ಜಿಲ್ಲೆಗಳು

ಆಯ್ದ ಮಾಧ್ಯಮಗಳಿಗೆ ದೀಪಾವಳಿ ಉಡುಗೊರೆ ತನಿಖೆಯಾಗಲಿ: ಎಚ್.ವಿಶ್ವನಾಥ್

ಮೈಸೂರು: ದೀಪಾವಳಿ ಉಡುಗೊರೆ ಹೆಸರಿನಲ್ಲಿ ಆಯ್ದ ಮಾಧ್ಯಮಗಳಿಗೆ ಸ್ವೀಟ್ ಬಾಕ್ಸ್ ಜತೆಗೆ ಹಣ ನೀಡಿಕೆ ಪ್ರಕರಣಕ್ಕೆ ಸಂಬಂಧಿಸಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೌನ ಮುರಿದು ಪ್ರಕರಣದ ತನಿಖೆ ಮಾಡಿಸಿ, ತಮ್ಮ ಕಚೇರಿಯಲ್ಲಿರುವ ಮಾಧ್ಯಮ ಕಾರ್ಯದರ್ಶಿಯನ್ನು ಹೊರ ಹಾಕಬೇಕು ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಗ್ರಹಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, ಸರ್ಕಾರ ಮಾತ್ರವಲ್ಲ. ಇಡೀ ವ್ಯವಸ್ಥೆಯಲ್ಲೇ ಭ್ರಷ್ಟಾಚಾರ ಹೆಚ್ಚಾಗಿದೆ. ಇದರಲ್ಲಿ ನಾವು-ನೀವು ಇಬ್ಬರೂ ಸೇರಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಪ್ರಮುಖ ಅಂಗ. ಅದಕ್ಕೇ ಉಡುಗೊರೆ ಹೆಸರಿನಲ್ಲಿ ಹಣ ಕೊಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಈ ಪ್ರಕರಣದ ಮೂಲಕ ಜನ ಸಮುದಾಯದ ಮುಂದೆ ಮಾಧ್ಯಮದ ಗೌರವ ಮತ್ತು ಅದಕ್ಕಿರುವ ಶಕ್ತಿಯನ್ನು ಕಳೆಯಲು ಹೊರಟಿದ್ದೇವೆ ಅನಿಸುತ್ತದೆ. ಕರ್ನಾಟಕದಲ್ಲಿ ಮಾಧ್ಯಮ ರಂಗಕ್ಕೆ ತನ್ನದೇ ಆದ ಪರಂಪರೆ ಇದೆ. ವಾಚ್-ಸ್ಕಾಚ್-ಕ್ಯಾಶ್-ಗೋಲ್ಡ್ ಕೊಟ್ಟು ಮಾಧ್ಯಮದ ವಿಶ್ವಾಸ ಮತ್ತು ಗೌರವ ಕಳೆಯಲು ಹೊರಟರೆ ನಾವು ಹುಡುಕುವುದಾದರೂ ಏನು? ಸಂವಿಧಾನದ ನಾಲ್ಕನೇ ಅಂಗ ಅನ್ನುವ ಮಾಧ್ಯಮವನ್ನು ನಾವು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ? ಮಾಧ್ಯಮವೇ ಸತ್ವ ಕಳೆದುಕೊಂಡರೆ ಉಳಿಯುವುದಾದರೂ ಏನು ಎಂದರು.

ಆಯ್ದ ಮಾಧ್ಯಮ, ವ್ಯಕ್ತಿಗಳಿಗೆ ಹಣ ನೀಡಲಾಗಿದೆ ಎಂದರೆ ಯಾರವರು? ಅವರೆಷ್ಟು ದೊಡ್ಡವರು ಎಂದು ಪ್ರಶ್ನಿಸಿದ ಅವರು, ಮಾಧ್ಯಮ ಕೂಡ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಛಾಟಿ ಬೀಸಬೇಕಿತ್ತು. ಉಡುಗೊರೆಯನ್ನು ಒಂದಿಬ್ಬರು ವಾಪಸ್ ನೀಡಿ ವಿಶ್ವಾಸಾರ್ಹತೆ ಉಳಿಸಿಕೊಂಡಿದ್ದಾರೆ ಅನ್ನುವುದಾದರೆ ಉಳಿದವರು ಒಪ್ಪಿಕೊಂಡಿದ್ದಾರಾ ಎಂದು ಪ್ರಶ್ನಿಸಿದರು.

ಈ ವಿಷಯದಲ್ಲಿ ಸಮಾಜದಲ್ಲಿ ಚರ್ಚೆಯಾಗಬೇಕು. ಮಾಧ್ಯಮವೇ ಅದಕ್ಕೆ ವೇದಿಕೆ ಕಲ್ಪಿಸಬೇಕು.ಆ ಮೂಲಕ ಮಾಧ್ಯಮ ಜನರ ವಿಶ್ವಾಸವನ್ನು ಕಾಪಾಡಿಕೊಳ್ಳಬೇಕು. ಇದೊಂದು ರೀತಿ ೨ನೇ ತರಗತಿಯ ತೋಳ-ಕುರಿ ಮರಿ ಕಥೆಯಂತಾಗಿದೆ. ಕೂಡಲೇ ಮುಖ್ಯಮಂತ್ರಿ ಈ ಪ್ರಕರಣದ ತನಿಖೆ ಮಾಡಿಸಬೇಕು. ಇಲ್ಲವಾದರೆ ಜನರಿಗೆ ಸರ್ಕಾರದ ಮೇಲಿನ ವಿಶ್ವಾಸ ಹೋಗುತ್ತೆ ಎಂದು ಹೇಳಿದರು.

ಗೇಟ್ ಪಾಸ್ ತೋರಿಸಿ

ಆರೋಗ್ಯ ಮಂತ್ರಿಯೋ ಅನಾರೋಗ್ಯ ಮಂತ್ರಿಯೋ ಅಂಥವರನ್ನು ಸಂಪುಟದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಏಕೆ ಹೆಸರು ಹಾಳು ಮಾಡಿಕೊಳ್ಳಬೇಕು. ಜನ-ಸರ್ಕಾರಕ್ಕಿಂತ ಮಂತ್ರಿ ದೊಡ್ಡವನಲ್ಲ ಎನ್ನುವ ಮೂಲಕ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

 

 

 

 

andolana

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

3 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

3 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

4 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

4 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

5 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

6 hours ago