸಿಬ್ಬಂದಿ

ಮಡಿಕೇರಿ ನಗರ ಪೊಲೀಸ್ ಠಾಣೆಗೆ ದೂರು

ಮಡಿಕೇರಿ: ಮರಣೋತ್ತರ ಪರೀಕ್ಷೆ ನಡೆಸಲು ಇರುವ ಜಾಗದಲ್ಲಿ ಸಿಬ್ಬಂದಿಯೊಬ್ಬ ಕಾಮದಾಟ ನಡೆಸುತ್ತಿರುವ ಅರೋಪ ಕೇಳಿ ಬಂದಿದೆ. ಅಲ್ಲದೆ, ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋಗಳನ್ನು ತನ್ನ ಮೊಬೈಲ್‌ನಲ್ಲಿ ತೆಗೆದು ವಿಕೃತಿ ಮೆರೆದಿರುವ ಆರೋಪದಡಿ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಡಿಕೇರಿಯ ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಡಿಕೇರಿ ತಾಲೂಕಿನ ಕಡಗದಾಳು ಗ್ರಾಮದ ಸೈಯ್ಯದ್ ಎಂಬಾತನೇ ಹೇಯ ಕೃತ್ಯ ಎಸಗಿರುವ ಆರೋಪಿ.

ಸಯ್ಯದ್ ೨೦೨೧ರ ಏಪ್ರಿಲ್ ತಿಂಗಳಿನಲ್ಲಿ ಗುತ್ತಿಗೆ ಆಧಾರದಲ್ಲಿ ಶವಾಗಾರದ ಅಟೆಂಡರ್ ಆಗಿ ಕೆಲಸಕ್ಕೆ ಸೇರಿದ್ದ. ಕೋವಿಡ್ ಸಂದರ್ಭದಲ್ಲಿ ಈತ ತುಂಬಾ ಶ್ರಮಪಟ್ಟು ಕೆಲಸ ಮಾಡಿದ್ದಾನೆ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಸನ್ಮಾನ ಕೂಡಾ ಮಾಡಿದ್ದರು. ಹೊರಪ್ರಪಂಚಕ್ಕೆ ಗೊತ್ತಾಗದ ರೀತಿಯಲ್ಲಿ ಸೈಯದ್ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಕೆಲವು ಮಹಿಳೆಯರನ್ನು ಫೋನ್ ಕರೆಮಾಡಿ ಶವಾಗಾರಕ್ಕೆ ಕರೆಸಿಕೊಳ್ಳುತ್ತಿದ್ದ ಎನ್ನಲಾಗಿದೆ. ಅಷ್ಟೇ ಅಲ್ಲದೇ ಅಪಘಾತ ಸೇರಿದಂತೆ ನಾನಾ ರೀತಿಯಲ್ಲಿ ಸತ್ತು ಶವಾಗಾರಕ್ಕೆ ಸೇರುತ್ತಿದ್ದ ಮಹಿಳೆಯರ ನಗ್ನ ಫೋಟೋಗಳನ್ನು ತೆಗೆದು ತನ್ನ ಮೊಬೈಲ್‌ನಲ್ಲೂ ಇಟ್ಟುಕೊಂಡಿರುವ ಆರೋಪ ಕೇಳಿ ಬಂದಿದೆ.

ಸೈಯದ್ ತಿಂಗಳ ಹಿಂದೆ ಮಡಿಕೇರಿ ನಗರದ ಮನೆಯೊಂದಕ್ಕೆ ನುಗ್ಗಲು ಯತ್ನಿಸಿದ್ದು, ಈ ವೇಳೆ ಜನರಿಗೆ ಸಿಕ್ಕಿಬಿದ್ದಿದ್ದ. ಸ್ಥಳೀಯರು ಸೈಯದ್ ಮೊಬೈಲ್‌ನ್ನು ಪೊಲೀಸ್ ವಶಕ್ಕೆ ನೀಡಿದ್ದರು. ಆತನ ಫೋನ್ ಕರೆಗಳನ್ನು ಪರಿಶೀಲಿಸಿದಾಗ ಆತನ ಯಾರೊಂದಿಗೆಲ್ಲಾ, ಏನೆಲ್ಲಾ ಮಾತನಾಡಿದ್ದಾನೆ ಎಂಬುವುದು ತಿಳಿದು ಬಂದಿದೆ.

ಯಾರಾದರೂ ಮಹಿಳೆಯರು, ಹೆಣ್ಣುಮಕ್ಕಳು ಸತ್ತು ಅವರ ಮೃತದೇಹಗಳನ್ನು ಶವಾಗಾರಕ್ಕೆ ಹಾಕಿದರೆ, ಪೋಸ್ಟ್ ಮಾರ್ಟಂಗೂ ಮೊದಲೇ ಈ ಕಿರಾತಕ ಆ ಸತ್ತ ಮಹಿಳೆಯರ, ಹೆಣ್ಣುಮಕ್ಕಳ ಬೆತ್ತಲೇ ಮೃತದೇಹಗಳ ಫೋಟೋಗಳನ್ನು ತನ್ನ ಮೊಬೈಲ್‌ನಲ್ಲಿ ತೆಗೆದುದಿಟ್ಟುಕೊಳ್ಳುತ್ತಿದ್ದ ಎನ್ನುವ ಘೋರ ವಿಷಯವೂ ಗೊತ್ತಾಗಿದೆ. ಅಷ್ಟೇ ಅಲ್ಲದೇ ಸಾಕಷ್ಟು ಹೆಣ್ಣು ಮಕ್ಕಳು, ಮಹಿಳೆಯರನ್ನು ಸಯ್ಯದ್ ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಎನ್ನುವುದು ಗೊತ್ತಾಗಿದೆ.

ಹಿಂದೂ ಜಾಗರಣಾ ವೇದಿಕೆಯು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ನಿರ್ದೇಶಕ ಹಾಗೂ ಡೀನ್‌ಗೆ ಈತನ ವಿರುದ್ಧ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೆಡಿಕಲ್ ಕಾಲೇಜು ಡೀನ್ ಕಾರಿಯಪ್ಪ ಅವರು ಸಯ್ಯದ್ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಗೆ ನೀಡಿದ್ದಾರೆ. ಮಡಿಕೇರಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago