ಜಿಲ್ಲೆಗಳು

ಜಿಲ್ಲಾಸ್ಪತ್ರೆಯ ಒಪಿಡಿ ಸ್ಥಳಾಂತರ ಮಾಡಿದಂತೆ ಆಗ್ರಹ

ಚಾಮರಾಜನಗರ: ಇಲ್ಲಿನ ಸಾರ್ವಜನಿಕ ಜಿಲ್ಲಾಸ್ಪತ್ರೆಯ ಹೊರರೋಗಿ ವಿಭಾಗವನ್ನು ಸಿಮ್ಸ್‌ಗೆ ಸ್ಥಳಾಂತರ ಮಾಡಬಾರದು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದವರು ಬುಧವಾರ ನಗರದಲ್ಲಿ ಪ್ರತಿಭಟನೆ ಮಾಡಿದರು.
ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನೇತೃತ್ವ ವಹಿಸಿದ್ದ ಮಾಜಿ ಶಾಸಕ ವಾಟಾಳ್ ನಾಗರಾಜ್ ಮಾತನಾಡಿ, ಸ್ಥಳಾಂತರ ಮಾಡಿದ್ದೇ ಆದಲ್ಲಿ ಚಾ.ನಗರ ಬಂದ್‌ ಮಾಡುವುದಾಗಿ  ಎಚ್ಚರಿಸಿದರು.
ಮೆಡಿಕಲ್ ಕಾಲೇಜು ಆಸ್ಪತ್ರೆ ಸುಮಾರು ೮ ಕಿ.ಮೀ. ದೂರದಲ್ಲಿದ್ದು ಈ ಆಸ್ಪತ್ರೆ ಸ್ಥಳಾಂತರ ಮಾಡಿದರೆ ಹೊರರೋಗಿಗಳಿಗೆ ತೊಂದರೆಯಾಗುತ್ತದೆ ಎಂದರು.

ಕೇಸರಿ ಬಣ್ಣವನ್ನು ಶಾಲೆಯ ಬದಲಿಗೆ ಸಚಿವ ಸಂಪುಟ ಬಳಿದುಕೊಳ್ಳಲಿ. ಕನ್ನಡ ಶಾಲೆಯನ್ನು ಮುಚ್ಚಿದ್ದಾರೆ. ಖಾಸಗಿ ಕನ್ನಡ ಶಾಲೆಗಳಿಗೆ ಅನುದಾನ ನೀಡಿಲ್ಲ. ಕನ್ನಡವನ್ನು ಕಡೆಗಣಿಸಿರುವ ರಾಜ್ಯ ಸರ್ಕಾರ ವಿವೇಕ ಎಂಬ ಹೊಸ ಚಿಂತನೆ ಮಾಡಿದೆ ಎಂದು ಕಿಡಿಕಾರಿದರು.
ಮುಖಂಡರಾದ ಚಾ.ರಂ. ಶ್ರೀನಿವಾಸಗೌಡ, ನಿಜಧ್ವನಿ ಗೋವಿಂದರಾಜು, ಎಲ್. ಶಿವಲಿಂಗಮೂರ್ತಿ, ಚಾ.ರಾ.ಕುಮಾರ್, ರವಿಚಂದ್ರಪ್ರಸಾದ್ ಕಹಳೆ, ರೇವಣ್ಣಸ್ವಾಮಿ, ಅಜ್ಯ್‌, ಪಾರ್ಥಸಾರಥಿ, ಅಂಬರೀಶ್, ಬಸಪ್ಪನಪಾಳ್ಯ ಕುಮಾರ್, ವಿನೋದ್, ಸಾಗರ್‌ರಾವತ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

andolanait

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

5 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

5 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

5 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

15 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

17 hours ago