ಜಿಲ್ಲೆಗಳು

ರಾಜಕಾರಣದ ತಾಳಕ್ಕೆ ಕುಣಿದು ದಸರಾ ಘನತೆ ಕುಗ್ಗಿಸಿದ ಜಿಲ್ಲಾಡಳಿತ: ಕೆ.ವಿ.ಮಲ್ಲೇಶ್

ಮೈಸೂರು: ರಾಜಕಾರಣಿಗಳ ತಾಳಕ್ಕೆ ಕುಣಿದ ಜಿಲ್ಲಾಡಳಿತ ೨೦೨೨ರ ದಸರಾ ಮಹೋತ್ಸವದ ಘನತೆಯನ್ನು ಕುಗ್ಗಿಸಿರುವುದು ನಾಚಿಕೆಗೇಡಿನ ಸಂಗತಿ.
ಐತಿಹಾಸಿಕ ಹಿನ್ನೆಲೆ ಹೊಂದಿರುವ ದಸರಾ ಮಹೋತ್ಸವ ಈ ಹಿಂದಿನ ವರ್ಷಗಳಲ್ಲಿ ಗರಿಷ್ಠ ಪ್ರಮಾಣದ ಗಂಭೀರತೆ ಪಡೆದುಕೊಂಡಿತ್ತು. ಆದರೆ, ಕಳೆದ ಎರಡು ವರ್ಷಗಳಿಂದ ಕರೋನಾ ಕಾರಣಕ್ಕಾಗಿ ಸರಳ ದಸರಾ ಮಾಡಲಾಗಿದೆ ಎಂಬ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿ ದಸರಾ ಎಂಬ ಘೋಷಣೆ ಮಾಡಿದ್ದುದು ಸರಿ. ಆದರೆ, ಈ ಹಿನ್ನೆಲೆಯಲ್ಲಿ ನಡೆದ ಅವಾಂತರದ ಹೊಣೆಯನ್ನು ದಸರಾ ವಿಶೇಷಾಧಿಕಾರಿಗಳೇ ಆದ ಜಿಲ್ಲಾಧಿಕಾರಿಗಳೇ ಹೊರಬೇಕು ಎಂದು
ಮೈಸೂರು ಮಹಾನಗರಪಾಲಿಕೆ ಮಾಜಿ ಸದಸ್ಯ ಕೆ.ವಿ.ಮಲ್ಲೇಶ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಪಾಸ್ ನೀಡುವ ಸಂದರ್ಭದಲ್ಲಿ ಅಳೆದು-ತೂಗಿ ಸೀಮಿತ ಮಂದಿಗಷ್ಟೇ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಆ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ, ಕಡಲೆಪುರಿ ಹಂಚಿದಂತೆ ಪಾಸ್‌ಗಳನ್ನು ಹಂಚಿದ ಪರಿಣಾಮ ಜಂಬೂಸವಾರಿ ವೇಳೆ ಇನ್ನಿಲ್ಲದ ಸಮಸ್ಯೆ ಸೃಷ್ಟಿಯಾಗಿತ್ತು. ಇದಕ್ಕೆ ಜಿಲ್ಲಾಧಿಕಾರಿಗಳೇ ನೇರ ಕಾರಣಕರ್ತರು ಎಂದಿದ್ದಾರೆ.

ಅಂಬಾರಿ ಹೊತ್ತ ಆನೆ ಪುಷ್ಪಾರ್ಚನೆ ಜಾಗಕ್ಕೆ ಬರಲು ಪರದಾಡಬೇಕಾದ ಸನ್ನಿವೇಶ ಸೃಷ್ಟಿಯಾಗಿದ್ದುದು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ದೊಡ್ಡ ವೈಫಲ್ಯ. ಸಾರ್ವಜನಿಕ ಮಹೋತ್ಸವವಾಗಬೇಕಾದ ದಸರಾ ಜಂಬೂಸವಾರಿ ಕಾರ್‍ಯಕ್ರಮ ಕೇವಲ ಪಕ್ಷವೊಂದರ ಕಾರ್‍ಯಕ್ರಮದಂತೆ ಬಿಂಬಿತವಾಗಿದ್ದುದು, ಬಿಜೆಪಿ ಕಾರ್‍ಯಕರ್ತರೇ ಎಲ್ಲೆಡೆ ಆವರಿಸಿಕೊಂಡಿದ್ದುದು ನಾಚಿಕೆಗೇಡಿನ ಸಂಗತಿ ಎಂದು ಅವರ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ದಸರಾ ಮಹೋತ್ಸವದ ಬಂದೋಬಸ್ತ್‌ಗಾಗಿ ಐದು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಿದ್ದರೂ, ಅಂಬಾರಿ ಸಾಗುವ ಮಾರ್ಗದಲ್ಲಿ ತುಂಬಿದ್ದ ಸಾರ್ವಜನಿಕರನ್ನು ನಿಯಂತ್ರಿಸಲು ಸಾಧ್ಯವಾಗದಿರುವುದು ಅತ್ಯಂತ ನೋವಿನ ವಿಚಾರ ಎಂದಿದ್ದಾರೆ.

ದಸರಾ ಮಹೋತ್ಸವದ ವೇಳೆ ಪಾಸ್ ಮುದ್ರಿಸಿ ಹಂಚುವುದು ಸರ್ವೇ ಸಾಮಾನ್ಯ. ಆದರೆ, ಮುದ್ರಿಸಲಾದ ಪಾಸ್‌ಗಳ ಪೈಕಿ ಹತ್ತು ಸಾವಿರ ಪಾಸ್‌ಗಳನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ತಮ್ಮ ಸ್ವಕ್ಷೇತ್ರ ಯಶವಂತಪುರಕ್ಕೆ ತೆಗೆದುಕೊಂಡಿದ್ದಾರೆ ಎಂಬ ಆರೋಪ ಮಾಧ್ಯಮಗಳ ಮೂಲಕ ಜಗಜ್ಜಾಹಿರಾಗಿದೆ. ಇದು ಜಿಲ್ಲಾ ಉಸ್ತುವಾರಿ ಸಚಿವರು ಮೈಸೂರು ಜನತೆಗೆ ಮಾಡಿದ ಪರಮದ್ರೋಹದ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿದ್ದಾರೆ.

ಅಧಿಕಾರಿ ವರ್ಗಕ್ಕೆ ಸರ್ಕಾರ ಹಾಗೂ ಆಡಳಿತಾರೂಢ ಪಕ್ಷದ ಒತ್ತಡ ಇರುವುದು ಸಹಜ. ಆದರೆ, ಅಧಿಕಾರಿಗಳು ತಮ್ಮ ಇತಿಮೀತಿ ಅರಿಯದೆ, ಕಾನೂನು ಪಾಲಿಸದೆ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಿದ್ದುದೇ ಜಂಬೂಸವಾರಿ ವೇಳೆ ಆದಂತಹ ಎಲ್ಲ ದುರಂತಗಳಿಗೆ ಕಾರಣ ಎಂದಿದ್ದಾರೆ.

ಜಂಬೂಸವಾರಿಯ ಎಲ್ಲ ಅವಾಂತರಗಳ ನೈತಿಕ ಹೊಣೆ ಹೊತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಕೂಡಲೇ ಮೈಸೂರು ಜನತೆ ಮುಂದೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಲೇ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾಯಿಸಿ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.

andolana

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

3 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

10 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

10 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

10 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

10 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

10 hours ago