ಜಿಲ್ಲೆಗಳು

ʼಟ್ವಿಲೈಟ್ ವಿಸ್ಪರ್ಸ ಆಫ್ ಹಂಪಿʼ ಛಾಯಾಚಿತ್ರ ಪ್ರದರ್ಶನಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ !

ಮೈಸೂರು :  ಟ್ವಿಲೈಟ್ ವಿಸ್ಪರ್ಸ ಆಫ್ ಹಂಪಿ ಛಾಯಾಚಿತ್ರ ಪ್ರದರ್ಶನವನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ ಉದ್ಘಾಟನೆ ನೀಡಿದರು.

ನಗರದ  ಕಾಫಿ ಸಿಟಿಯ ನೆರಳು ಬೆಳಕು ಗ್ಯಾಲರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಉಸ್ಗಾಟನೆ ಮಾಡಿ ಮಾತನಾಡಿದ ಅವರು,  ಹಂಪಿಯ ಮತ್ತು ಮೈಸೂರಿನ ಸಾಂಸ್ಕೃತಿಕ ಸಂಬಂಧ ನೆನೆಯುತ್ತಾ ಶಿವಶಂಕರ್ ಬಣಗಾರ್ ಅವರ ಚಿತ್ರಗಳು ಹಂಪಿಯ ಸ್ಮಾರಕಗಳನ್ನು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯವಾಗಿ ತಲುಪಿಸಲು ಹಾಗೂ ಪ್ರವಾಸಿಗರನ್ನು ಸೆಳೆಯಲು ಯಶಸ್ವಿಯಾಗಿವೆ ಎಂದರು.

ಇದರಿಂದ ಸ್ಥಳೀಯ ಆರ್ಥಿಕ ವಹಿವಾಟಿಗೂ ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು. ಛಾಯಾಗ್ರಾಹಕರನ್ನು ಉತ್ತೇಜಿಸುವ ಮೂಲಕ ಅವರಲ್ಲಿನ ಕ್ರಿಯಾಶೀಲತೆಯನ್ನು ಪ್ರೊತ್ಸಾಹಿಸಿ ಅದರ ಲಾಭವನ್ನು ಸಮಾಜಕ್ಕೆ ಸಲ್ಲಿಸುವಲ್ಲಿ ಆಡಳಿತದ ನೆರವು ಅಗತ್ಯ. ದಸರಾವನ್ನು ಕೂಡ ಈ ನಿಟ್ಟಿನಲ್ಲಿ ಮುಂದೆ ಯೋಚಿಸಲಾಗುವುದು ಎಂದರು. 

ಶಿವಶಂಕರ್ ಬಣಗಾರ್ ಅವರು ನನ್ನ ನೆಚ್ಚಿನ ಛಾಯಾಗ್ರಾಹಕರು, ನಾನು ಅವರ ಚಿತ್ರಗಳನ್ನು ನಿರಂತರವಾಗಿ ನೋಡಿ ಆನಂದಿಸಿರುವೆ. ಕಲಾವಿದರ ಚಿತ್ರಗಳನ್ನು ಕೊಳ್ಳುವ ಮೂಲಕ ಸಮಾಜ ಪ್ರೊತ್ಸಾಹಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಬಣಗಾರ್ ಅವರ ಒಂದು ಚಿತ್ರವನ್ನು ಜಿಲ್ಲಾಧಿಕಾರಿ ಖರೀದಿಸಿದರು. ಬಳಿಕ ಬಣಗಾರ್ ಅವರ ಚಿತ್ರಗಳನ್ನೊಳಗೊಂಡ ಕ್ಯಾಲೆಂಡರ್ ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಗೌರೀಶ್ ಕಪನಿ, ಜಿಕೆ ಕುಲಕರ್ಣಿ, ರಾಜಶೇಖರ ಜಮದಂಡಿ ಮತ್ತು ರಿಶಬ್ ವೆಂಚುರ್ಸ್ ಸಿಇಓ ಮಧು ಬಳ್ಳಾಕಿ ಅವರು ಉಪಸ್ಥಿತರಿದ್ದರು.

ಟ್ವಿಲೈಟ್ ವಿಸ್ಪರ್ಸ ಆಫ್ ಹಂಪಿ ಛಾಯಾಚಿತ್ರ ಪ್ರದರ್ಶನವು ಇಂದಿನಿಂದ ೨೯ ಫೆಬ್ರುವರಿ ೨೦೨೪ರ ಬೆಳಗ್ಗೆ ೯ ರಿಂದ ಸಂಜೆ ೯ರವರೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

8 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

8 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

8 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

8 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

8 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

8 hours ago