ಜಿಲ್ಲೆಗಳು

ಸಚಿವ ಅಶ್ವಥ್‌ ನಾರಾಯಣ್‌ ಬಂಧನಕ್ಕೆ ಡಿಕೆಶಿ ಆಗ್ರಹ

ಹನೂರು : ಸಚಿವ ಅಶ್ಚಥ್ ನಾರಾಯಣ್ ಎಲ್ಲಿ ಕೊಲೆ ಪ್ರಚೋದನೆ ಹೇಳಿಕೆ ಕೊಟ್ಟರೋ ಅಲ್ಲೇ ಕೇಸ್ ದಾಖಲಾಗಿ, ಅವರನ್ನು ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು.

ಹನೂರು ಪಟ್ಟಣದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಅಶ್ವತ್ಥ್ ನಾರಾಯಣ ಓರ್ವ ಮಂತ್ರಿಯಾಗಿ ಮಾಜಿ ಸಿಎಂರನ್ನು ಕೊಲೆ ಮಾಡುವ ಪ್ರಚೋದನೆ ಕೊಟ್ಟಿದ್ದಾರೆ. ಕ್ಷಮಾಪಣೆ ಕೇಳುವುದೆಲ್ಲಾ ಬೇಡ, ಭಾರತದ ಕಾನೂನು ಏನಿದೆ ಅದನ್ನು ರಾಜ್ಯ ಸರ್ಕಾರ ಪ್ರಯೋಗ ಮಾಡಲಿ ಎಂದು ಒತ್ತಾಯಿಸಿದರು. ಅಶ್ಚಥ್ ನಾರಾಯಣ ಹೇಳಿಕೆಗೆ ಮುಂದೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ, ಆತ ಅರೆಸ್ಟ್ ಆಗದಿದ್ದರೇ ಪೊಲೀಸ್ ಅಧಿಕಾರಿಗಳು ಕೂಡ ಹೊಣೆ, ಅವರು ರಿಟೈರ್ ಆದರೂ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಟಿಪ್ಪುವನ್ನು ಯಾರೋ ಗೌಡ ಕೊಂದ ಅಂಥಾ ಹೇಳುತ್ತಿದ್ದಾರೆ, ಅವರು ಯಾವ ಇತಿಹಾಸ ಹೇಳುತ್ತಿದ್ದಾರೋ ಗೊತ್ತಿಲ್ಲ ಎಂದು ಬಿಜೆಪಿಗರ ಟಿಪ್ಪು ಕೊಂದ ಹೇಳಿಕೆಗೆ ಕಿಡಿಕಾರಿದರು.

ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಪ್ರತಿಕ್ರಿಯಿಸಿ, ಸಂಸದ ಪ್ರತಾಪ್ ಸಿಂಹ ಹೇಳ್ತಾರೆ ಕುಲಪತಿಯಾಗಲು 15-20 ಕೋಟಿ ಕೊಡಬೇಕು ಅಂಥಾ,,ಪಿಎಸ್ಐ ಪ್ರಶ್ನೆ ಪತ್ರಿಕೆಗಳು ಲೀಕ್ ಆಗುತ್ತದೆ ಸರ್ಕಾರದ ಆಡಳಿತ ವೈಫಲ್ಯದಿಂದ ಎಲ್ಲಾ ಆಗುತ್ತಿದೆ, ಪ್ರಶ್ನೆ ಪತ್ರಿಕೆ ಸೋರಿಕೆಗೂ ಸರ್ಕಾರ ಕಾರಣ ಎಂದರು‌.‌

ಸರ್ಕಾರದ ಆಡಳಿತ ವೈಫಲ್ಯದಿಂದ, ಕೋಮು ಗಲಭೆ, ಸಂಘರ್ಷದಿಂದ ಯಾವ ಉದ್ಯಮಿಯೂ ರಾಜ್ಯ ಸರ್ಕಾರದಲ್ಲಿ ಹೂಡಿಕೆ ಮಾಡಲು ಮನಸ್ಸು ಮಾಡುತ್ತಿಲ್ಲ, ಎಲ್ಲರೂ ತಮಿಳುನಾಡು, ಆಂಧ್ರಗೆ ಹೋಗುತ್ತಿದ್ದಾರೆ ಎಂದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago