ಜಿಲ್ಲೆಗಳು

ಸಚಿವ ಅಶ್ವಥ್‌ ನಾರಾಯಣ್‌ ಬಂಧನಕ್ಕೆ ಡಿಕೆಶಿ ಆಗ್ರಹ

ಹನೂರು : ಸಚಿವ ಅಶ್ಚಥ್ ನಾರಾಯಣ್ ಎಲ್ಲಿ ಕೊಲೆ ಪ್ರಚೋದನೆ ಹೇಳಿಕೆ ಕೊಟ್ಟರೋ ಅಲ್ಲೇ ಕೇಸ್ ದಾಖಲಾಗಿ, ಅವರನ್ನು ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು.

ಹನೂರು ಪಟ್ಟಣದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಅಶ್ವತ್ಥ್ ನಾರಾಯಣ ಓರ್ವ ಮಂತ್ರಿಯಾಗಿ ಮಾಜಿ ಸಿಎಂರನ್ನು ಕೊಲೆ ಮಾಡುವ ಪ್ರಚೋದನೆ ಕೊಟ್ಟಿದ್ದಾರೆ. ಕ್ಷಮಾಪಣೆ ಕೇಳುವುದೆಲ್ಲಾ ಬೇಡ, ಭಾರತದ ಕಾನೂನು ಏನಿದೆ ಅದನ್ನು ರಾಜ್ಯ ಸರ್ಕಾರ ಪ್ರಯೋಗ ಮಾಡಲಿ ಎಂದು ಒತ್ತಾಯಿಸಿದರು. ಅಶ್ಚಥ್ ನಾರಾಯಣ ಹೇಳಿಕೆಗೆ ಮುಂದೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ, ಆತ ಅರೆಸ್ಟ್ ಆಗದಿದ್ದರೇ ಪೊಲೀಸ್ ಅಧಿಕಾರಿಗಳು ಕೂಡ ಹೊಣೆ, ಅವರು ರಿಟೈರ್ ಆದರೂ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಟಿಪ್ಪುವನ್ನು ಯಾರೋ ಗೌಡ ಕೊಂದ ಅಂಥಾ ಹೇಳುತ್ತಿದ್ದಾರೆ, ಅವರು ಯಾವ ಇತಿಹಾಸ ಹೇಳುತ್ತಿದ್ದಾರೋ ಗೊತ್ತಿಲ್ಲ ಎಂದು ಬಿಜೆಪಿಗರ ಟಿಪ್ಪು ಕೊಂದ ಹೇಳಿಕೆಗೆ ಕಿಡಿಕಾರಿದರು.

ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಪ್ರತಿಕ್ರಿಯಿಸಿ, ಸಂಸದ ಪ್ರತಾಪ್ ಸಿಂಹ ಹೇಳ್ತಾರೆ ಕುಲಪತಿಯಾಗಲು 15-20 ಕೋಟಿ ಕೊಡಬೇಕು ಅಂಥಾ,,ಪಿಎಸ್ಐ ಪ್ರಶ್ನೆ ಪತ್ರಿಕೆಗಳು ಲೀಕ್ ಆಗುತ್ತದೆ ಸರ್ಕಾರದ ಆಡಳಿತ ವೈಫಲ್ಯದಿಂದ ಎಲ್ಲಾ ಆಗುತ್ತಿದೆ, ಪ್ರಶ್ನೆ ಪತ್ರಿಕೆ ಸೋರಿಕೆಗೂ ಸರ್ಕಾರ ಕಾರಣ ಎಂದರು‌.‌

ಸರ್ಕಾರದ ಆಡಳಿತ ವೈಫಲ್ಯದಿಂದ, ಕೋಮು ಗಲಭೆ, ಸಂಘರ್ಷದಿಂದ ಯಾವ ಉದ್ಯಮಿಯೂ ರಾಜ್ಯ ಸರ್ಕಾರದಲ್ಲಿ ಹೂಡಿಕೆ ಮಾಡಲು ಮನಸ್ಸು ಮಾಡುತ್ತಿಲ್ಲ, ಎಲ್ಲರೂ ತಮಿಳುನಾಡು, ಆಂಧ್ರಗೆ ಹೋಗುತ್ತಿದ್ದಾರೆ ಎಂದರು.

andolanait

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

43 mins ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

3 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

3 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

3 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

4 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

4 hours ago