ಜಿಲ್ಲೆಗಳು

ಆಯ್ದ ಮಾಧ್ಯಮಗಳಿಗೆ ದೀಪಾವಳಿ ಉಡುಗೊರೆ ತನಿಖೆಯಾಗಲಿ: ಎಚ್.ವಿಶ್ವನಾಥ್

ಮೈಸೂರು: ದೀಪಾವಳಿ ಉಡುಗೊರೆ ಹೆಸರಿನಲ್ಲಿ ಆಯ್ದ ಮಾಧ್ಯಮಗಳಿಗೆ ಸ್ವೀಟ್ ಬಾಕ್ಸ್ ಜತೆಗೆ ಹಣ ನೀಡಿಕೆ ಪ್ರಕರಣಕ್ಕೆ ಸಂಬಂಧಿಸಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೌನ ಮುರಿದು ಪ್ರಕರಣದ ತನಿಖೆ ಮಾಡಿಸಿ, ತಮ್ಮ ಕಚೇರಿಯಲ್ಲಿರುವ ಮಾಧ್ಯಮ ಕಾರ್ಯದರ್ಶಿಯನ್ನು ಹೊರ ಹಾಕಬೇಕು ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಗ್ರಹಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, ಸರ್ಕಾರ ಮಾತ್ರವಲ್ಲ. ಇಡೀ ವ್ಯವಸ್ಥೆಯಲ್ಲೇ ಭ್ರಷ್ಟಾಚಾರ ಹೆಚ್ಚಾಗಿದೆ. ಇದರಲ್ಲಿ ನಾವು-ನೀವು ಇಬ್ಬರೂ ಸೇರಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಪ್ರಮುಖ ಅಂಗ. ಅದಕ್ಕೇ ಉಡುಗೊರೆ ಹೆಸರಿನಲ್ಲಿ ಹಣ ಕೊಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಈ ಪ್ರಕರಣದ ಮೂಲಕ ಜನ ಸಮುದಾಯದ ಮುಂದೆ ಮಾಧ್ಯಮದ ಗೌರವ ಮತ್ತು ಅದಕ್ಕಿರುವ ಶಕ್ತಿಯನ್ನು ಕಳೆಯಲು ಹೊರಟಿದ್ದೇವೆ ಅನಿಸುತ್ತದೆ. ಕರ್ನಾಟಕದಲ್ಲಿ ಮಾಧ್ಯಮ ರಂಗಕ್ಕೆ ತನ್ನದೇ ಆದ ಪರಂಪರೆ ಇದೆ. ವಾಚ್-ಸ್ಕಾಚ್-ಕ್ಯಾಶ್-ಗೋಲ್ಡ್ ಕೊಟ್ಟು ಮಾಧ್ಯಮದ ವಿಶ್ವಾಸ ಮತ್ತು ಗೌರವ ಕಳೆಯಲು ಹೊರಟರೆ ನಾವು ಹುಡುಕುವುದಾದರೂ ಏನು? ಸಂವಿಧಾನದ ನಾಲ್ಕನೇ ಅಂಗ ಅನ್ನುವ ಮಾಧ್ಯಮವನ್ನು ನಾವು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ? ಮಾಧ್ಯಮವೇ ಸತ್ವ ಕಳೆದುಕೊಂಡರೆ ಉಳಿಯುವುದಾದರೂ ಏನು ಎಂದರು.

ಆಯ್ದ ಮಾಧ್ಯಮ, ವ್ಯಕ್ತಿಗಳಿಗೆ ಹಣ ನೀಡಲಾಗಿದೆ ಎಂದರೆ ಯಾರವರು? ಅವರೆಷ್ಟು ದೊಡ್ಡವರು ಎಂದು ಪ್ರಶ್ನಿಸಿದ ಅವರು, ಮಾಧ್ಯಮ ಕೂಡ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಛಾಟಿ ಬೀಸಬೇಕಿತ್ತು. ಉಡುಗೊರೆಯನ್ನು ಒಂದಿಬ್ಬರು ವಾಪಸ್ ನೀಡಿ ವಿಶ್ವಾಸಾರ್ಹತೆ ಉಳಿಸಿಕೊಂಡಿದ್ದಾರೆ ಅನ್ನುವುದಾದರೆ ಉಳಿದವರು ಒಪ್ಪಿಕೊಂಡಿದ್ದಾರಾ ಎಂದು ಪ್ರಶ್ನಿಸಿದರು.

