ಜಿಲ್ಲೆಗಳು

ಸಣ್ಣ ಹಿಡುವಳಿಯಲ್ಲಿ ವೈವಿಧ್ಯ‘ಕೃಷಿ ಬ್ರಹ್ಮಾಂಡ’

ಚಿರಂಜೀವಿ ಎಸ್. ಹುಲ್ಲಹಳ್ಳಿ

ಮೈಸೂರು: ಸಮಗ್ರ ಕೃಷಿ ಪದ್ಧತಿಯ ‘ಕೃಷಿ ಬ್ರಹ್ಮಾಂಡ’ ಸುತ್ತೂರು ಜಾತ್ರೆಯ ಪ್ರಮುಖ ಆಕರ್ಷಣೆಯಾಗಿದ್ದು, ಸಾರ್ವಜನಿಕರನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿದೆ.

ಸಣ್ಣ ಹಿಡುವಳಿದಾರರು ಒಂದು ಎಕರೆ ಪ್ರದೇಶದಲ್ಲಿ ಹಲವು ಬಗೆಯ ಬೆಳೆಗಳನ್ನು ಬೆಳೆದು ಹೇಗೆ ಜೀವನ ನಿರ್ವಹಣೆ ಮಾಡಬಹುದು ಎಂಬುದನ್ನು ಕೃಷಿ ಬ್ರಹ್ಮಾಂಡದಲ್ಲಿ ತೋರಿಸಿಕೊಡಲಾಗುತ್ತಿದೆ. ಕೃಷಿ ಹಾಗೂ ಕೃಷಿಗೆ ಸಂಬಂಧಿಸಿದ ತಾಂತ್ರಿಕತೆಯ ಬಗ್ಗೆ ರೈತರಿಗೆ ಹೆಚ್ಚಿನ ಮಾಹಿತಿಯೊಂದಿಗೆ ದೇಸಿ ಹಾಗೂ ವಿದೇಶಿ ತರಕಾರಿಗಳು ಗಮನಸೆಳೆಯುತ್ತಿವೆ.. ವಿಶೇಷವಾಗಿ ಸಿರಿಧಾನ್ಯ ಬೆಳೆಗಳ ಪ್ರಾತ್ಯಕ್ಷಿಕೆ, ಮಣ್ಣಿನ ಸವಕಳಿ ತಪ್ಪಿಸಲು ಹಾಗೂ ಔಷಧಿ ಬೆಳೆಯಾಗಿ ಲಾವಂಚ, ದ್ವಿದಳ ಧಾನ್ಯಗಳ ವಿವಿಧ ತಳಿಗಳ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರೈತರ ಅನುಕೂಲಕ್ಕಾಗಿ ನೂತನ ತಂತ್ರಜ್ಞಾನ ಡ್ರೋನ್ ಬಳಕೆ ಕುರಿತ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿದೆ. ಸಮಗ್ರ ಬೆಳೆ ನಿರ್ವಹಣೆ, ವೈವಿಧ್ಯಮಯೂ ಬೆಳೆಗಳ ಪ್ರಾತ್ಯಕ್ಷಿಕೆ, ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಮಾರಾಟದ ವ್ಯವಸ್ಥೆ ಮಾಡಲಾಗಿದೆ.

ಸಿರಿಧಾನ್ಯ ಬೆಳೆಗಳ ಪ್ರದರ್ಶನ, ವಿಚಾರಸಂಕಿರಣ, ಮಾರುಕಟ್ಟೆ ಕಂಡುಕೊಳ್ಳುವುದು ಮೌಲ್ಯವರ್ಧನೆ ಬಗ್ಗೆ ತಿಳಿಸಿಕೊಡುವುದು, ಚರ್ಚೆ, ಸಿರಿಧಾನ್ಯದಿಂದ ಅಡುಗೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಹೊಸ ಸಾಧ್ಯತೆಗಳ ಬಗ್ಗೆ ರೈತರಿಗೆ ಮಾರ್ಗದರ್ಶನ ನೀಡಲಾಗುತ್ತಿದೆ. ಹಸು, ಕುರಿ, ಮೇಕೆ, ಕೋಳಿ ದೇಸಿ ತಳಿಗಳ ಪ್ರದರ್ಶನವೂ ಇದೆ. ಸೊಪ್ಪು ತರಕಾರಿ, ಕಾಳುಕಡ್ಡಿ ಸೇರಿದಂತೆ ಆಹಾರ ಪದಾರ್ಥಗಳನ್ನು ಮಾರುಕಟ್ಟೆಯಿಂದ ಖರೀದಿಸದೆ ಹೇಗೆ ಬದುಕಬಹುದು ಎಂಬುದನ್ನು ತಿಳಿಸುವುದೇ ಕೃಷಿ ಬ್ರಹ್ಮಾಂಡದ ವಿಶೇಷತೆಯಾಗಿದೆ.
ಕೃಷಿ ಜಮೀನಿನ ಸುತ್ತ ಸರ್ವೆ, ಸಿಲ್ವರ್ ಓಕ್, ಕತ್ತಾಳೆ, ಗ್ಲಿರಿಸೀಡಿಯಾ, ಚೊಗಚೆ, ಬಾಗೆ, ಬಿದಿರು, ಹೊಂಗೆ, ಬೇವು, ಸೀಬೆ, ಅಂಟುವಾಳ, ದಾಸವಾಳ ಇವೆ. ಸೊಪ್ಪುಗಳಾದ ಹಸಿರು ದಂಟು, ಬಿಳಿ ದಂಟು, ಸಬ್ಬಸಿಗೆ, ಮೆಂತ್ಯೆ, ಬಿಳಿಕೀರೆ, ತರಕಾರಿಗಳಾದ ಟೊಮೆಟೋ, ಹಸಿಮೆಣಸು, ಸಿಹಿಕುಂಬಳ, ಸೋರೆಕಾಯಿ, ಹಾಗಲ, ಹೀರೆ, ಈರುಳ್ಳಿ ನಡುವೆ ಎಲೆಕೋಸು ಮುಂತಾದವುಗಳನ್ನು ಬೆಳೆಯಲಾಗಿದೆ. ಅಲಸಂದೆ, ಅವರೆ, ತೊಗರಿ, ಬಟಾಣಿ, ಹೆಸರು, ಸೋಯಾ ಅವರೆ, ಸೂರ್ಯಕಾಂತಿ ಮುಂತಾದವುಗಳನ್ನು ಬೆಳೆಯಲಾಗಿದೆ.

