ಜಿಲ್ಲೆಗಳು

ʼಟ್ವಿಲೈಟ್ ವಿಸ್ಪರ್ಸ ಆಫ್ ಹಂಪಿʼ ಛಾಯಾಚಿತ್ರ ಪ್ರದರ್ಶನಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ !

ಮೈಸೂರು :  ಟ್ವಿಲೈಟ್ ವಿಸ್ಪರ್ಸ ಆಫ್ ಹಂಪಿ ಛಾಯಾಚಿತ್ರ ಪ್ರದರ್ಶನವನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ ಉದ್ಘಾಟನೆ ನೀಡಿದರು.

ನಗರದ  ಕಾಫಿ ಸಿಟಿಯ ನೆರಳು ಬೆಳಕು ಗ್ಯಾಲರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಉಸ್ಗಾಟನೆ ಮಾಡಿ ಮಾತನಾಡಿದ ಅವರು,  ಹಂಪಿಯ ಮತ್ತು ಮೈಸೂರಿನ ಸಾಂಸ್ಕೃತಿಕ ಸಂಬಂಧ ನೆನೆಯುತ್ತಾ ಶಿವಶಂಕರ್ ಬಣಗಾರ್ ಅವರ ಚಿತ್ರಗಳು ಹಂಪಿಯ ಸ್ಮಾರಕಗಳನ್ನು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯವಾಗಿ ತಲುಪಿಸಲು ಹಾಗೂ ಪ್ರವಾಸಿಗರನ್ನು ಸೆಳೆಯಲು ಯಶಸ್ವಿಯಾಗಿವೆ ಎಂದರು.

ಇದರಿಂದ ಸ್ಥಳೀಯ ಆರ್ಥಿಕ ವಹಿವಾಟಿಗೂ ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು. ಛಾಯಾಗ್ರಾಹಕರನ್ನು ಉತ್ತೇಜಿಸುವ ಮೂಲಕ ಅವರಲ್ಲಿನ ಕ್ರಿಯಾಶೀಲತೆಯನ್ನು ಪ್ರೊತ್ಸಾಹಿಸಿ ಅದರ ಲಾಭವನ್ನು ಸಮಾಜಕ್ಕೆ ಸಲ್ಲಿಸುವಲ್ಲಿ ಆಡಳಿತದ ನೆರವು ಅಗತ್ಯ. ದಸರಾವನ್ನು ಕೂಡ ಈ ನಿಟ್ಟಿನಲ್ಲಿ ಮುಂದೆ ಯೋಚಿಸಲಾಗುವುದು ಎಂದರು. 

ಶಿವಶಂಕರ್ ಬಣಗಾರ್ ಅವರು ನನ್ನ ನೆಚ್ಚಿನ ಛಾಯಾಗ್ರಾಹಕರು, ನಾನು ಅವರ ಚಿತ್ರಗಳನ್ನು ನಿರಂತರವಾಗಿ ನೋಡಿ ಆನಂದಿಸಿರುವೆ. ಕಲಾವಿದರ ಚಿತ್ರಗಳನ್ನು ಕೊಳ್ಳುವ ಮೂಲಕ ಸಮಾಜ ಪ್ರೊತ್ಸಾಹಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಬಣಗಾರ್ ಅವರ ಒಂದು ಚಿತ್ರವನ್ನು ಜಿಲ್ಲಾಧಿಕಾರಿ ಖರೀದಿಸಿದರು. ಬಳಿಕ ಬಣಗಾರ್ ಅವರ ಚಿತ್ರಗಳನ್ನೊಳಗೊಂಡ ಕ್ಯಾಲೆಂಡರ್ ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಗೌರೀಶ್ ಕಪನಿ, ಜಿಕೆ ಕುಲಕರ್ಣಿ, ರಾಜಶೇಖರ ಜಮದಂಡಿ ಮತ್ತು ರಿಶಬ್ ವೆಂಚುರ್ಸ್ ಸಿಇಓ ಮಧು ಬಳ್ಳಾಕಿ ಅವರು ಉಪಸ್ಥಿತರಿದ್ದರು.

ಟ್ವಿಲೈಟ್ ವಿಸ್ಪರ್ಸ ಆಫ್ ಹಂಪಿ ಛಾಯಾಚಿತ್ರ ಪ್ರದರ್ಶನವು ಇಂದಿನಿಂದ ೨೯ ಫೆಬ್ರುವರಿ ೨೦೨೪ರ ಬೆಳಗ್ಗೆ ೯ ರಿಂದ ಸಂಜೆ ೯ರವರೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ತಿಳಿಸಿದ್ದಾರೆ.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

2 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

12 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

16 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

16 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

17 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

21 hours ago