ಈ ವಿಷಯದಲ್ಲಿ ಸಮಾಜದಲ್ಲಿ ಚರ್ಚೆಯಾಗಬೇಕು. ಮಾಧ್ಯಮವೇ ಅದಕ್ಕೆ ವೇದಿಕೆ ಕಲ್ಪಿಸಬೇಕು.ಆ ಮೂಲಕ ಮಾಧ್ಯಮ ಜನರ ವಿಶ್ವಾಸವನ್ನು ಕಾಪಾಡಿಕೊಳ್ಳಬೇಕು. ಇದೊಂದು ರೀತಿ ೨ನೇ ತರಗತಿಯ ತೋಳ-ಕುರಿ ಮರಿ ಕಥೆಯಂತಾಗಿದೆ. ಕೂಡಲೇ ಮುಖ್ಯಮಂತ್ರಿ ಈ ಪ್ರಕರಣದ ತನಿಖೆ ಮಾಡಿಸಬೇಕು. ಇಲ್ಲವಾದರೆ ಜನರಿಗೆ ಸರ್ಕಾರದ ಮೇಲಿನ ವಿಶ್ವಾಸ ಹೋಗುತ್ತೆ ಎಂದು ಹೇಳಿದರು.

ಗೇಟ್ ಪಾಸ್ ತೋರಿಸಿ

ಆರೋಗ್ಯ ಮಂತ್ರಿಯೋ ಅನಾರೋಗ್ಯ ಮಂತ್ರಿಯೋ ಅಂಥವರನ್ನು ಸಂಪುಟದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಏಕೆ ಹೆಸರು ಹಾಳು ಮಾಡಿಕೊಳ್ಳಬೇಕು. ಜನ-ಸರ್ಕಾರಕ್ಕಿಂತ ಮಂತ್ರಿ ದೊಡ್ಡವನಲ್ಲ ಎನ್ನುವ ಮೂಲಕ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

 

 

 

 

andolana

Recent Posts

ಫೆ.೫ರಂದು ಶ್ರೀ ಶಂಭುಲಿಂಗೇಶ್ವರ ದೇವಾಲಯ ಲೋಕಾರ್ಪಣೆ

ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ  ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…

55 mins ago

ಬಿಪಿಎಲ್ ಕಾರ್ಡ್ ಇಲ್ಲದಿದ್ದರೆ ಜಿಲ್ಲಾಸ್ಪತ್ರೆ ದುಬಾರಿ!

ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …

59 mins ago

ಸುರಕ್ಷತೆಯ ಗ್ಯಾರಂಟಿ ಇಲ್ಲದ ಶಾಲಾ ವಾಹನಗಳಲ್ಲಿ ಮಕ್ಕಳ ಪ್ರಯಾಣ!

ಮಹದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಹಲವು ಶಾಲೆಗಳಲ್ಲಿ ದುರಸ್ತಿಗೆ ಬಂದಿರುವ, ವಿಮೆ ಇಲ್ಲದ ವಾಹನಗಳ ಬಳಕೆ; ಸಾರ್ವಜನಿಕರಲ್ಲಿ ಆತಂಕ ಹನೂರು:…

1 hour ago

ಈ ಜಾಗ ನೋಡಿ; ಕಸ ಹಾಕುವ ಮುನ್ನ ಯೋಚನೆ ಮಾಡಿ!

ಕೆ.ಬಿ.ರಮೇಶ ನಾಯಕ ಕಸ ಎಸೆಯುತ್ತಿದ್ದ ಸ್ಥಳಗಳಲ್ಲಿ ಮನರಂಜನಾ ವಸ್ತುಗಳ ಚಿತ್ತಾಕರ್ಷಣೆ ರಸ್ತೆ ಬದಿ ಕಸ ಹಾಕುವವರ ಮನ ಪರಿವರ್ತನೆಗೆ ವಿನೂತನ…

1 hour ago

ಉಂಡವಾಡಿ ಪೈಪ್‌ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆಗಳು

ಎಂ.ಅನುಚೇತನ್ ಸಂಚಾರಕ್ಕೆ ಅಡಚಣೆ,ಆರೋಗ್ಯಕ್ಕೆ ಕುತ್ತು, ಶಾಲಾ ಮಕ್ಕಳು, ಸ್ಥಳೀಯರು ಹೈರಾಣ ಮೈಸೂರು: ಮೈಸೂರಿನಲ್ಲಿ ಕುಡಿಯುವ ನೀರಿನ ಬರ ನೀಗಿಸುವ ಸಲುವಾಗಿ,…

1 hour ago

ಫ್ಲೋರೈಡ್‌ಯುಕ್ತ ನೀರು ಕುಡಿದು ಕಿಡ್ನಿ ಸಮಸ್ಯೆ!

ಮಹದೇಶ್ ಎಂ.ಗೌಡ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತ; ಫ್ಲೋರೈಡ್‌ ಯುಕ್ತ ನೀರು ಸೇವಿಸಿ ಆರೋಗ್ಯ ಸಮಸ್ಯೆ ಎನ್ನುವ ಸ್ಥಳೀಯರು…

1 hour ago