ಮಂಡ್ಯ: ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಭರತನಾಟ್ಯ ಸ್ಪರ್ಧೆಯಲ್ಲಿ ಸಂತ ಜೋಸೆಫ್ ಪ್ರೌಢಶಾಲೆಯ ೮ನೇ ತರಗತಿಯ ವಿದ್ಯಾರ್ಥಿನಿ ಬಿ.ಎಂ. ನವ್ಯಶ್ರೀ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.
ನಗರದ ಲಕ್ಷಿö್ಮಜನಾರ್ದನ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ೭ ತಾಲ್ಲೂಕುಗಳಿಂದ ೭ ಸ್ಪರ್ಧಿಗಳು ಭರತನಾಟ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇದರಲ್ಲಿ ಉತ್ತಮ ಪ್ರದರ್ಶನ ನೀಡಿದ ಬಿ.ಎಂ.ನವ್ಯಶ್ರೀ ಪ್ರಥಮ ಸ್ಥಾನ ಪಡೆದಳು.
ನವ್ಯಶ್ರೀ ಅವರು `ಆಂದೋಲನ’ ಪತ್ರಿಕೆಯ ಜಿಲ್ಲಾ ಹಿರಿಯ ವರದಿಗಾರ, ತಾಲ್ಲೂಕಿನ ಹೊಸಬೂದನೂರು ಗ್ರಾಮದ ಬಿ.ಟಿ. ಮೋಹನ್ ಕುಮಾರ್ ಮತ್ತು ಎಂ.ಆರ್.ಜ್ಯೋತಿ ಅವರ ಪುತ್ರಿಯಾಗಿದ್ದು, ಕಳೆದ ೯ ವರ್ಷದಿಂದ ಗುರುದೇವ ಲಲಿತಕಲಾ ಅಕಾಡೆಮಿಯ ನಿರ್ದೇಶಕಿ, ವಿದುಷಿ ಚೇತನಾ ರಾಧಾಕೃಷ್ಣ ಅವರ ಬಳಿ ಭರತನಾಟ್ಯ ಕಲಿಯುತಿದ್ದಾರೆ.
ಇವರ ಸಾಧನೆಗೆ ಸಂತ ಜೋಸೆಫರ ಶಾಲೆ ಪ್ರೌಢಶಾಲೆಯ ಶಿಕ್ಷಕ ವೃಂದ ಮತ್ತು ವಿದುಷಿ ಚೇತನಾ ರಾಧಾಕೃಷ್ಣ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…