ಜಮೀನಿನ ಇನ್ನೊಂದು ಭಾಗದಲ್ಲಿ ಪಪ್ಪಾಯಿ ಹಾಗೂ ಬಾಳೆಯನ್ನು ಬೆಳೆಯಲಾಗಿದ್ದು, ಬಾಳೆಯ ನಡುವೆ ವಿವಿಧ ಬಗೆಯ ಎಲೆಕೋಸು, ಅವರೆ, ಮರಗೆಣಸು, ಸಿಹಿಗೆಣಸನ್ನು ನೆಡಲಾಗಿದೆ. ಪಕ್ಕದಲ್ಲಿ ಔಷಧಿ ಗುಣಗಳ ಸಸ್ಯಗಳಾದ ಪುದಿನ, ಚಕ್ರಮುನಿ, ಆಡುಸೋಗೆ, ಅಮೃತಬಳ್ಳಿ, ನಾಗದಾಳಿ, ನಿಂಬೆ, ಗುಲಗಂಜಿ, ಬಸಳೆ, ಬೆಳ್ಳುಳ್ಳಿ ಹೀಗೆ ಹತ್ತು ಹಲವು ಸೊಪ್ಪು, ತರಕಾರಿ, ಹಣ್ಣುಗಳನ್ನು ಬೆಳೆಯಲಾಗಿದೆ.

ಯಾವುದೇ ರಾಸಾಯನಿಕ ಗೊಬ್ಬರ ಬಳಸದೆ ತರಕಾರಿ, ಇನ್ನಿತರ ಬೆಳೆಗಳನ್ನು ಬೆಳೆಯುವುದರಿಂದ ಖರ್ಚು ಕಡಿಮೆ. ಆರೋಗ್ಯದಾಯಕ ತರಕಾರಿ ಪದಾರ್ಥಗಳನ್ನು ಪಡೆಯಲು ಸಾಧ್ಯ ಎಂಬುದನ್ನು ಕೃಷಿ ಬ್ರಹ್ಮಾಂಡದ ಮೂಲಕ ತೋರಿಸಿಕೊಡಲಾಗಿದೆ ಎಂದು ಐಸಿಎಆರ್ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಪ್ರಭಾರ ಮುಖ್ಯಸ್ಥೆ ಎಚ್.ವಿ.ದಿವ್ಯಾ ಮಾಹಿತಿ ನೀಡಿದರು.


ಕೃಷಿ ಬ್ರಹ್ಮಾಂಡಕ್ಕೆ ಭೇಟಿ ನೀಡುವ ರೈತರಿಗೆ ಇಲ್ಲಿನ ಹಲವಾರು ವೈಶಿಷ್ಟಗಳನ್ನು ಮತ್ತು ದೇಶಿ ಹಾಗೂ ವಿದೇಶಿ ತಳಿಗಳ ಮತ್ತು ಕೃಷಿಗೆ ಸಂಬಂಧಿಸಿದ ತಾಂತ್ರಿಕತೆಯ ಬಗ್ಗೆ ಮೈಸೂರಿನ ಊಟಿ ರಸ್ತೆಯ ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಸಸ್ಯಶಾಸ್ತ್ರದ ವಿದ್ಯಾರ್ಥಿಗಳು ತಿಳಿಸಿಕೊಡುತ್ತಿದ್ದಾರೆ. ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.

– ಪ್ರೀತಮ್, ವಿದ್ಯಾರ್ಥಿ.


ಸುತ್ತೂರು ಜಾತ್ರೆಯು ಹಲವು ವೈಶಿಷ್ಟಗಳನ್ನು ಹೊಂದಿದ್ದರೂ ಕೃಷಿ ಮತ್ತು ವಸ್ತು ಪ್ರದರ್ಶನ ಮೇಳ ಪ್ರಮುಖ ಆಕರ್ಷಣೆಯಾಗಿದೆ. ನಾನು ಸುತ್ತೂರು ಜಾತ್ರೆಗೆ ಆಗಮಿಸಿದಾಗಲೆಲ್ಲವೂ ಕೃಷಿ ಬ್ರಹ್ಮಾಂಡ ನೋಡುತ್ತಿದ್ದೇನೆ. ಹೊಸ ಬಗೆಯ ವಿಧಾನಗಳನ್ನು ತಿಳಿದುಕೊಂಡು ನಮ್ಮ ಜಮೀನಿನ ಅಕ್ಕ ಪಕ್ಕದ ರೈತರೊಂದಿಗೆ ಚರ್ಚಿಸುತ್ತೇನೆ. ಒಟ್ಟಿಗೆ ಕೃಷಿ ಮೇಳ ಸೊಗಸಾಗಿದೆ.

– ಮನೋಜ್, ಯುವ ರೈತ.

andolanait

Recent Posts

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

41 mins ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

1 hour ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

3 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

3 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

4 hours ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

7 hours ago