ಜಿಲ್ಲೆಗಳು

ದೀಪಾವಳಿ; ಶಬ್ದ, ವಾಯು ಮಾಲಿನ್ಯ ಹೆಚ್ಚಳ

ಮೈಸೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮೈಸೂರು ನಗರದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯದಲ್ಲಿ ಕೊಂಚ ಹೆಚ್ಚಳವಾಗಿದೆ.

ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಅಳೆಯಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಮೈಸೂರಿನ ಹೆಬ್ಬಾಳ್‌ನಲ್ಲಿರುವ ಮಂಡಳಿಯ ಕಚೇರಿ ಆವರಣ ಹಾಗೂ ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದ ಬಳಿ ಮಾಪನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಎರಡೂ ಮಾಪನ ಕೇಂದ್ರಗಳಲ್ಲಿ ದೀಪಾವಳಿ ಹಬ್ಬದ ಪೂರ್ವದಲ್ಲಿ ಅ.೧೮ರಂದು ಮತ್ತು ದೀಪಾವಳಿ ಹಬ್ಬದ ವೇಳೆ ನ.೨೪ ರಿಂದ ೨೬ರವರೆಗೆ ಮೂರು ದಿನಗಳ ಕಾಲ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯವನ್ನು ಅಳೆಯಲಾಗಿದೆ.

ಹೆಬ್ಬಾಳ್ ಮಾಪನ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಪೂರ್ವದಲ್ಲಿ ೨೦೨೧ರಲ್ಲಿ ವಾಯು ಮಾಲಿನ್ಯ ಪ್ರಮಾಣ ೩೪ ಪಾಯಿಂಟ್ ದಾಖಲಾಗಿದ್ದರೆ, ಹಬ್ಬದ ಮೂರು ದಿನಗಳ ಕಾಲ ೩೫, ೫೩ ಹಾಗೂ ೭೨ ಪಾಯಿಂಟ್ ದಾಖಲಾಗಿತ್ತು. ಈ ವರ್ಷ ಹಬ್ಬದ ಪೂರ್ವದಲ್ಲಿ ೪೪ ಪಾಯಿಂಟ್ ಇದ್ದ ಮಾಲಿನ್ಯದ ಪ್ರಮಾಣ ಹಬ್ಬದ ಮೂರು ದಿನಗಳಲ್ಲಿ ಕ್ರಮವಾಗಿ ೬೪, ೭೧ ಹಾಗೂ ಹಬ್ಬದ ದಿನ ಗರಿಷ್ಠ ೧೧೭ ಪಾಯಿಂಟ್ ಮಾಲಿನ್ಯ ಪ್ರಮಾಣ ದಾಖಲಾಗಿದೆ.

ಶಬ್ದ ಮಾಲಿನ್ಯ ೨೦೨೧ರಲ್ಲಿ ದೀಪಾವಳಿ ಹಬ್ಬದ ಪೂರ್ವದಲ್ಲಿ ೬೬ ಪಾಯಿಂಟ್ ದಾಖಲಾಗಿದ್ದರೆ, ಹಬ್ಬದ ಮೂರು ದಿನಗಳಲ್ಲಿ ೬೫, ೬೪ ಹಾಗೂ ೬೯ ಪಾಯಿಂಟ್, ಈ ವರ್ಷ ಹಬ್ಬದ ಪೂರ್ವ ಅ.೧೮ರಂದು ೬೧ ಪಾಯಿಂಟ್ ಇದ್ದ ಮಾಲಿನ್ಯ ಪ್ರಮಾಣ ಹಬ್ಬದ ಮೂರು ದಿನಗಳಲ್ಲಿ ೬೫ ಮತ್ತು ಮೂರನೇ ದಿನ ೭೪ ಪಾಯಿಂಟ್ ದಾಖಲಾಗಿದೆ.

ಮೂರು ದಿನಗಳ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯದಲ್ಲಿ ಮೈಸೂರು ರಾಜ್ಯದಲ್ಲಿ ೧೯ನೇ ಸ್ಥಾನದಲ್ಲಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶಬ್ದ ಮಾಲಿನ್ಯ ಶೇ.೧೬.೫ರಷ್ಟಿದೆ, ವಾಯು ಮಾಲಿನ್ಯ ಶೇ.೫೩ರಷ್ಟು ಹೆಚ್ಚಳವಾಗಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಗಣೇಶ್ ತಿಳಿಸಿದ್ದಾರೆ.

 

 

 

 

andolana

Recent Posts

ಹಾಸನ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ: ಎಕರೆಗಟ್ಟಲೇ ಬಾಳೆ ಬೆಳೆ ನಾಶ

ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಅರಕಲಗೂಡು ತಾಲ್ಲೂಕಿನ…

18 mins ago

ಗಂಡು ಮಗುವಿಗೆ ಜನ್ಮ ನೀಡಿದ ಡಾಲಿ ಧನಂಜಯ್ ಪತ್ನಿ ಧನ್ಯತಾ

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್‌…

1 hour ago

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

5 hours ago

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…

5 hours ago

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…

5 hours ago

ಏಪ್ರಿಲ್‌ನಲ್ಲಿ ಹೊಸ ದಾಖಲೆಯ 2.43 ಲಕ್ಷ ಕೋಟಿ ರೂ ಜಿಎಸ್‌ಟಿ ಸಂಗ್ರಹ

ನವದೆಹಲಿ: ಅಮೇರಿಕಾ-ಇರಾನ್‌ ಯುದ್ಧದ ಹೊರತಾಗಿಯೂ ಏಪ್ರಿಲ್.‌2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ…

5 hours ago