ಜಿಲ್ಲೆಗಳು

ದೀಪಾವಳಿ; ಶಬ್ದ, ವಾಯು ಮಾಲಿನ್ಯ ಹೆಚ್ಚಳ

ಮೈಸೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮೈಸೂರು ನಗರದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯದಲ್ಲಿ ಕೊಂಚ ಹೆಚ್ಚಳವಾಗಿದೆ.

ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಅಳೆಯಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಮೈಸೂರಿನ ಹೆಬ್ಬಾಳ್‌ನಲ್ಲಿರುವ ಮಂಡಳಿಯ ಕಚೇರಿ ಆವರಣ ಹಾಗೂ ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದ ಬಳಿ ಮಾಪನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಎರಡೂ ಮಾಪನ ಕೇಂದ್ರಗಳಲ್ಲಿ ದೀಪಾವಳಿ ಹಬ್ಬದ ಪೂರ್ವದಲ್ಲಿ ಅ.೧೮ರಂದು ಮತ್ತು ದೀಪಾವಳಿ ಹಬ್ಬದ ವೇಳೆ ನ.೨೪ ರಿಂದ ೨೬ರವರೆಗೆ ಮೂರು ದಿನಗಳ ಕಾಲ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯವನ್ನು ಅಳೆಯಲಾಗಿದೆ.

ಹೆಬ್ಬಾಳ್ ಮಾಪನ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಪೂರ್ವದಲ್ಲಿ ೨೦೨೧ರಲ್ಲಿ ವಾಯು ಮಾಲಿನ್ಯ ಪ್ರಮಾಣ ೩೪ ಪಾಯಿಂಟ್ ದಾಖಲಾಗಿದ್ದರೆ, ಹಬ್ಬದ ಮೂರು ದಿನಗಳ ಕಾಲ ೩೫, ೫೩ ಹಾಗೂ ೭೨ ಪಾಯಿಂಟ್ ದಾಖಲಾಗಿತ್ತು. ಈ ವರ್ಷ ಹಬ್ಬದ ಪೂರ್ವದಲ್ಲಿ ೪೪ ಪಾಯಿಂಟ್ ಇದ್ದ ಮಾಲಿನ್ಯದ ಪ್ರಮಾಣ ಹಬ್ಬದ ಮೂರು ದಿನಗಳಲ್ಲಿ ಕ್ರಮವಾಗಿ ೬೪, ೭೧ ಹಾಗೂ ಹಬ್ಬದ ದಿನ ಗರಿಷ್ಠ ೧೧೭ ಪಾಯಿಂಟ್ ಮಾಲಿನ್ಯ ಪ್ರಮಾಣ ದಾಖಲಾಗಿದೆ.

ಶಬ್ದ ಮಾಲಿನ್ಯ ೨೦೨೧ರಲ್ಲಿ ದೀಪಾವಳಿ ಹಬ್ಬದ ಪೂರ್ವದಲ್ಲಿ ೬೬ ಪಾಯಿಂಟ್ ದಾಖಲಾಗಿದ್ದರೆ, ಹಬ್ಬದ ಮೂರು ದಿನಗಳಲ್ಲಿ ೬೫, ೬೪ ಹಾಗೂ ೬೯ ಪಾಯಿಂಟ್, ಈ ವರ್ಷ ಹಬ್ಬದ ಪೂರ್ವ ಅ.೧೮ರಂದು ೬೧ ಪಾಯಿಂಟ್ ಇದ್ದ ಮಾಲಿನ್ಯ ಪ್ರಮಾಣ ಹಬ್ಬದ ಮೂರು ದಿನಗಳಲ್ಲಿ ೬೫ ಮತ್ತು ಮೂರನೇ ದಿನ ೭೪ ಪಾಯಿಂಟ್ ದಾಖಲಾಗಿದೆ.

ಮೂರು ದಿನಗಳ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯದಲ್ಲಿ ಮೈಸೂರು ರಾಜ್ಯದಲ್ಲಿ ೧೯ನೇ ಸ್ಥಾನದಲ್ಲಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶಬ್ದ ಮಾಲಿನ್ಯ ಶೇ.೧೬.೫ರಷ್ಟಿದೆ, ವಾಯು ಮಾಲಿನ್ಯ ಶೇ.೫೩ರಷ್ಟು ಹೆಚ್ಚಳವಾಗಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಗಣೇಶ್ ತಿಳಿಸಿದ್ದಾರೆ.

 

 

 

 

andolana

Recent Posts

ಓದುಗರ ಪತ್ರ: ಸ್ವಾಗತಾರ್ಹ ನಡೆ!

ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…

34 seconds ago

ಓದುಗರ ಪತ್ರ: ನಿರ್ಲಕ್ಷ್ಯಕ್ಕೆ ಒಳಗಾದ ಬ್ಯಾರಿಕೇಡ್‌ಗಳು

ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…

3 mins ago

ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹ

ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ  ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…

5 mins ago

ಕೊಡಗಿನಲ್ಲಿ ಶೇ.80ರಷ್ಟು ಭತ್ತ ಕಟಾವು ಕಾರ್ಯ ಪೂರ್ಣ

ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…

10 mins ago

ಮಳೆಯಿಂದ ತಗ್ಗಿದ ಚಳಿ, ಒಕ್ಕಣೆಗೆ ಪರದಾಟ!

ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…

14 mins ago

ಚುಂಚನಕಟ್ಟೆ: ಕಣ್ಮನ ಸೆಳೆಯುತ್ತಿರುವ ಜಾನುವಾರು ಜಾತ್ರೆ

ಆನಂದ್‌ ಹೊಸೂರು  ೪ ರಿಂದ ೬ ಲಕ್ಷ ರೂ.ಗೂ ಅಧಿಕ ಬೆಲೆಬಾಳುವ ದುಬಾರಿ ಎತ್ತುಗಳು ಆಕರ್ಷಣೆ; ರೈತರ ಸಂಭ್ರಮ ಹೊಸೂರು:…

18 mins ago