ಚಾಮರಾಜನಗರ: ಇಲ್ಲಿನ ಸಾರ್ವಜನಿಕ ಜಿಲ್ಲಾಸ್ಪತ್ರೆಯ ಹೊರರೋಗಿ ವಿಭಾಗವನ್ನು ಸಿಮ್ಸ್ಗೆ ಸ್ಥಳಾಂತರ ಮಾಡಬಾರದು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದವರು ಬುಧವಾರ ನಗರದಲ್ಲಿ ಪ್ರತಿಭಟನೆ ಮಾಡಿದರು.
ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನೇತೃತ್ವ ವಹಿಸಿದ್ದ ಮಾಜಿ ಶಾಸಕ ವಾಟಾಳ್ ನಾಗರಾಜ್ ಮಾತನಾಡಿ, ಸ್ಥಳಾಂತರ ಮಾಡಿದ್ದೇ ಆದಲ್ಲಿ ಚಾ.ನಗರ ಬಂದ್ ಮಾಡುವುದಾಗಿ ಎಚ್ಚರಿಸಿದರು.
ಮೆಡಿಕಲ್ ಕಾಲೇಜು ಆಸ್ಪತ್ರೆ ಸುಮಾರು ೮ ಕಿ.ಮೀ. ದೂರದಲ್ಲಿದ್ದು ಈ ಆಸ್ಪತ್ರೆ ಸ್ಥಳಾಂತರ ಮಾಡಿದರೆ ಹೊರರೋಗಿಗಳಿಗೆ ತೊಂದರೆಯಾಗುತ್ತದೆ ಎಂದರು.
ಕೇಸರಿ ಬಣ್ಣವನ್ನು ಶಾಲೆಯ ಬದಲಿಗೆ ಸಚಿವ ಸಂಪುಟ ಬಳಿದುಕೊಳ್ಳಲಿ. ಕನ್ನಡ ಶಾಲೆಯನ್ನು ಮುಚ್ಚಿದ್ದಾರೆ. ಖಾಸಗಿ ಕನ್ನಡ ಶಾಲೆಗಳಿಗೆ ಅನುದಾನ ನೀಡಿಲ್ಲ. ಕನ್ನಡವನ್ನು ಕಡೆಗಣಿಸಿರುವ ರಾಜ್ಯ ಸರ್ಕಾರ ವಿವೇಕ ಎಂಬ ಹೊಸ ಚಿಂತನೆ ಮಾಡಿದೆ ಎಂದು ಕಿಡಿಕಾರಿದರು.
ಮುಖಂಡರಾದ ಚಾ.ರಂ. ಶ್ರೀನಿವಾಸಗೌಡ, ನಿಜಧ್ವನಿ ಗೋವಿಂದರಾಜು, ಎಲ್. ಶಿವಲಿಂಗಮೂರ್ತಿ, ಚಾ.ರಾ.ಕುಮಾರ್, ರವಿಚಂದ್ರಪ್ರಸಾದ್ ಕಹಳೆ, ರೇವಣ್ಣಸ್ವಾಮಿ, ಅಜ್ಯ್, ಪಾರ್ಥಸಾರಥಿ, ಅಂಬರೀಶ್, ಬಸಪ್ಪನಪಾಳ್ಯ ಕುಮಾರ್, ವಿನೋದ್, ಸಾಗರ್ರಾವತ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…