ಜಿಲ್ಲೆಗಳು

ರಾಜಕಾರಣದ ತಾಳಕ್ಕೆ ಕುಣಿದು ದಸರಾ ಘನತೆ ಕುಗ್ಗಿಸಿದ ಜಿಲ್ಲಾಡಳಿತ: ಕೆ.ವಿ.ಮಲ್ಲೇಶ್

ಮೈಸೂರು: ರಾಜಕಾರಣಿಗಳ ತಾಳಕ್ಕೆ ಕುಣಿದ ಜಿಲ್ಲಾಡಳಿತ ೨೦೨೨ರ ದಸರಾ ಮಹೋತ್ಸವದ ಘನತೆಯನ್ನು ಕುಗ್ಗಿಸಿರುವುದು ನಾಚಿಕೆಗೇಡಿನ ಸಂಗತಿ.
ಐತಿಹಾಸಿಕ ಹಿನ್ನೆಲೆ ಹೊಂದಿರುವ ದಸರಾ ಮಹೋತ್ಸವ ಈ ಹಿಂದಿನ ವರ್ಷಗಳಲ್ಲಿ ಗರಿಷ್ಠ ಪ್ರಮಾಣದ ಗಂಭೀರತೆ ಪಡೆದುಕೊಂಡಿತ್ತು. ಆದರೆ, ಕಳೆದ ಎರಡು ವರ್ಷಗಳಿಂದ ಕರೋನಾ ಕಾರಣಕ್ಕಾಗಿ ಸರಳ ದಸರಾ ಮಾಡಲಾಗಿದೆ ಎಂಬ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿ ದಸರಾ ಎಂಬ ಘೋಷಣೆ ಮಾಡಿದ್ದುದು ಸರಿ. ಆದರೆ, ಈ ಹಿನ್ನೆಲೆಯಲ್ಲಿ ನಡೆದ ಅವಾಂತರದ ಹೊಣೆಯನ್ನು ದಸರಾ ವಿಶೇಷಾಧಿಕಾರಿಗಳೇ ಆದ ಜಿಲ್ಲಾಧಿಕಾರಿಗಳೇ ಹೊರಬೇಕು ಎಂದು
ಮೈಸೂರು ಮಹಾನಗರಪಾಲಿಕೆ ಮಾಜಿ ಸದಸ್ಯ ಕೆ.ವಿ.ಮಲ್ಲೇಶ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಪಾಸ್ ನೀಡುವ ಸಂದರ್ಭದಲ್ಲಿ ಅಳೆದು-ತೂಗಿ ಸೀಮಿತ ಮಂದಿಗಷ್ಟೇ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಆ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ, ಕಡಲೆಪುರಿ ಹಂಚಿದಂತೆ ಪಾಸ್‌ಗಳನ್ನು ಹಂಚಿದ ಪರಿಣಾಮ ಜಂಬೂಸವಾರಿ ವೇಳೆ ಇನ್ನಿಲ್ಲದ ಸಮಸ್ಯೆ ಸೃಷ್ಟಿಯಾಗಿತ್ತು. ಇದಕ್ಕೆ ಜಿಲ್ಲಾಧಿಕಾರಿಗಳೇ ನೇರ ಕಾರಣಕರ್ತರು ಎಂದಿದ್ದಾರೆ.

ಅಂಬಾರಿ ಹೊತ್ತ ಆನೆ ಪುಷ್ಪಾರ್ಚನೆ ಜಾಗಕ್ಕೆ ಬರಲು ಪರದಾಡಬೇಕಾದ ಸನ್ನಿವೇಶ ಸೃಷ್ಟಿಯಾಗಿದ್ದುದು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ದೊಡ್ಡ ವೈಫಲ್ಯ. ಸಾರ್ವಜನಿಕ ಮಹೋತ್ಸವವಾಗಬೇಕಾದ ದಸರಾ ಜಂಬೂಸವಾರಿ ಕಾರ್‍ಯಕ್ರಮ ಕೇವಲ ಪಕ್ಷವೊಂದರ ಕಾರ್‍ಯಕ್ರಮದಂತೆ ಬಿಂಬಿತವಾಗಿದ್ದುದು, ಬಿಜೆಪಿ ಕಾರ್‍ಯಕರ್ತರೇ ಎಲ್ಲೆಡೆ ಆವರಿಸಿಕೊಂಡಿದ್ದುದು ನಾಚಿಕೆಗೇಡಿನ ಸಂಗತಿ ಎಂದು ಅವರ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ದಸರಾ ಮಹೋತ್ಸವದ ಬಂದೋಬಸ್ತ್‌ಗಾಗಿ ಐದು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಿದ್ದರೂ, ಅಂಬಾರಿ ಸಾಗುವ ಮಾರ್ಗದಲ್ಲಿ ತುಂಬಿದ್ದ ಸಾರ್ವಜನಿಕರನ್ನು ನಿಯಂತ್ರಿಸಲು ಸಾಧ್ಯವಾಗದಿರುವುದು ಅತ್ಯಂತ ನೋವಿನ ವಿಚಾರ ಎಂದಿದ್ದಾರೆ.

ದಸರಾ ಮಹೋತ್ಸವದ ವೇಳೆ ಪಾಸ್ ಮುದ್ರಿಸಿ ಹಂಚುವುದು ಸರ್ವೇ ಸಾಮಾನ್ಯ. ಆದರೆ, ಮುದ್ರಿಸಲಾದ ಪಾಸ್‌ಗಳ ಪೈಕಿ ಹತ್ತು ಸಾವಿರ ಪಾಸ್‌ಗಳನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ತಮ್ಮ ಸ್ವಕ್ಷೇತ್ರ ಯಶವಂತಪುರಕ್ಕೆ ತೆಗೆದುಕೊಂಡಿದ್ದಾರೆ ಎಂಬ ಆರೋಪ ಮಾಧ್ಯಮಗಳ ಮೂಲಕ ಜಗಜ್ಜಾಹಿರಾಗಿದೆ. ಇದು ಜಿಲ್ಲಾ ಉಸ್ತುವಾರಿ ಸಚಿವರು ಮೈಸೂರು ಜನತೆಗೆ ಮಾಡಿದ ಪರಮದ್ರೋಹದ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿದ್ದಾರೆ.

ಅಧಿಕಾರಿ ವರ್ಗಕ್ಕೆ ಸರ್ಕಾರ ಹಾಗೂ ಆಡಳಿತಾರೂಢ ಪಕ್ಷದ ಒತ್ತಡ ಇರುವುದು ಸಹಜ. ಆದರೆ, ಅಧಿಕಾರಿಗಳು ತಮ್ಮ ಇತಿಮೀತಿ ಅರಿಯದೆ, ಕಾನೂನು ಪಾಲಿಸದೆ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಿದ್ದುದೇ ಜಂಬೂಸವಾರಿ ವೇಳೆ ಆದಂತಹ ಎಲ್ಲ ದುರಂತಗಳಿಗೆ ಕಾರಣ ಎಂದಿದ್ದಾರೆ.

ಜಂಬೂಸವಾರಿಯ ಎಲ್ಲ ಅವಾಂತರಗಳ ನೈತಿಕ ಹೊಣೆ ಹೊತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಕೂಡಲೇ ಮೈಸೂರು ಜನತೆ ಮುಂದೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಲೇ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾಯಿಸಿ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

5 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

5 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

6 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

8 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

11 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

11 hours ago