ಮೈಸೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮೈಸೂರು ನಗರದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯದಲ್ಲಿ ಕೊಂಚ ಹೆಚ್ಚಳವಾಗಿದೆ.
ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಅಳೆಯಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಮೈಸೂರಿನ ಹೆಬ್ಬಾಳ್ನಲ್ಲಿರುವ ಮಂಡಳಿಯ ಕಚೇರಿ ಆವರಣ ಹಾಗೂ ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದ ಬಳಿ ಮಾಪನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಎರಡೂ ಮಾಪನ ಕೇಂದ್ರಗಳಲ್ಲಿ ದೀಪಾವಳಿ ಹಬ್ಬದ ಪೂರ್ವದಲ್ಲಿ ಅ.೧೮ರಂದು ಮತ್ತು ದೀಪಾವಳಿ ಹಬ್ಬದ ವೇಳೆ ನ.೨೪ ರಿಂದ ೨೬ರವರೆಗೆ ಮೂರು ದಿನಗಳ ಕಾಲ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯವನ್ನು ಅಳೆಯಲಾಗಿದೆ.
ಹೆಬ್ಬಾಳ್ ಮಾಪನ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಪೂರ್ವದಲ್ಲಿ ೨೦೨೧ರಲ್ಲಿ ವಾಯು ಮಾಲಿನ್ಯ ಪ್ರಮಾಣ ೩೪ ಪಾಯಿಂಟ್ ದಾಖಲಾಗಿದ್ದರೆ, ಹಬ್ಬದ ಮೂರು ದಿನಗಳ ಕಾಲ ೩೫, ೫೩ ಹಾಗೂ ೭೨ ಪಾಯಿಂಟ್ ದಾಖಲಾಗಿತ್ತು. ಈ ವರ್ಷ ಹಬ್ಬದ ಪೂರ್ವದಲ್ಲಿ ೪೪ ಪಾಯಿಂಟ್ ಇದ್ದ ಮಾಲಿನ್ಯದ ಪ್ರಮಾಣ ಹಬ್ಬದ ಮೂರು ದಿನಗಳಲ್ಲಿ ಕ್ರಮವಾಗಿ ೬೪, ೭೧ ಹಾಗೂ ಹಬ್ಬದ ದಿನ ಗರಿಷ್ಠ ೧೧೭ ಪಾಯಿಂಟ್ ಮಾಲಿನ್ಯ ಪ್ರಮಾಣ ದಾಖಲಾಗಿದೆ.
ಶಬ್ದ ಮಾಲಿನ್ಯ ೨೦೨೧ರಲ್ಲಿ ದೀಪಾವಳಿ ಹಬ್ಬದ ಪೂರ್ವದಲ್ಲಿ ೬೬ ಪಾಯಿಂಟ್ ದಾಖಲಾಗಿದ್ದರೆ, ಹಬ್ಬದ ಮೂರು ದಿನಗಳಲ್ಲಿ ೬೫, ೬೪ ಹಾಗೂ ೬೯ ಪಾಯಿಂಟ್, ಈ ವರ್ಷ ಹಬ್ಬದ ಪೂರ್ವ ಅ.೧೮ರಂದು ೬೧ ಪಾಯಿಂಟ್ ಇದ್ದ ಮಾಲಿನ್ಯ ಪ್ರಮಾಣ ಹಬ್ಬದ ಮೂರು ದಿನಗಳಲ್ಲಿ ೬೫ ಮತ್ತು ಮೂರನೇ ದಿನ ೭೪ ಪಾಯಿಂಟ್ ದಾಖಲಾಗಿದೆ.
ಮೂರು ದಿನಗಳ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯದಲ್ಲಿ ಮೈಸೂರು ರಾಜ್ಯದಲ್ಲಿ ೧೯ನೇ ಸ್ಥಾನದಲ್ಲಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶಬ್ದ ಮಾಲಿನ್ಯ ಶೇ.೧೬.೫ರಷ್ಟಿದೆ, ವಾಯು ಮಾಲಿನ್ಯ ಶೇ.೫೩ರಷ್ಟು ಹೆಚ್ಚಳವಾಗಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಗಣೇಶ್ ತಿಳಿಸಿದ್ದಾರೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…