ಜಿಲ್ಲೆಗಳು

ದೀಪಾವಳಿ; ಶಬ್ದ, ವಾಯು ಮಾಲಿನ್ಯ ಹೆಚ್ಚಳ

ಮೈಸೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮೈಸೂರು ನಗರದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯದಲ್ಲಿ ಕೊಂಚ ಹೆಚ್ಚಳವಾಗಿದೆ.

ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಅಳೆಯಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಮೈಸೂರಿನ ಹೆಬ್ಬಾಳ್‌ನಲ್ಲಿರುವ ಮಂಡಳಿಯ ಕಚೇರಿ ಆವರಣ ಹಾಗೂ ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದ ಬಳಿ ಮಾಪನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಎರಡೂ ಮಾಪನ ಕೇಂದ್ರಗಳಲ್ಲಿ ದೀಪಾವಳಿ ಹಬ್ಬದ ಪೂರ್ವದಲ್ಲಿ ಅ.೧೮ರಂದು ಮತ್ತು ದೀಪಾವಳಿ ಹಬ್ಬದ ವೇಳೆ ನ.೨೪ ರಿಂದ ೨೬ರವರೆಗೆ ಮೂರು ದಿನಗಳ ಕಾಲ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯವನ್ನು ಅಳೆಯಲಾಗಿದೆ.

ಹೆಬ್ಬಾಳ್ ಮಾಪನ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಪೂರ್ವದಲ್ಲಿ ೨೦೨೧ರಲ್ಲಿ ವಾಯು ಮಾಲಿನ್ಯ ಪ್ರಮಾಣ ೩೪ ಪಾಯಿಂಟ್ ದಾಖಲಾಗಿದ್ದರೆ, ಹಬ್ಬದ ಮೂರು ದಿನಗಳ ಕಾಲ ೩೫, ೫೩ ಹಾಗೂ ೭೨ ಪಾಯಿಂಟ್ ದಾಖಲಾಗಿತ್ತು. ಈ ವರ್ಷ ಹಬ್ಬದ ಪೂರ್ವದಲ್ಲಿ ೪೪ ಪಾಯಿಂಟ್ ಇದ್ದ ಮಾಲಿನ್ಯದ ಪ್ರಮಾಣ ಹಬ್ಬದ ಮೂರು ದಿನಗಳಲ್ಲಿ ಕ್ರಮವಾಗಿ ೬೪, ೭೧ ಹಾಗೂ ಹಬ್ಬದ ದಿನ ಗರಿಷ್ಠ ೧೧೭ ಪಾಯಿಂಟ್ ಮಾಲಿನ್ಯ ಪ್ರಮಾಣ ದಾಖಲಾಗಿದೆ.

ಶಬ್ದ ಮಾಲಿನ್ಯ ೨೦೨೧ರಲ್ಲಿ ದೀಪಾವಳಿ ಹಬ್ಬದ ಪೂರ್ವದಲ್ಲಿ ೬೬ ಪಾಯಿಂಟ್ ದಾಖಲಾಗಿದ್ದರೆ, ಹಬ್ಬದ ಮೂರು ದಿನಗಳಲ್ಲಿ ೬೫, ೬೪ ಹಾಗೂ ೬೯ ಪಾಯಿಂಟ್, ಈ ವರ್ಷ ಹಬ್ಬದ ಪೂರ್ವ ಅ.೧೮ರಂದು ೬೧ ಪಾಯಿಂಟ್ ಇದ್ದ ಮಾಲಿನ್ಯ ಪ್ರಮಾಣ ಹಬ್ಬದ ಮೂರು ದಿನಗಳಲ್ಲಿ ೬೫ ಮತ್ತು ಮೂರನೇ ದಿನ ೭೪ ಪಾಯಿಂಟ್ ದಾಖಲಾಗಿದೆ.

ಮೂರು ದಿನಗಳ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯದಲ್ಲಿ ಮೈಸೂರು ರಾಜ್ಯದಲ್ಲಿ ೧೯ನೇ ಸ್ಥಾನದಲ್ಲಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶಬ್ದ ಮಾಲಿನ್ಯ ಶೇ.೧೬.೫ರಷ್ಟಿದೆ, ವಾಯು ಮಾಲಿನ್ಯ ಶೇ.೫೩ರಷ್ಟು ಹೆಚ್ಚಳವಾಗಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಗಣೇಶ್ ತಿಳಿಸಿದ್ದಾರೆ.

 

 

 

 

andolana

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

3 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

4 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

7 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

10 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

10 hours ago