ಮೈಸೂರು: ಎಸ್.ಪ್ರಕಾಶ್ ಪ್ರಿಯಾದರ್ಶನ್ ಸ್ನೇಹಬಳಗದ ವತಿಯಿಂದ ಶನಿವಾರ 10 ಕುರಿಮರಿಗಳು ಮತ್ತು ನೀರಿನ ಕ್ಯಾನ್ಗಳನ್ನು ವಿತರಿಸಲಾಯಿತು.
ನಗರದ ಆರಾಧ್ಯ ಮಹಾಸಭಾ ಸಭಾಂಗಣದಲ್ಲಿ ‘ಕುರುಬರಿಂದ ಕುರುಬರಿಗಾಗಿ’ ಆಯೋಜಿಸಿದ್ದ ಕುರಿಮರಿಗಳನ್ನು ವಿತರಣಾ ಕಾರ್ಯಕ್ರಮದಲ್ಲಿ ಲಾಟರಿ ಎತ್ತುವ ಮೂಲಕ ಹತ್ತು ಕುರಿಮರಿ ಮತ್ತು ನೀರಿನ ಕ್ಯಾನ್ಗಳನ್ನು ಆಧ್ಯಾತ್ಮಿಕ ಗುರು ರಾಮಲಿಂಗು ಗುರೂಜಿ ಅವರು ವಿತರಿಸಿದರು.
ಬಳಿಕ ಮಾತನಾಡಿದ ಅವರು, ಕುರಿಗಳನ್ನು ಬಳಸಿಕೊಂಡು ಜೀವನ ರೂಪಿಸಿಕೊಳ್ಳಿ, ಪ್ರತಿಯೊಬ್ಬರೂ ಸಹಾಯ ಮನೋಭಾವ ಬೆಳಸಿಕೊಂಡು ಅದನ್ನು ಕಾರ್ಯರೂಪಕ್ಕೆ ತರಬೇಕು. ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಪರರಿಗೆ ಸ್ಪಂದಿಸಬೇಕು, ಮಾನವೀಯತೆಯನ್ನು ಬೆಳಸಿಕೊಳ್ಳಬೇಕು. ಇದು ಶ್ಲಾಘನೀಯ ಸೇವಾ ಕಾರ್ಯ ಎಂದರು.
ಹುಣಸೂರು, ಕೆ.ಆರ್.ನಗರ, ಪಿರಿಯಾಪಟಣ್ಣ ತಾಲ್ಲೂಕಿನ ಇಬ್ಬರಿಗೆ, ತಿ.ನರಸೀಪುರ ತಾಲ್ಲೂಕಿನ ಮೂವರಿಗೆ ಮತ್ತು ವರುಣ ಕ್ಷೇತ್ರದ ಒಬ್ಬರಿಗೆ ಕುರಿಮರಿಗಳನ್ನು ವಿತರಣೆ ಮಾಡಲಾಯಿತು. ಮೈಸೂರು ನಗರ ಜೆಡಿಎಸ್ ಕಾರ್ಯಾಧ್ಯಕ್ಷ ಎಸ್.ಪ್ರಕಾಶ್ ಪ್ರಿಯಾದರ್ಶನ್, ಪ್ರೊ.ಪ್ರೇಮಕುಮಾರಿ, ಮುಖಂಡರಾದ ಗಿರೀಶ್ ಗೌಡ, ಪ್ರಮೋದ್, ಅಕ್ಷಯ್, ಉಷಾ ರಮೇಶ್, ಬಾನು, ಮಹೇಂದ್ರಕಾಗಿನೆಲೆ, ಸುರೇಶ್, ಸುಂದರ್ರಾಜ್, ಪ್ರಕಾಶ್ ಗೌಡ, ಪುರುಷೋತ್ತಮ್, ಎಂ.ದೀಪಕ್,ಲಿಂಗರಾಜು, ಎಲ್.ಆರ್.ಪ್ರಮೋದ್, ಪವನ್ ಕುಮಾರ್ ಇತರರು ಹಾಜರಿದ್ದರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…