ಜಿಲ್ಲೆಗಳು

ಸಚಿವ ಅಶ್ವಥ್‌ ನಾರಾಯಣ್‌ ಬಂಧನಕ್ಕೆ ಡಿಕೆಶಿ ಆಗ್ರಹ

ಹನೂರು : ಸಚಿವ ಅಶ್ಚಥ್ ನಾರಾಯಣ್ ಎಲ್ಲಿ ಕೊಲೆ ಪ್ರಚೋದನೆ ಹೇಳಿಕೆ ಕೊಟ್ಟರೋ ಅಲ್ಲೇ ಕೇಸ್ ದಾಖಲಾಗಿ, ಅವರನ್ನು ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು.

ಹನೂರು ಪಟ್ಟಣದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಅಶ್ವತ್ಥ್ ನಾರಾಯಣ ಓರ್ವ ಮಂತ್ರಿಯಾಗಿ ಮಾಜಿ ಸಿಎಂರನ್ನು ಕೊಲೆ ಮಾಡುವ ಪ್ರಚೋದನೆ ಕೊಟ್ಟಿದ್ದಾರೆ. ಕ್ಷಮಾಪಣೆ ಕೇಳುವುದೆಲ್ಲಾ ಬೇಡ, ಭಾರತದ ಕಾನೂನು ಏನಿದೆ ಅದನ್ನು ರಾಜ್ಯ ಸರ್ಕಾರ ಪ್ರಯೋಗ ಮಾಡಲಿ ಎಂದು ಒತ್ತಾಯಿಸಿದರು. ಅಶ್ಚಥ್ ನಾರಾಯಣ ಹೇಳಿಕೆಗೆ ಮುಂದೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ, ಆತ ಅರೆಸ್ಟ್ ಆಗದಿದ್ದರೇ ಪೊಲೀಸ್ ಅಧಿಕಾರಿಗಳು ಕೂಡ ಹೊಣೆ, ಅವರು ರಿಟೈರ್ ಆದರೂ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಟಿಪ್ಪುವನ್ನು ಯಾರೋ ಗೌಡ ಕೊಂದ ಅಂಥಾ ಹೇಳುತ್ತಿದ್ದಾರೆ, ಅವರು ಯಾವ ಇತಿಹಾಸ ಹೇಳುತ್ತಿದ್ದಾರೋ ಗೊತ್ತಿಲ್ಲ ಎಂದು ಬಿಜೆಪಿಗರ ಟಿಪ್ಪು ಕೊಂದ ಹೇಳಿಕೆಗೆ ಕಿಡಿಕಾರಿದರು.

ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಪ್ರತಿಕ್ರಿಯಿಸಿ, ಸಂಸದ ಪ್ರತಾಪ್ ಸಿಂಹ ಹೇಳ್ತಾರೆ ಕುಲಪತಿಯಾಗಲು 15-20 ಕೋಟಿ ಕೊಡಬೇಕು ಅಂಥಾ,,ಪಿಎಸ್ಐ ಪ್ರಶ್ನೆ ಪತ್ರಿಕೆಗಳು ಲೀಕ್ ಆಗುತ್ತದೆ ಸರ್ಕಾರದ ಆಡಳಿತ ವೈಫಲ್ಯದಿಂದ ಎಲ್ಲಾ ಆಗುತ್ತಿದೆ, ಪ್ರಶ್ನೆ ಪತ್ರಿಕೆ ಸೋರಿಕೆಗೂ ಸರ್ಕಾರ ಕಾರಣ ಎಂದರು‌.‌

ಸರ್ಕಾರದ ಆಡಳಿತ ವೈಫಲ್ಯದಿಂದ, ಕೋಮು ಗಲಭೆ, ಸಂಘರ್ಷದಿಂದ ಯಾವ ಉದ್ಯಮಿಯೂ ರಾಜ್ಯ ಸರ್ಕಾರದಲ್ಲಿ ಹೂಡಿಕೆ ಮಾಡಲು ಮನಸ್ಸು ಮಾಡುತ್ತಿಲ್ಲ, ಎಲ್ಲರೂ ತಮಿಳುನಾಡು, ಆಂಧ್ರಗೆ ಹೋಗುತ್ತಿದ್ದಾರೆ ಎಂದರು.

andolanait

Recent Posts

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

3 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

10 mins ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

16 mins ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

23 mins ago

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

14 hours ago