ಚಾಮರಾಜನಗರ: ಇಲ್ಲಿನ ಸಾರ್ವಜನಿಕ ಜಿಲ್ಲಾಸ್ಪತ್ರೆಯ ಹೊರರೋಗಿ ವಿಭಾಗವನ್ನು ಸಿಮ್ಸ್ಗೆ ಸ್ಥಳಾಂತರ ಮಾಡಬಾರದು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದವರು ಬುಧವಾರ ನಗರದಲ್ಲಿ ಪ್ರತಿಭಟನೆ ಮಾಡಿದರು.
ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನೇತೃತ್ವ ವಹಿಸಿದ್ದ ಮಾಜಿ ಶಾಸಕ ವಾಟಾಳ್ ನಾಗರಾಜ್ ಮಾತನಾಡಿ, ಸ್ಥಳಾಂತರ ಮಾಡಿದ್ದೇ ಆದಲ್ಲಿ ಚಾ.ನಗರ ಬಂದ್ ಮಾಡುವುದಾಗಿ ಎಚ್ಚರಿಸಿದರು.
ಮೆಡಿಕಲ್ ಕಾಲೇಜು ಆಸ್ಪತ್ರೆ ಸುಮಾರು ೮ ಕಿ.ಮೀ. ದೂರದಲ್ಲಿದ್ದು ಈ ಆಸ್ಪತ್ರೆ ಸ್ಥಳಾಂತರ ಮಾಡಿದರೆ ಹೊರರೋಗಿಗಳಿಗೆ ತೊಂದರೆಯಾಗುತ್ತದೆ ಎಂದರು.
ಕೇಸರಿ ಬಣ್ಣವನ್ನು ಶಾಲೆಯ ಬದಲಿಗೆ ಸಚಿವ ಸಂಪುಟ ಬಳಿದುಕೊಳ್ಳಲಿ. ಕನ್ನಡ ಶಾಲೆಯನ್ನು ಮುಚ್ಚಿದ್ದಾರೆ. ಖಾಸಗಿ ಕನ್ನಡ ಶಾಲೆಗಳಿಗೆ ಅನುದಾನ ನೀಡಿಲ್ಲ. ಕನ್ನಡವನ್ನು ಕಡೆಗಣಿಸಿರುವ ರಾಜ್ಯ ಸರ್ಕಾರ ವಿವೇಕ ಎಂಬ ಹೊಸ ಚಿಂತನೆ ಮಾಡಿದೆ ಎಂದು ಕಿಡಿಕಾರಿದರು.
ಮುಖಂಡರಾದ ಚಾ.ರಂ. ಶ್ರೀನಿವಾಸಗೌಡ, ನಿಜಧ್ವನಿ ಗೋವಿಂದರಾಜು, ಎಲ್. ಶಿವಲಿಂಗಮೂರ್ತಿ, ಚಾ.ರಾ.ಕುಮಾರ್, ರವಿಚಂದ್ರಪ್ರಸಾದ್ ಕಹಳೆ, ರೇವಣ್ಣಸ್ವಾಮಿ, ಅಜ್ಯ್, ಪಾರ್ಥಸಾರಥಿ, ಅಂಬರೀಶ್, ಬಸಪ್ಪನಪಾಳ್ಯ ಕುಮಾರ್, ವಿನೋದ್, ಸಾಗರ್ರಾವತ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಎಸ್.ಪ್ರಶಾಂತ್ ಗಂಗೋತ್ರಿ ಬಡಾವಣೆ ರಸ್ತೆಗೆ ಬೇಕಿದೆ ಕಾಯಕಲ್ಪ ದೂಳುಮಯವಾದ ರಸ್ತೆ, ಅಪಾಯಕ್ಕೆ ಎಡೆಮಾಡುತ್ತಿರುವ ಗುಂಡಿಗಳು ಮೈಸೂರು: ಕಳೆದ ಕೆಲ ತಿಂಗಳಿನಿಂದ…
ಕೆ.ಬಿ.ರಮೇಶನಾಯಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಭಾರತೀಯ ಮಗು ದತ್ತು ಪಡೆದ ವಿದೇಶಿ ದಂಪತಿ ಮೈಸೂರು: ಬಹುಶಃ ಹೆತ್ತಮ್ಮ ಇದ್ದರೂ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಸಫಾರಿ ಪುನಾರಂಭವಾಗಿರುವುದರಿಂದ ವನ್ಯಜೀವಿಗಳಿಗೆ ತೊಂದರೆ ಆಗಿಲ್ಲ. ನಮ್ಮ ಹೊಟ್ಟೆ ಹೊರೆಯಲು ಸಹಾಯವಾಗಿದೆ... ಕಾಡ್ಗಿಚ್ಚು ನಂದಿಸುವ ಸಂದರ್ಭಗಳಲ್ಲಿ…