ಚಾಮರಾಜನಗರ: ಇಲ್ಲಿನ ಸಾರ್ವಜನಿಕ ಜಿಲ್ಲಾಸ್ಪತ್ರೆಯ ಹೊರರೋಗಿ ವಿಭಾಗವನ್ನು ಸಿಮ್ಸ್ಗೆ ಸ್ಥಳಾಂತರ ಮಾಡಬಾರದು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದವರು ಬುಧವಾರ ನಗರದಲ್ಲಿ ಪ್ರತಿಭಟನೆ ಮಾಡಿದರು.
ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನೇತೃತ್ವ ವಹಿಸಿದ್ದ ಮಾಜಿ ಶಾಸಕ ವಾಟಾಳ್ ನಾಗರಾಜ್ ಮಾತನಾಡಿ, ಸ್ಥಳಾಂತರ ಮಾಡಿದ್ದೇ ಆದಲ್ಲಿ ಚಾ.ನಗರ ಬಂದ್ ಮಾಡುವುದಾಗಿ ಎಚ್ಚರಿಸಿದರು.
ಮೆಡಿಕಲ್ ಕಾಲೇಜು ಆಸ್ಪತ್ರೆ ಸುಮಾರು ೮ ಕಿ.ಮೀ. ದೂರದಲ್ಲಿದ್ದು ಈ ಆಸ್ಪತ್ರೆ ಸ್ಥಳಾಂತರ ಮಾಡಿದರೆ ಹೊರರೋಗಿಗಳಿಗೆ ತೊಂದರೆಯಾಗುತ್ತದೆ ಎಂದರು.
ಕೇಸರಿ ಬಣ್ಣವನ್ನು ಶಾಲೆಯ ಬದಲಿಗೆ ಸಚಿವ ಸಂಪುಟ ಬಳಿದುಕೊಳ್ಳಲಿ. ಕನ್ನಡ ಶಾಲೆಯನ್ನು ಮುಚ್ಚಿದ್ದಾರೆ. ಖಾಸಗಿ ಕನ್ನಡ ಶಾಲೆಗಳಿಗೆ ಅನುದಾನ ನೀಡಿಲ್ಲ. ಕನ್ನಡವನ್ನು ಕಡೆಗಣಿಸಿರುವ ರಾಜ್ಯ ಸರ್ಕಾರ ವಿವೇಕ ಎಂಬ ಹೊಸ ಚಿಂತನೆ ಮಾಡಿದೆ ಎಂದು ಕಿಡಿಕಾರಿದರು.
ಮುಖಂಡರಾದ ಚಾ.ರಂ. ಶ್ರೀನಿವಾಸಗೌಡ, ನಿಜಧ್ವನಿ ಗೋವಿಂದರಾಜು, ಎಲ್. ಶಿವಲಿಂಗಮೂರ್ತಿ, ಚಾ.ರಾ.ಕುಮಾರ್, ರವಿಚಂದ್ರಪ್ರಸಾದ್ ಕಹಳೆ, ರೇವಣ್ಣಸ್ವಾಮಿ, ಅಜ್ಯ್, ಪಾರ್ಥಸಾರಥಿ, ಅಂಬರೀಶ್, ಬಸಪ್ಪನಪಾಳ್ಯ ಕುಮಾರ್, ವಿನೋದ್, ಸಾಗರ್ರಾವತ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…