ಜಿಲ್ಲೆಗಳು

ದೀಪಾವಳಿ; ಶಬ್ದ, ವಾಯು ಮಾಲಿನ್ಯ ಹೆಚ್ಚಳ

ಮೈಸೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮೈಸೂರು ನಗರದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯದಲ್ಲಿ ಕೊಂಚ ಹೆಚ್ಚಳವಾಗಿದೆ.

ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಅಳೆಯಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಮೈಸೂರಿನ ಹೆಬ್ಬಾಳ್‌ನಲ್ಲಿರುವ ಮಂಡಳಿಯ ಕಚೇರಿ ಆವರಣ ಹಾಗೂ ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದ ಬಳಿ ಮಾಪನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಎರಡೂ ಮಾಪನ ಕೇಂದ್ರಗಳಲ್ಲಿ ದೀಪಾವಳಿ ಹಬ್ಬದ ಪೂರ್ವದಲ್ಲಿ ಅ.೧೮ರಂದು ಮತ್ತು ದೀಪಾವಳಿ ಹಬ್ಬದ ವೇಳೆ ನ.೨೪ ರಿಂದ ೨೬ರವರೆಗೆ ಮೂರು ದಿನಗಳ ಕಾಲ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯವನ್ನು ಅಳೆಯಲಾಗಿದೆ.

ಹೆಬ್ಬಾಳ್ ಮಾಪನ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಪೂರ್ವದಲ್ಲಿ ೨೦೨೧ರಲ್ಲಿ ವಾಯು ಮಾಲಿನ್ಯ ಪ್ರಮಾಣ ೩೪ ಪಾಯಿಂಟ್ ದಾಖಲಾಗಿದ್ದರೆ, ಹಬ್ಬದ ಮೂರು ದಿನಗಳ ಕಾಲ ೩೫, ೫೩ ಹಾಗೂ ೭೨ ಪಾಯಿಂಟ್ ದಾಖಲಾಗಿತ್ತು. ಈ ವರ್ಷ ಹಬ್ಬದ ಪೂರ್ವದಲ್ಲಿ ೪೪ ಪಾಯಿಂಟ್ ಇದ್ದ ಮಾಲಿನ್ಯದ ಪ್ರಮಾಣ ಹಬ್ಬದ ಮೂರು ದಿನಗಳಲ್ಲಿ ಕ್ರಮವಾಗಿ ೬೪, ೭೧ ಹಾಗೂ ಹಬ್ಬದ ದಿನ ಗರಿಷ್ಠ ೧೧೭ ಪಾಯಿಂಟ್ ಮಾಲಿನ್ಯ ಪ್ರಮಾಣ ದಾಖಲಾಗಿದೆ.

ಶಬ್ದ ಮಾಲಿನ್ಯ ೨೦೨೧ರಲ್ಲಿ ದೀಪಾವಳಿ ಹಬ್ಬದ ಪೂರ್ವದಲ್ಲಿ ೬೬ ಪಾಯಿಂಟ್ ದಾಖಲಾಗಿದ್ದರೆ, ಹಬ್ಬದ ಮೂರು ದಿನಗಳಲ್ಲಿ ೬೫, ೬೪ ಹಾಗೂ ೬೯ ಪಾಯಿಂಟ್, ಈ ವರ್ಷ ಹಬ್ಬದ ಪೂರ್ವ ಅ.೧೮ರಂದು ೬೧ ಪಾಯಿಂಟ್ ಇದ್ದ ಮಾಲಿನ್ಯ ಪ್ರಮಾಣ ಹಬ್ಬದ ಮೂರು ದಿನಗಳಲ್ಲಿ ೬೫ ಮತ್ತು ಮೂರನೇ ದಿನ ೭೪ ಪಾಯಿಂಟ್ ದಾಖಲಾಗಿದೆ.

ಮೂರು ದಿನಗಳ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯದಲ್ಲಿ ಮೈಸೂರು ರಾಜ್ಯದಲ್ಲಿ ೧೯ನೇ ಸ್ಥಾನದಲ್ಲಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶಬ್ದ ಮಾಲಿನ್ಯ ಶೇ.೧೬.೫ರಷ್ಟಿದೆ, ವಾಯು ಮಾಲಿನ್ಯ ಶೇ.೫೩ರಷ್ಟು ಹೆಚ್ಚಳವಾಗಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಗಣೇಶ್ ತಿಳಿಸಿದ್ದಾರೆ.

 

 

 

 

andolana

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

43 mins ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

1 hour ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

1 hour ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

1 hour ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

1 hour ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

1 hour ago