ಜಿಲ್ಲೆಗಳು

ಆಯ್ದ ಮಾಧ್ಯಮಗಳಿಗೆ ದೀಪಾವಳಿ ಉಡುಗೊರೆ ತನಿಖೆಯಾಗಲಿ: ಎಚ್.ವಿಶ್ವನಾಥ್

ಮೈಸೂರು: ದೀಪಾವಳಿ ಉಡುಗೊರೆ ಹೆಸರಿನಲ್ಲಿ ಆಯ್ದ ಮಾಧ್ಯಮಗಳಿಗೆ ಸ್ವೀಟ್ ಬಾಕ್ಸ್ ಜತೆಗೆ ಹಣ ನೀಡಿಕೆ ಪ್ರಕರಣಕ್ಕೆ ಸಂಬಂಧಿಸಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೌನ ಮುರಿದು ಪ್ರಕರಣದ ತನಿಖೆ ಮಾಡಿಸಿ, ತಮ್ಮ ಕಚೇರಿಯಲ್ಲಿರುವ ಮಾಧ್ಯಮ ಕಾರ್ಯದರ್ಶಿಯನ್ನು ಹೊರ ಹಾಕಬೇಕು ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆಗ್ರಹಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, ಸರ್ಕಾರ ಮಾತ್ರವಲ್ಲ. ಇಡೀ ವ್ಯವಸ್ಥೆಯಲ್ಲೇ ಭ್ರಷ್ಟಾಚಾರ ಹೆಚ್ಚಾಗಿದೆ. ಇದರಲ್ಲಿ ನಾವು-ನೀವು ಇಬ್ಬರೂ ಸೇರಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಪ್ರಮುಖ ಅಂಗ. ಅದಕ್ಕೇ ಉಡುಗೊರೆ ಹೆಸರಿನಲ್ಲಿ ಹಣ ಕೊಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಈ ಪ್ರಕರಣದ ಮೂಲಕ ಜನ ಸಮುದಾಯದ ಮುಂದೆ ಮಾಧ್ಯಮದ ಗೌರವ ಮತ್ತು ಅದಕ್ಕಿರುವ ಶಕ್ತಿಯನ್ನು ಕಳೆಯಲು ಹೊರಟಿದ್ದೇವೆ ಅನಿಸುತ್ತದೆ. ಕರ್ನಾಟಕದಲ್ಲಿ ಮಾಧ್ಯಮ ರಂಗಕ್ಕೆ ತನ್ನದೇ ಆದ ಪರಂಪರೆ ಇದೆ. ವಾಚ್-ಸ್ಕಾಚ್-ಕ್ಯಾಶ್-ಗೋಲ್ಡ್ ಕೊಟ್ಟು ಮಾಧ್ಯಮದ ವಿಶ್ವಾಸ ಮತ್ತು ಗೌರವ ಕಳೆಯಲು ಹೊರಟರೆ ನಾವು ಹುಡುಕುವುದಾದರೂ ಏನು? ಸಂವಿಧಾನದ ನಾಲ್ಕನೇ ಅಂಗ ಅನ್ನುವ ಮಾಧ್ಯಮವನ್ನು ನಾವು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ? ಮಾಧ್ಯಮವೇ ಸತ್ವ ಕಳೆದುಕೊಂಡರೆ ಉಳಿಯುವುದಾದರೂ ಏನು ಎಂದರು.

ಆಯ್ದ ಮಾಧ್ಯಮ, ವ್ಯಕ್ತಿಗಳಿಗೆ ಹಣ ನೀಡಲಾಗಿದೆ ಎಂದರೆ ಯಾರವರು? ಅವರೆಷ್ಟು ದೊಡ್ಡವರು ಎಂದು ಪ್ರಶ್ನಿಸಿದ ಅವರು, ಮಾಧ್ಯಮ ಕೂಡ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಛಾಟಿ ಬೀಸಬೇಕಿತ್ತು. ಉಡುಗೊರೆಯನ್ನು ಒಂದಿಬ್ಬರು ವಾಪಸ್ ನೀಡಿ ವಿಶ್ವಾಸಾರ್ಹತೆ ಉಳಿಸಿಕೊಂಡಿದ್ದಾರೆ ಅನ್ನುವುದಾದರೆ ಉಳಿದವರು ಒಪ್ಪಿಕೊಂಡಿದ್ದಾರಾ ಎಂದು ಪ್ರಶ್ನಿಸಿದರು.

ಈ ವಿಷಯದಲ್ಲಿ ಸಮಾಜದಲ್ಲಿ ಚರ್ಚೆಯಾಗಬೇಕು. ಮಾಧ್ಯಮವೇ ಅದಕ್ಕೆ ವೇದಿಕೆ ಕಲ್ಪಿಸಬೇಕು.ಆ ಮೂಲಕ ಮಾಧ್ಯಮ ಜನರ ವಿಶ್ವಾಸವನ್ನು ಕಾಪಾಡಿಕೊಳ್ಳಬೇಕು. ಇದೊಂದು ರೀತಿ ೨ನೇ ತರಗತಿಯ ತೋಳ-ಕುರಿ ಮರಿ ಕಥೆಯಂತಾಗಿದೆ. ಕೂಡಲೇ ಮುಖ್ಯಮಂತ್ರಿ ಈ ಪ್ರಕರಣದ ತನಿಖೆ ಮಾಡಿಸಬೇಕು. ಇಲ್ಲವಾದರೆ ಜನರಿಗೆ ಸರ್ಕಾರದ ಮೇಲಿನ ವಿಶ್ವಾಸ ಹೋಗುತ್ತೆ ಎಂದು ಹೇಳಿದರು.

ಗೇಟ್ ಪಾಸ್ ತೋರಿಸಿ

ಆರೋಗ್ಯ ಮಂತ್ರಿಯೋ ಅನಾರೋಗ್ಯ ಮಂತ್ರಿಯೋ ಅಂಥವರನ್ನು ಸಂಪುಟದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಏಕೆ ಹೆಸರು ಹಾಳು ಮಾಡಿಕೊಳ್ಳಬೇಕು. ಜನ-ಸರ್ಕಾರಕ್ಕಿಂತ ಮಂತ್ರಿ ದೊಡ್ಡವನಲ್ಲ ಎನ್ನುವ ಮೂಲಕ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

 

 

 

 

andolana

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

14 mins ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

47 mins ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

1 hour ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

5 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 hours ago