ಮಂಡ್ಯ: ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಭರತನಾಟ್ಯ ಸ್ಪರ್ಧೆಯಲ್ಲಿ ಸಂತ ಜೋಸೆಫ್ ಪ್ರೌಢಶಾಲೆಯ ೮ನೇ ತರಗತಿಯ ವಿದ್ಯಾರ್ಥಿನಿ ಬಿ.ಎಂ. ನವ್ಯಶ್ರೀ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.
ನಗರದ ಲಕ್ಷಿö್ಮಜನಾರ್ದನ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ೭ ತಾಲ್ಲೂಕುಗಳಿಂದ ೭ ಸ್ಪರ್ಧಿಗಳು ಭರತನಾಟ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇದರಲ್ಲಿ ಉತ್ತಮ ಪ್ರದರ್ಶನ ನೀಡಿದ ಬಿ.ಎಂ.ನವ್ಯಶ್ರೀ ಪ್ರಥಮ ಸ್ಥಾನ ಪಡೆದಳು.
ನವ್ಯಶ್ರೀ ಅವರು `ಆಂದೋಲನ’ ಪತ್ರಿಕೆಯ ಜಿಲ್ಲಾ ಹಿರಿಯ ವರದಿಗಾರ, ತಾಲ್ಲೂಕಿನ ಹೊಸಬೂದನೂರು ಗ್ರಾಮದ ಬಿ.ಟಿ. ಮೋಹನ್ ಕುಮಾರ್ ಮತ್ತು ಎಂ.ಆರ್.ಜ್ಯೋತಿ ಅವರ ಪುತ್ರಿಯಾಗಿದ್ದು, ಕಳೆದ ೯ ವರ್ಷದಿಂದ ಗುರುದೇವ ಲಲಿತಕಲಾ ಅಕಾಡೆಮಿಯ ನಿರ್ದೇಶಕಿ, ವಿದುಷಿ ಚೇತನಾ ರಾಧಾಕೃಷ್ಣ ಅವರ ಬಳಿ ಭರತನಾಟ್ಯ ಕಲಿಯುತಿದ್ದಾರೆ.
ಇವರ ಸಾಧನೆಗೆ ಸಂತ ಜೋಸೆಫರ ಶಾಲೆ ಪ್ರೌಢಶಾಲೆಯ ಶಿಕ್ಷಕ ವೃಂದ ಮತ್ತು ವಿದುಷಿ ಚೇತನಾ ರಾಧಾಕೃಷ್ಣ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…
ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…
ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…
ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ…
ಪುರಸಭೆಯಿಂದ ಹಲವು ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ; ಸ್ವಚ್ಛ ಪಟ್ಟಣಕ್ಕೆ ಸಹಕರಿಸಲು ಮನವಿ ಗುಂಡ್ಲುಪೇಟೆ: ಪಟ್ಟಣದ ಕೆಲವೆಡೆ ಕಸ ಸುರಿಯದಂತೆ ಎಚ್ಚರಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ…