ಜಿಲ್ಲೆಗಳು

ರಾಜಕಾರಣದ ತಾಳಕ್ಕೆ ಕುಣಿದು ದಸರಾ ಘನತೆ ಕುಗ್ಗಿಸಿದ ಜಿಲ್ಲಾಡಳಿತ: ಕೆ.ವಿ.ಮಲ್ಲೇಶ್

ಮೈಸೂರು: ರಾಜಕಾರಣಿಗಳ ತಾಳಕ್ಕೆ ಕುಣಿದ ಜಿಲ್ಲಾಡಳಿತ ೨೦೨೨ರ ದಸರಾ ಮಹೋತ್ಸವದ ಘನತೆಯನ್ನು ಕುಗ್ಗಿಸಿರುವುದು ನಾಚಿಕೆಗೇಡಿನ ಸಂಗತಿ.
ಐತಿಹಾಸಿಕ ಹಿನ್ನೆಲೆ ಹೊಂದಿರುವ ದಸರಾ ಮಹೋತ್ಸವ ಈ ಹಿಂದಿನ ವರ್ಷಗಳಲ್ಲಿ ಗರಿಷ್ಠ ಪ್ರಮಾಣದ ಗಂಭೀರತೆ ಪಡೆದುಕೊಂಡಿತ್ತು. ಆದರೆ, ಕಳೆದ ಎರಡು ವರ್ಷಗಳಿಂದ ಕರೋನಾ ಕಾರಣಕ್ಕಾಗಿ ಸರಳ ದಸರಾ ಮಾಡಲಾಗಿದೆ ಎಂಬ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿ ದಸರಾ ಎಂಬ ಘೋಷಣೆ ಮಾಡಿದ್ದುದು ಸರಿ. ಆದರೆ, ಈ ಹಿನ್ನೆಲೆಯಲ್ಲಿ ನಡೆದ ಅವಾಂತರದ ಹೊಣೆಯನ್ನು ದಸರಾ ವಿಶೇಷಾಧಿಕಾರಿಗಳೇ ಆದ ಜಿಲ್ಲಾಧಿಕಾರಿಗಳೇ ಹೊರಬೇಕು ಎಂದು
ಮೈಸೂರು ಮಹಾನಗರಪಾಲಿಕೆ ಮಾಜಿ ಸದಸ್ಯ ಕೆ.ವಿ.ಮಲ್ಲೇಶ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಪಾಸ್ ನೀಡುವ ಸಂದರ್ಭದಲ್ಲಿ ಅಳೆದು-ತೂಗಿ ಸೀಮಿತ ಮಂದಿಗಷ್ಟೇ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಆ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ, ಕಡಲೆಪುರಿ ಹಂಚಿದಂತೆ ಪಾಸ್‌ಗಳನ್ನು ಹಂಚಿದ ಪರಿಣಾಮ ಜಂಬೂಸವಾರಿ ವೇಳೆ ಇನ್ನಿಲ್ಲದ ಸಮಸ್ಯೆ ಸೃಷ್ಟಿಯಾಗಿತ್ತು. ಇದಕ್ಕೆ ಜಿಲ್ಲಾಧಿಕಾರಿಗಳೇ ನೇರ ಕಾರಣಕರ್ತರು ಎಂದಿದ್ದಾರೆ.

ಅಂಬಾರಿ ಹೊತ್ತ ಆನೆ ಪುಷ್ಪಾರ್ಚನೆ ಜಾಗಕ್ಕೆ ಬರಲು ಪರದಾಡಬೇಕಾದ ಸನ್ನಿವೇಶ ಸೃಷ್ಟಿಯಾಗಿದ್ದುದು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ದೊಡ್ಡ ವೈಫಲ್ಯ. ಸಾರ್ವಜನಿಕ ಮಹೋತ್ಸವವಾಗಬೇಕಾದ ದಸರಾ ಜಂಬೂಸವಾರಿ ಕಾರ್‍ಯಕ್ರಮ ಕೇವಲ ಪಕ್ಷವೊಂದರ ಕಾರ್‍ಯಕ್ರಮದಂತೆ ಬಿಂಬಿತವಾಗಿದ್ದುದು, ಬಿಜೆಪಿ ಕಾರ್‍ಯಕರ್ತರೇ ಎಲ್ಲೆಡೆ ಆವರಿಸಿಕೊಂಡಿದ್ದುದು ನಾಚಿಕೆಗೇಡಿನ ಸಂಗತಿ ಎಂದು ಅವರ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ದಸರಾ ಮಹೋತ್ಸವದ ಬಂದೋಬಸ್ತ್‌ಗಾಗಿ ಐದು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಿದ್ದರೂ, ಅಂಬಾರಿ ಸಾಗುವ ಮಾರ್ಗದಲ್ಲಿ ತುಂಬಿದ್ದ ಸಾರ್ವಜನಿಕರನ್ನು ನಿಯಂತ್ರಿಸಲು ಸಾಧ್ಯವಾಗದಿರುವುದು ಅತ್ಯಂತ ನೋವಿನ ವಿಚಾರ ಎಂದಿದ್ದಾರೆ.

ದಸರಾ ಮಹೋತ್ಸವದ ವೇಳೆ ಪಾಸ್ ಮುದ್ರಿಸಿ ಹಂಚುವುದು ಸರ್ವೇ ಸಾಮಾನ್ಯ. ಆದರೆ, ಮುದ್ರಿಸಲಾದ ಪಾಸ್‌ಗಳ ಪೈಕಿ ಹತ್ತು ಸಾವಿರ ಪಾಸ್‌ಗಳನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ತಮ್ಮ ಸ್ವಕ್ಷೇತ್ರ ಯಶವಂತಪುರಕ್ಕೆ ತೆಗೆದುಕೊಂಡಿದ್ದಾರೆ ಎಂಬ ಆರೋಪ ಮಾಧ್ಯಮಗಳ ಮೂಲಕ ಜಗಜ್ಜಾಹಿರಾಗಿದೆ. ಇದು ಜಿಲ್ಲಾ ಉಸ್ತುವಾರಿ ಸಚಿವರು ಮೈಸೂರು ಜನತೆಗೆ ಮಾಡಿದ ಪರಮದ್ರೋಹದ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿದ್ದಾರೆ.

ಅಧಿಕಾರಿ ವರ್ಗಕ್ಕೆ ಸರ್ಕಾರ ಹಾಗೂ ಆಡಳಿತಾರೂಢ ಪಕ್ಷದ ಒತ್ತಡ ಇರುವುದು ಸಹಜ. ಆದರೆ, ಅಧಿಕಾರಿಗಳು ತಮ್ಮ ಇತಿಮೀತಿ ಅರಿಯದೆ, ಕಾನೂನು ಪಾಲಿಸದೆ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಿದ್ದುದೇ ಜಂಬೂಸವಾರಿ ವೇಳೆ ಆದಂತಹ ಎಲ್ಲ ದುರಂತಗಳಿಗೆ ಕಾರಣ ಎಂದಿದ್ದಾರೆ.

ಜಂಬೂಸವಾರಿಯ ಎಲ್ಲ ಅವಾಂತರಗಳ ನೈತಿಕ ಹೊಣೆ ಹೊತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಕೂಡಲೇ ಮೈಸೂರು ಜನತೆ ಮುಂದೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಲೇ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾಯಿಸಿ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

14 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

14 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

14 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

1 day ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

1 day ago