ಜಿಲ್ಲೆಗಳು

ಸಚಿವ ಅಶ್ವಥ್‌ ನಾರಾಯಣ್‌ ಬಂಧನಕ್ಕೆ ಡಿಕೆಶಿ ಆಗ್ರಹ

ಹನೂರು : ಸಚಿವ ಅಶ್ಚಥ್ ನಾರಾಯಣ್ ಎಲ್ಲಿ ಕೊಲೆ ಪ್ರಚೋದನೆ ಹೇಳಿಕೆ ಕೊಟ್ಟರೋ ಅಲ್ಲೇ ಕೇಸ್ ದಾಖಲಾಗಿ, ಅವರನ್ನು ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು.

ಹನೂರು ಪಟ್ಟಣದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಅಶ್ವತ್ಥ್ ನಾರಾಯಣ ಓರ್ವ ಮಂತ್ರಿಯಾಗಿ ಮಾಜಿ ಸಿಎಂರನ್ನು ಕೊಲೆ ಮಾಡುವ ಪ್ರಚೋದನೆ ಕೊಟ್ಟಿದ್ದಾರೆ. ಕ್ಷಮಾಪಣೆ ಕೇಳುವುದೆಲ್ಲಾ ಬೇಡ, ಭಾರತದ ಕಾನೂನು ಏನಿದೆ ಅದನ್ನು ರಾಜ್ಯ ಸರ್ಕಾರ ಪ್ರಯೋಗ ಮಾಡಲಿ ಎಂದು ಒತ್ತಾಯಿಸಿದರು. ಅಶ್ಚಥ್ ನಾರಾಯಣ ಹೇಳಿಕೆಗೆ ಮುಂದೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ, ಆತ ಅರೆಸ್ಟ್ ಆಗದಿದ್ದರೇ ಪೊಲೀಸ್ ಅಧಿಕಾರಿಗಳು ಕೂಡ ಹೊಣೆ, ಅವರು ರಿಟೈರ್ ಆದರೂ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಟಿಪ್ಪುವನ್ನು ಯಾರೋ ಗೌಡ ಕೊಂದ ಅಂಥಾ ಹೇಳುತ್ತಿದ್ದಾರೆ, ಅವರು ಯಾವ ಇತಿಹಾಸ ಹೇಳುತ್ತಿದ್ದಾರೋ ಗೊತ್ತಿಲ್ಲ ಎಂದು ಬಿಜೆಪಿಗರ ಟಿಪ್ಪು ಕೊಂದ ಹೇಳಿಕೆಗೆ ಕಿಡಿಕಾರಿದರು.

ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಪ್ರತಿಕ್ರಿಯಿಸಿ, ಸಂಸದ ಪ್ರತಾಪ್ ಸಿಂಹ ಹೇಳ್ತಾರೆ ಕುಲಪತಿಯಾಗಲು 15-20 ಕೋಟಿ ಕೊಡಬೇಕು ಅಂಥಾ,,ಪಿಎಸ್ಐ ಪ್ರಶ್ನೆ ಪತ್ರಿಕೆಗಳು ಲೀಕ್ ಆಗುತ್ತದೆ ಸರ್ಕಾರದ ಆಡಳಿತ ವೈಫಲ್ಯದಿಂದ ಎಲ್ಲಾ ಆಗುತ್ತಿದೆ, ಪ್ರಶ್ನೆ ಪತ್ರಿಕೆ ಸೋರಿಕೆಗೂ ಸರ್ಕಾರ ಕಾರಣ ಎಂದರು‌.‌

ಸರ್ಕಾರದ ಆಡಳಿತ ವೈಫಲ್ಯದಿಂದ, ಕೋಮು ಗಲಭೆ, ಸಂಘರ್ಷದಿಂದ ಯಾವ ಉದ್ಯಮಿಯೂ ರಾಜ್ಯ ಸರ್ಕಾರದಲ್ಲಿ ಹೂಡಿಕೆ ಮಾಡಲು ಮನಸ್ಸು ಮಾಡುತ್ತಿಲ್ಲ, ಎಲ್ಲರೂ ತಮಿಳುನಾಡು, ಆಂಧ್ರಗೆ ಹೋಗುತ್ತಿದ್ದಾರೆ ಎಂದರು.

andolanait

Recent Posts

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

30 seconds ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

10 mins ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

32 mins ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

43 mins ago

ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಕಳ್ಳನನ್ನು ಹಿಡಿಯಲು ಹೋದ ಜನರಿಗೆ ಚಾಕು ತೋರಿಸಿ ಪರಾರಿಯಾಗಿರುವ ಘಟನೆ…

1 hour ago

ವಿನಯ್‌ ಕುಲಕರ್ಣಿ ಮೇಲ್ಮನವಿ ಅರ್ಜಿ ವಿಚಾರಣೆ ಸ್ವೀಕರಿಸಿದ ಹೈಕೋರ್ಟ್‌

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಶಾಸಕ…

1 hour ago