ಮಂಡ್ಯ: ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಭರತನಾಟ್ಯ ಸ್ಪರ್ಧೆಯಲ್ಲಿ ಸಂತ ಜೋಸೆಫ್ ಪ್ರೌಢಶಾಲೆಯ ೮ನೇ ತರಗತಿಯ ವಿದ್ಯಾರ್ಥಿನಿ ಬಿ.ಎಂ. ನವ್ಯಶ್ರೀ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.
ನಗರದ ಲಕ್ಷಿö್ಮಜನಾರ್ದನ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ೭ ತಾಲ್ಲೂಕುಗಳಿಂದ ೭ ಸ್ಪರ್ಧಿಗಳು ಭರತನಾಟ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇದರಲ್ಲಿ ಉತ್ತಮ ಪ್ರದರ್ಶನ ನೀಡಿದ ಬಿ.ಎಂ.ನವ್ಯಶ್ರೀ ಪ್ರಥಮ ಸ್ಥಾನ ಪಡೆದಳು.
ನವ್ಯಶ್ರೀ ಅವರು `ಆಂದೋಲನ’ ಪತ್ರಿಕೆಯ ಜಿಲ್ಲಾ ಹಿರಿಯ ವರದಿಗಾರ, ತಾಲ್ಲೂಕಿನ ಹೊಸಬೂದನೂರು ಗ್ರಾಮದ ಬಿ.ಟಿ. ಮೋಹನ್ ಕುಮಾರ್ ಮತ್ತು ಎಂ.ಆರ್.ಜ್ಯೋತಿ ಅವರ ಪುತ್ರಿಯಾಗಿದ್ದು, ಕಳೆದ ೯ ವರ್ಷದಿಂದ ಗುರುದೇವ ಲಲಿತಕಲಾ ಅಕಾಡೆಮಿಯ ನಿರ್ದೇಶಕಿ, ವಿದುಷಿ ಚೇತನಾ ರಾಧಾಕೃಷ್ಣ ಅವರ ಬಳಿ ಭರತನಾಟ್ಯ ಕಲಿಯುತಿದ್ದಾರೆ.
ಇವರ ಸಾಧನೆಗೆ ಸಂತ ಜೋಸೆಫರ ಶಾಲೆ ಪ್ರೌಢಶಾಲೆಯ ಶಿಕ್ಷಕ ವೃಂದ ಮತ್ತು ವಿದುಷಿ ಚೇತನಾ ರಾಧಾಕೃಷ್ಣ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…