ಜಿಲ್ಲೆಗಳು

ಜಿಲ್ಲಾ ಒಬಿಸಿ ಮೋರ್ಚಾ ವತಿಯಿಂದ ಆರೋಗ್ಯ ಶಿಬಿರ

ಹನೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್ ಸಂದರ್ಭವನ್ನು ಉತ್ತಮವಾಗಿ ನಿಭಾಯಿಸಿದ್ದು, ಸದೃಢ ಸಮಾಜ ನಿರ್ಮಾಣಕ್ಕೆ ಪಣ ತೊಟ್ಟಿರುವ ವಿಶ್ವ ನಾಯಕ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಲಕ್ಷಣ್ ಜೀ ಪ್ರಶಂಸಿಸಿದರು. ಆರ್.ಎಸ್ ದೊಡ್ಡಿಯ ಗೌರಿ ಶಂಕರ ಕಲ್ಯಾಣ ಮಂಟಪ ಸಮೀಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಹಿನ್ನಲೆ ಒಬಿಸಿ ಮೋರ್ಚಾದ ಜಿಲ್ಲಾ ಸಂಯೋಜಕ ಜನಧ್ವನಿ ಬಿ.ವೆಂಕಟೇಶ್ ಅವರು ಆಯೋಜಿಸಿದ್ಧ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನರೇಂದ್ರ ಮೋದಿ ಅವರ 72ನೇ ಹುಟ್ಟು ಹಬ್ಬದ ಹಿನ್ನಲೆ ರಾಷ್ಟ್ರವ್ಯಾಪಿ ಸೆ.17 ರಿಂದ ಅ.2 ರವೆರೆಗೆ ಸೇವಾ ಪ್ರಾಕ್ಷಿಕೆ ಕಾರ್ಯಕ್ರಮದಡಿ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ದಿಸೆಯಲ್ಲಿ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿರುವುದು ಮೆಚ್ಚುಗೆ ಸಂಗತಿ. ಇದರಿಂದ ಜನತೆಗೆ ಆರೋಗ್ಯ ಸೇವೆ ಒದಗಿಸಿದಂತಾಗಿದೆ. ಮೋದಿ ಅವರು ಜನಧನ್, ಆಯುಷ್ಮಾನ್ ಭಾರತ, ಆರೋಗ್ಯ ಭೀಮಾ, ಉಜ್ವಲ ಯೋಜನೆ, ಕೃಷಿ ಸಮ್ಮಾನ್ ಸೇರಿದಂತೆ ಇನ್ನು ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ಉತ್ತಮ ಆಡಳಿತ ನೀಡಿದ್ದು, ಜನಮನ್ನಣೆ ಗಳಿಸಿದ್ದಾರೆ. ಕೋವಿಡ್ ಸಂದರ್ಭವನ್ನು ಸಮರ್ಪಕವಾಗಿ ನಿಭಾಯಿಸಿದ್ದು, ಸದೃಢ ಸಮಾಜ ನಿರ್ಮಾಣದ ಪಣ ತೊಟ್ಟಿದ್ದಾರೆ. ಈ ವೇಳೆ ಜನಪ್ರತಿನಿಧಿಗಳು ಅದರಲ್ಲೂ ಪಕ್ಷದ ಕಾರ್ಯಕರ್ತರು ತಮ್ಮ ಪ್ರಾಣವನ್ನು ಲೆಕ್ಕಿಸದೇ ಹಗಲಿರುಳು ಶ್ರಮಿಸಿದ್ದಾರೆ ಎಂದು ತಿಳಿಸಿದರು.

ಇನ್ನು ರಾಜ್ಯದಲ್ಲಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್‍ನಲ್ಲಿ ಸರ್ವಾಧಿಕಾರಿಯಾಗಿ ಮೆರೆಯುತ್ತಿದ್ದಾರೆ. ಈತನ್ಮಧ್ಯೆ ಜನರನ್ನು ದಿಕ್ಕು ತಪ್ಪಿಸುವ ಸಲುವಾಗಿ ರಾಹುಲ್‍ಗಾಂಧಿ ಜೋಡೋ ಪಾದಯಾತ್ರೆಯನ್ನು ಹಮ್ಮಿಕೊಂಡು ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಆದ್ದರಿಂದ ಜೋಡೋ ಪಾದಯಾತ್ರೆ ಬರಿ ನೆಪ ಎಂದು ಆರೋಪಿಸಿದರು.

ವಾಟಾಳ್ ಸೂರ್ಯ ಸಿಂಹಾಸನದ ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ಮಾತನಾಡಿ, ಸಮಾಜ ಸೇವೆ ಒದಗಿಸುವ ಸಲುವಾಗಿ ವೆಂಕಟೇಶ್ ಅವರು ತುರ್ತು ವಾಹನ ಸೌಲಭ್ಯ, ಕುಡಿಯುವ ನೀರಿನ ಸಮಸ್ಯೆ ತಲೆದೂರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ, ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದ್ದಾರೆ. ಇದೀಗ ನರೇಂದ್ರ ಮೋದಿ ಹುಟ್ಟು ಹಬ್ಬದ ಹಿನ್ನಲೆ ಬೃಹತ್ ಆರೋಗ್ಯ ಶಿಬಿರವನ್ನು ಆಯೋಜಿಸಿರುವುದು ಮೆಚ್ಚುವಂತದ್ದು ಎಂದರು. ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ಮಾತನಾಡಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 8 ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು,ಕ್ಷೇತ್ರದ ಪ್ರತಿಯೊಬ್ಬರ ಹಿತ ಕಾಪಾಡುವುದೇ ನನ್ನ ಗುರಿ ಎಂದು ತಿಳಿಸಿದರು.

ಆರೋಗ್ಯ ತಪಾಸಣಾ ಶಿಬಿರದಲ್ಲಿ ಸುಮಾರು 6 ಸಾವಿರಕ್ಕೂ ಹೆಚ್ಚು ಜನರು ಆಗಮಿಸಿದ್ದರು. ಇದೇ ವೇಳೆ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪರೀಕ್ಷೆಗೆ ಒಳಗಾಗಿ ನ್ಯೂನತೆಯುಳ್ಳವರಿಗೆ ಗಾಲಿ ಕುರ್ಚಿ, ಶ್ರವಣ ಸಾಧನ ಹಾಗೂ ಕನ್ನಡಕಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಉಪಾಧ್ಯಕ್ಷೆ ಅರುಣ, ರಾಜ್ಯಾಧ್ಯಕ್ಷ ನೆ.ಲ ನರೇಂದ್ರಬಾಬು, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ, ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಗಿರೀಶ್ ಉಪ್ಪಾರ್, ಮುಡಿಗುಂಡ ಮಠದ ಶ್ರೀಕಂಠಸ್ವಾಮೀಜಿ, ಹೊಂಡರಬಾಳು ಪಟ್ಟದ ಮಠದ ಪ್ರಸನ್ನಾನಂದ ಸ್ವಾಮೀಜಿ, ಶಾಸಕ ಎನ್.ಮಹೇಶ್, ಬಿಜೆಪಿ ಒಬಿಸಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ. ವೆಂಕಟೇಶ್, ಮಾಜಿ ಶಾಸಕಿ ಪರಿಮಳ ನಾಗಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಸುಂದರ್, ಉಪಾಧ್ಯಕ್ಷ ಡಾ.ಎಸ್.ದತ್ತೇಶ್‍ಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

andolanait

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

5 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

5 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

6 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

7 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

7 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

9 hours ago