ಮೈಸೂರು : ಟ್ವಿಲೈಟ್ ವಿಸ್ಪರ್ಸ ಆಫ್ ಹಂಪಿ ಛಾಯಾಚಿತ್ರ ಪ್ರದರ್ಶನವನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ ಉದ್ಘಾಟನೆ ನೀಡಿದರು.
ನಗರದ ಕಾಫಿ ಸಿಟಿಯ ನೆರಳು ಬೆಳಕು ಗ್ಯಾಲರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಉಸ್ಗಾಟನೆ ಮಾಡಿ ಮಾತನಾಡಿದ ಅವರು, ಹಂಪಿಯ ಮತ್ತು ಮೈಸೂರಿನ ಸಾಂಸ್ಕೃತಿಕ ಸಂಬಂಧ ನೆನೆಯುತ್ತಾ ಶಿವಶಂಕರ್ ಬಣಗಾರ್ ಅವರ ಚಿತ್ರಗಳು ಹಂಪಿಯ ಸ್ಮಾರಕಗಳನ್ನು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯವಾಗಿ ತಲುಪಿಸಲು ಹಾಗೂ ಪ್ರವಾಸಿಗರನ್ನು ಸೆಳೆಯಲು ಯಶಸ್ವಿಯಾಗಿವೆ ಎಂದರು.
ಇದರಿಂದ ಸ್ಥಳೀಯ ಆರ್ಥಿಕ ವಹಿವಾಟಿಗೂ ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು. ಛಾಯಾಗ್ರಾಹಕರನ್ನು ಉತ್ತೇಜಿಸುವ ಮೂಲಕ ಅವರಲ್ಲಿನ ಕ್ರಿಯಾಶೀಲತೆಯನ್ನು ಪ್ರೊತ್ಸಾಹಿಸಿ ಅದರ ಲಾಭವನ್ನು ಸಮಾಜಕ್ಕೆ ಸಲ್ಲಿಸುವಲ್ಲಿ ಆಡಳಿತದ ನೆರವು ಅಗತ್ಯ. ದಸರಾವನ್ನು ಕೂಡ ಈ ನಿಟ್ಟಿನಲ್ಲಿ ಮುಂದೆ ಯೋಚಿಸಲಾಗುವುದು ಎಂದರು.
ಶಿವಶಂಕರ್ ಬಣಗಾರ್ ಅವರು ನನ್ನ ನೆಚ್ಚಿನ ಛಾಯಾಗ್ರಾಹಕರು, ನಾನು ಅವರ ಚಿತ್ರಗಳನ್ನು ನಿರಂತರವಾಗಿ ನೋಡಿ ಆನಂದಿಸಿರುವೆ. ಕಲಾವಿದರ ಚಿತ್ರಗಳನ್ನು ಕೊಳ್ಳುವ ಮೂಲಕ ಸಮಾಜ ಪ್ರೊತ್ಸಾಹಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಬಣಗಾರ್ ಅವರ ಒಂದು ಚಿತ್ರವನ್ನು ಜಿಲ್ಲಾಧಿಕಾರಿ ಖರೀದಿಸಿದರು. ಬಳಿಕ ಬಣಗಾರ್ ಅವರ ಚಿತ್ರಗಳನ್ನೊಳಗೊಂಡ ಕ್ಯಾಲೆಂಡರ್ ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಗೌರೀಶ್ ಕಪನಿ, ಜಿಕೆ ಕುಲಕರ್ಣಿ, ರಾಜಶೇಖರ ಜಮದಂಡಿ ಮತ್ತು ರಿಶಬ್ ವೆಂಚುರ್ಸ್ ಸಿಇಓ ಮಧು ಬಳ್ಳಾಕಿ ಅವರು ಉಪಸ್ಥಿತರಿದ್ದರು.
ಟ್ವಿಲೈಟ್ ವಿಸ್ಪರ್ಸ ಆಫ್ ಹಂಪಿ ಛಾಯಾಚಿತ್ರ ಪ್ರದರ್ಶನವು ಇಂದಿನಿಂದ ೨೯ ಫೆಬ್ರುವರಿ ೨೦೨೪ರ ಬೆಳಗ್ಗೆ ೯ ರಿಂದ ಸಂಜೆ ೯ರವರೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ತಿಳಿಸಿದ್ದಾರೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…