ಜಿಲ್ಲೆಗಳು

ಸಚಿವ ಅಶ್ವಥ್‌ ನಾರಾಯಣ್‌ ಬಂಧನಕ್ಕೆ ಡಿಕೆಶಿ ಆಗ್ರಹ

ಹನೂರು : ಸಚಿವ ಅಶ್ಚಥ್ ನಾರಾಯಣ್ ಎಲ್ಲಿ ಕೊಲೆ ಪ್ರಚೋದನೆ ಹೇಳಿಕೆ ಕೊಟ್ಟರೋ ಅಲ್ಲೇ ಕೇಸ್ ದಾಖಲಾಗಿ, ಅವರನ್ನು ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು.

ಹನೂರು ಪಟ್ಟಣದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಅಶ್ವತ್ಥ್ ನಾರಾಯಣ ಓರ್ವ ಮಂತ್ರಿಯಾಗಿ ಮಾಜಿ ಸಿಎಂರನ್ನು ಕೊಲೆ ಮಾಡುವ ಪ್ರಚೋದನೆ ಕೊಟ್ಟಿದ್ದಾರೆ. ಕ್ಷಮಾಪಣೆ ಕೇಳುವುದೆಲ್ಲಾ ಬೇಡ, ಭಾರತದ ಕಾನೂನು ಏನಿದೆ ಅದನ್ನು ರಾಜ್ಯ ಸರ್ಕಾರ ಪ್ರಯೋಗ ಮಾಡಲಿ ಎಂದು ಒತ್ತಾಯಿಸಿದರು. ಅಶ್ಚಥ್ ನಾರಾಯಣ ಹೇಳಿಕೆಗೆ ಮುಂದೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ, ಆತ ಅರೆಸ್ಟ್ ಆಗದಿದ್ದರೇ ಪೊಲೀಸ್ ಅಧಿಕಾರಿಗಳು ಕೂಡ ಹೊಣೆ, ಅವರು ರಿಟೈರ್ ಆದರೂ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಟಿಪ್ಪುವನ್ನು ಯಾರೋ ಗೌಡ ಕೊಂದ ಅಂಥಾ ಹೇಳುತ್ತಿದ್ದಾರೆ, ಅವರು ಯಾವ ಇತಿಹಾಸ ಹೇಳುತ್ತಿದ್ದಾರೋ ಗೊತ್ತಿಲ್ಲ ಎಂದು ಬಿಜೆಪಿಗರ ಟಿಪ್ಪು ಕೊಂದ ಹೇಳಿಕೆಗೆ ಕಿಡಿಕಾರಿದರು.

ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಪ್ರತಿಕ್ರಿಯಿಸಿ, ಸಂಸದ ಪ್ರತಾಪ್ ಸಿಂಹ ಹೇಳ್ತಾರೆ ಕುಲಪತಿಯಾಗಲು 15-20 ಕೋಟಿ ಕೊಡಬೇಕು ಅಂಥಾ,,ಪಿಎಸ್ಐ ಪ್ರಶ್ನೆ ಪತ್ರಿಕೆಗಳು ಲೀಕ್ ಆಗುತ್ತದೆ ಸರ್ಕಾರದ ಆಡಳಿತ ವೈಫಲ್ಯದಿಂದ ಎಲ್ಲಾ ಆಗುತ್ತಿದೆ, ಪ್ರಶ್ನೆ ಪತ್ರಿಕೆ ಸೋರಿಕೆಗೂ ಸರ್ಕಾರ ಕಾರಣ ಎಂದರು‌.‌

ಸರ್ಕಾರದ ಆಡಳಿತ ವೈಫಲ್ಯದಿಂದ, ಕೋಮು ಗಲಭೆ, ಸಂಘರ್ಷದಿಂದ ಯಾವ ಉದ್ಯಮಿಯೂ ರಾಜ್ಯ ಸರ್ಕಾರದಲ್ಲಿ ಹೂಡಿಕೆ ಮಾಡಲು ಮನಸ್ಸು ಮಾಡುತ್ತಿಲ್ಲ, ಎಲ್ಲರೂ ತಮಿಳುನಾಡು, ಆಂಧ್ರಗೆ ಹೋಗುತ್ತಿದ್ದಾರೆ ಎಂದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago